Breaking News

ಬೆಂಗಳೂರು

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು …

Read More »

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ‌ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಬಿ.ವಿ. ನಾಗರತ್ನ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಕೊಲಿಜಿಯಂ ಮೇ 26ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು. ಇದೇ ವೇಳೆ ಗೌಹಟಿ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ವಿಜಯ್ ಬಿಶ್ಣೋಯಿ ಮತ್ತು ಬಾಂಬೆ ಹೈಕೋರ್ಟ್​ನ …

Read More »

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು… *ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. *ಸದ್ಯಕ್ಕೆ ಆತಂಕ ಪಡುವ …

Read More »

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ

ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ …

Read More »

ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಕೋವಿಡ್ ಬಗ್ಗೆ ಸಭೆಯಲ್ಲಿ ಏನೆಲ್ಲಾ ಆಯ್ತು? ಇಲ್ಲಿದೆ ವಿವರ

ಬೆಂಗಳೂರು, (ಮೇ 26): ಕರ್ನಾಟಕದಲ್ಲಿ ಕೊವಿಡ್ (Covid) ನಿಯಂತ್ರಣ ಸಂಬಂಧ ಇಂದು (ಮೇ 26) ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ನೇತೃತ್ವದಲ್ಲಿ ನಡೆ ಸಭೆ ಅಂತ್ಯವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್​ ಸಹಾಯವಾಣಿ​​ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ …

Read More »

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಗಿಂತ ಕೆಟ್ಟದಾಗಿ ವರ್ತಿಸುತ್ತಿದೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಕಾಂಗ್ರೆಸ್ ಜನರ ಧ್ವನಿಯನ್ನು ಅಡಗಿಸುತ್ತಿದೆ. ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಂತರ ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಈ ಪ್ರತಿಕ್ರಿಯೆ ನೀಡಿದ್ದಾರೆ. “ರಾಜ್ಯ ಸರ್ಕಾರದ ಎರಡು ವರ್ಷಗಳ ವೈಫಲ್ಯದ ಬಗ್ಗೆ ಚಾರ್ಜ್‌ಶೀಟ್” ಎಂಬ ಶೀರ್ಷಿಕೆಯಡಿಯಲ್ಲಿ ದೃಶ್ಯ ಮಾಧ್ಯಮ …

Read More »

ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕೆಎಸ್​ಡಿಎಲ್ ಸಂಸ್ಥೆಯ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್​ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡದ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ.ಪಾಟೀಲ್ ಕಿಡಿ ಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಎರಡು …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ಹತ್ತು ಸಾವಿರ ಲಂಚ ಸ್ವೀಕಾರ: ಮುಖ್ಯ ಪೇದೆಗೆ ವಿಧಿಸಿದ್ದ 7 ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 7 ವರ್ಷ ಶಿಕ್ಷೆ ಮತ್ತು 1 ಲಕ್ಷ ರು.ಗಳ ದಂಡದ ಆದೇಶವನ್ನು ರದ್ದುಗೊಳಿಸುವಂತೆ …

Read More »

ಇಂದು ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್​ಗಳ ಮೂಲಕ ಮಧ್ಯಾಹ್ನ 2 ಗಂಟೆ ಬಳಿಕ ರಿಸಲ್ಟ್ ನೋಡಿ

ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ. ಕೆಇಎ ಕಚೇರಿಯಲ್ಲಿ ಬೆಳಗ್ಗೆ ಕರೆಯಲಾದ ಮಾಧ್ಯಮ ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ …

Read More »