ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್ ರಾಜ್ಕುಮಾರ್ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.
Read More »ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ …
Read More »4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಎನ್ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …
Read More »ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ
ಬೆಂಗಳೂರು,ಅ.29- ಇಂದು ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ತಂದೆ ವರನಟ ಡಾ.ರಾಜ್ಕುಮಾರ್ ಅವರು ನಿಧನರಾದಾಗ ಅವರ ನೇತ್ರಗಳನ್ನು ಕೂಡ ದಾನ ಮಾಡಲಾಗಿತ್ತು. ಆ ಸಂದರ್ಭದಲ್ಲೇ ತಮ್ಮ ನೇತ್ರಗಳನ್ನು ದಾನ ಮಾಡುವ ಸಹಮತಕ್ಕೆ ಸಹಿ ಹಾಕಿದ್ದರು. ಅದರಂತೆ ಇಂದು ಅಪ್ಪು ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಡಾ.ರಾಜ್ ಅವರು ಮೃತಪಟ್ಟ ನಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದರು. ಈಗ …
Read More »ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು
ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಸುಖಾಸುಮ್ಮನೆ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆ, ಜಾಥಾಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಕರ್ನಾಟಕ ಪೊಲೀಸ್ ಌಕ್ಟ್ ಅಡಿ ನಿಬಂಧನೆ ವಿಧಿಸಲು ಸಿದ್ಧತೆ ನಡೆಸಿದೆ. ಸರ್ಕಾರದಿಂದ ಅನುಮೋದನೆ ಪಡೆಯಲು ನಗರ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದ್ದು, ಯಾವುದೇ ಪ್ರತಿಭಟನೆಗೆ ಕೇವಲ …
Read More »BREAKING ಮತ್ತೆ ಏರಿದ ಪೆಟ್ರೋಲ್ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?
ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ …
Read More »ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2
ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ಇಂದು 375 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಜರಂಗಿ ಹವಾ ಕ್ರಿಯೆಟ್ ಮಾಡಲಿದೆ. ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಬೆಳಗ್ಗೆ 5 ಗಂಟೆಗೆ ಅಭಿಮಾನಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ಗಾಗಿ ತುದಿಗಾಲಲ್ಲಿ ಅಭಿಮಾನಿಗಳು ನಿಂತಿದ್ದರು. ತೆರೆ ಮೇಲೆ ಶಿವಣ್ಣನನ್ನ ನೋಡುತಿದ್ದಂತೆ ಹುಚ್ಚೆದ್ದು ಕುಣಿದ ಅಭಿಮಾನಿಗಳು, ಸ್ಕ್ರೀನ್ ಮುಂದೆ ಹೂ ಎರಚಿ …
Read More »‘ಕಂಬಳಿ ಫೈಟ್’ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …
Read More »ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …
Read More »ಹಾನಗಲ್ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ
ಬೆಂಗಳೂರು: ಹಾನಗಲ್ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬಿಎಸ್ವೈ …
Read More »