Breaking News
Home / ಜಿಲ್ಲೆ / ಬೆಂಗಳೂರು (page 81)

ಬೆಂಗಳೂರು

ಬ್ಲಾಕ್‍ಮೇಲ್‍ಗಳಿಗೆ ಜಗ್ಗಬೇಡಿ, ಸಿಎಂಗೆ ಹೈಕಮಾಂಡ್ ಅಭಯ

ಬೆಂಗಳೂರು,ಆ.12- ಸಚಿವರು ಮತ್ತು ಶಾಸಕರ ಬ್ಲಾಕ್‍ಮೇಲ್‍ಗಳಿಗೆ ಯಾವುದೇ ಕಾರಣಕ್ಕೂ ಜಗ್ಗಬಾರದು. ಎಂಥದೇ ಪರಿಸ್ಥಿತಿ ಎದುರಾದರೂ ನಾವು ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಉಳಿದಿರುವ ಅವಧಿಯಲ್ಲಿ ಆಡಳಿತದ ಕಡೆ ಹೆಚ್ಚು ಗಮನಹರಿಸಿ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. 2023ರ ಚುನಾವಣೆಯಲ್ಲಿ ಪಕ್ಷವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂದು ಸೂಚಿಸಿದ್ದಾರೆ. ನಿರೀಕ್ಷಿತ ಖಾತೆ ಸಿಗದೆ ಅಸಮಾಧಾನಗೊಂಡು ಕ್ಯಾತೆ ತೆಗೆದಿದ್ದ ಆನಂದ್ ಸಿಂಗ್ …

Read More »

ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಆನಂದ್ ಸಿಂಗ್ ಹಾಗೂ ಶಾಸಕ ರಾಜೂಗೌಡ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹಂಚಿಕೆ ಮಾಡಿರುವ ಖಾತೆಯ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಬಿಎಸ್ವೈ ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ಆನಂದ್ ಸಿಂಗ್ ತೆರಳಿದ್ದಾರೆ. ಈ ಮಧ್ಯೆ ಯಡಿಯೂರಪ್ಪ ಆಪ್ತ ರಾಜೂಗೌಡ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅವರನ್ನು ಬೆಂಗಳೂರಿಗೆ ಕರೆತರಲು ಯಶಸ್ವಿ ಆಗಿದ್ದಾರೆ. …

Read More »

ವಾಹನ ಸವಾರರೇ ಎಚ್ಚರ! ಇನ್ಮುಂದೆ ಹೈವೇನಲ್ಲಿ ಸ್ಪೀಡ್​​ ಆಗಿ ಓಡಿಸಿದ್ರೆ ಬೀಳುತ್ತೇ ಭಾರೀ ದಂಡ

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮರಾಗಳ ಅಳವಡಿಕೆಗೆ ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ. ಹೀಗಾಗಿ ಕರ್ನಾಟಕದ ಎಲ್ಲಾ ಹೆದ್ದಾರಿಗಳಲ್ಲೂ ಸಾರಿಗೆ ಇಲಾಖೆ ಕ್ಯಾಮರಾ ಅಳವಡಿಕೆ ಅಗತ್ಯ ತಯಾರಿ ನಡೆಸಿಕೊಂಡಿದೆ. ಇನ್ಮುಂದೆ ಒಂದು ವೇಳೆ ಸವಾರರು ಅಗತ್ಯಕ್ಕಿಂತ ವೇಗವಾಗಿ ವಾಹನ ಚಲಾಯಿಸಿದರೆ ದಂಡ ತೆರಲೇಬೇಕಾಗುತ್ತದೆ. ಹೌದು, ವಾಹನ ಸವಾರರು ಇನ್ಮುಂದೆ ಎಚ್ಚರಿಕೆಯಿಂದ ಇರಲೇಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪೀಡ್​​ ಆಗಿ ವಾಹನ ಓಡಿಸುವ ಮುನ್ನ ಎರಡು ಬಾರಿ …

Read More »

ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ಸುಟ್ಟು ಹಾಕಿದ ಘಟನೆ ಬುಧವರಾ ತಡರಾತ್ರಿ ನಡೆದಿದೆ. ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ​ಗಳನ್ನ ತಂದು ಬೆಂಕಿ …

Read More »

2 ನಾಡ ಪಿಸ್ತೂಲು, 5 ಜೀವಂತ ಗುಂಡು ವಶ : ನಾಲ್ವರ ಬಂಧನ

ಬೆಂಗಳೂರು,ಆ.11-ಬಿಹಾರ ರಾಜ್ಯದಿಂದ ಅಕ್ರಮವಾಗಿ ನಾಡಪಿಸ್ತೂಲುಗಳನ್ನು ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಅಶೋಕನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡು ನಾಡಪಿಸ್ತೂಲು, 5 ಜೀವಂತ ಗುಂಡುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸೋನುಕುಮಾರ್(32), ಸುನೀಲ್‍ಕುಮಾರ್(32), ಇರ್ಫಾನ್(26) ಮತ್ತು ಆಂಧ್ರ ಪ್ರದೇಶದ ಮುರುಳಿ ವಿನೋದ್(47) ಬಂಧಿತ ಆರೋಪಿಗಳು. ಆಗಸ್ಟ್ 7ರಂದು ಹೊಸೂರು ರಸ್ತೆಯ ಸಿಮೆಂಟ್ರಿ ರಸ್ತೆಯಲ್ಲಿರುವ ಹಿಂದೂ ಸಿಮೆಂಟ್ರಿ ಬಳಿ ಮೂವರು ಯಾವುದೇ ಪರವಾನಗಿ ಇಲ್ಲದೆ ನಾಡಪಿಸ್ತೂಲಗಳನ್ನಿಟ್ಟುಕೊಂಡು …

Read More »

ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22,851 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ. ಇವತ್ತು 1,67,237 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿಂದು 377 ಜನರಿಗೆ ಸೋಂಕು ತಗುಲಿದೆ. 280 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 8290 …

Read More »

ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ

ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.‌ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ …

Read More »

ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ) ಬೃಹತ್ ಪ್ರತಿಭಟನೆಯನ್ನು …

Read More »

ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …

Read More »

ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು

ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ‌ಮಾಡುತ್ತೇನೆ. ಜನಪರವಾದ ಕೆಲಸ ‌ಮಾಡಬೇಕು. …

Read More »