Breaking News

ಬೆಂಗಳೂರು

ಅನುಶ್ರೀ ಹೇರ್ ಟೆಸ್ಟ್ ಏಕೆ ಮಾಡಿಸಿಲ್ಲ : ಇಂದ್ರಜೀತ್ ಲಂಕೇಶ್

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿದಂತೆ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸ್ಕ್ಯಾಂಡಲ್ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸಿಸಿಬಿ ಸಿದ್ಧಪಡಿಸಿರುವ ಚಾರ್ಜ್ ಶೀಟ್ ನಲ್ಲಿ ನಿರೂಪಕಿ ಅನುಶ್ರೀ ಅವರು ಹೆಸರು ಉಲ್ಲೇಖಿಸಿರುವುದು ಬೆಳಕಿಗೆ ಬರುತ್ತಿದ್ದಂತೆ ಮಾಧ್ಯಮಗೋಷ್ಠಿ ನಡೆಸಿದ ಲಂಕೇಶ್ ಸಾಕಷ್ಟು ವಿಚಾರಗಳನ್ನು ಹೊರಹಾಕಿದರು. ಲಂಕೇಶ್ ಹೇಳಿದ್ದಿಷ್ಟು : “ಕರ್ನಾಟಕದ ಡ್ರಗ್ಸ್ ಜಾಲದ …

Read More »

ರೈತರಿಗೆ ಶಾಕ್, ಪಂಪ್ಸೆಟ್ ಉಚಿತ ವಿದ್ಯುತ್ ಗೆ ಬ್ರೇಕ್..? ಗ್ಯಾಸ್ ಸಬ್ಸಿಡಿ ಮಾದರಿ ‘ಗಿವ್ ಇಟ್ ಅಪ್’ ಅಭಿಯಾನ.?

ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಬ್ಸಿಡಿ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ನಡೆಸಿದಂತೆಯೇ ವಿದ್ಯುತ್ ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೃಷಿ ನೀರಾವರಿ ಪಂಪ್ ಸೆಟ್ ಗಳ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ರೈತರು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ಅಭಿಯಾನ ಕೈಗೊಳ್ಳಲಾಗುತ್ತದೆ. ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವುದನ್ನು ನಿಲ್ಲಿಸಿದರೆ, ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತದೆ. ಹೀಗಾಗಿ ರೈತರೇ ಸ್ವಯಂ …

Read More »

ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಶೂಟಿಂಗ್​ ನಡುವೆ ತ್ರಿಶಾ ಕೃಷ್ಣನ್​ ದಾರ್ಮಿಕ ಸ್ಥಳದಲ್ಲಿ ಎಡವಟ್ಟೊಂದನ್ನು ಮಾಡಿದ್ದಾರೆ. ಚಿತ್ರೀಕರಣ ವೇಳೆ ಚಪ್ಪಲಿ ಹಾಕಿಕೊಂಡು ತ್ರಿಶಾ …

Read More »

ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, …

Read More »

ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ ಸೇರಿ ಕಲಬುರ್ಗಿ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಗೆ ತಿರುಮಂತ್ರ ಹಾಕಲು ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.   …

Read More »

ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ. ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿ ವೇಳೆ ಬಾರಿ ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ …

Read More »

ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್

ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, …

Read More »

ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ

ಬೆಂಗಳೂರು : ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು …

Read More »

ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫ‌ಲಿತಾಂಶ ಕಾಂಗ್ರೆಸ್‌ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ …

Read More »

ಬೆಳಗಾವಿಯಲ್ಲಿ ಅನಿರಿಕ್ಷಿತ ಫಲಿತಾಂಶ; ಪಾಲಿಕೆ ರಿಸಲ್ಟ್ ಮುಂಬರುವ ಚುನಾವಣೆ ದಿಕ್ಸೂಚಿಯಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ನಮಗಿಂತ ಹೆಚ್ಚಾಗಿ ಸಂಪನ್ಮೂಲಗಳೂ ಬಿಜೆಪಿಯವರಿಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಕೊಂಡಿರಲಿಲ್ಲ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನೂ ಅತಂತ್ರ ಸ್ಥಿತಿಯಿದೆ. …

Read More »