Breaking News

ಬೆಂಗಳೂರು

ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆಯಿಲ್ಲ. ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ಬಳಿಕ ಶಿವಮೊಗ್ಗ, ಶಿಕಾರಿಪುರಕ್ಕೆ ಹೋಗುತ್ತಿದ್ದೇನೆ. ವಾಪಸ್ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ಮುಖಂಡರ ಜೊತೆ ಚರ್ಚೆ ರಾಜ್ಯ …

Read More »

BJPಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ, ಅತ್ಯಾಚಾರಿಗಳ ರಕ್ಷಣೆ ಮಾಡುವಂತಿದೆ: ಕಾಂಗ್ರೆಸ್

ಬೆಂಗಳೂರು: ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಬಿಜೆಪಿ ಸರ್ಕಾರ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಟೀಕೆ ಮಾಡಿದೆ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 …

Read More »

ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅತ್ಯಾಚಾರ ಯುವತಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ವಾಪಸ್ಸು ಪಡೆದಿರುವುದಾಗಿ ಹೇಳಿದ್ದಾರೆ. ನಗರದ ಪರಪ್ಪನ ಅಗ್ರಹಾರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ನನಗೂ ಆ ಹೇಳಿಕೆ ನೀಡಿದ ಬಳಿಕ ತುಂಬಾ ನೋವಾಗಿದೆ, ಬೊಮ್ಮಾಯಿಯಯವರ ಸರ್ಕಾರ ಎಲ್ಲ ಹೆಣ್ಣು ಮಕ್ಕಳ ಪ್ರಾಣ ಮಾನ ಕಾಪಾಡುವ ಬದ್ಧತೆ ಹೊಂದಿದೆ, ಎಂದು ಹೇಳಿ ಹೇಳಿಕೆ ವಾಪಸ್ಸು ಪಡೆದಿರುವುದಾಗಿ …

Read More »

ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿ.

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ …

Read More »

ಕೋವಿಡ್ ಲಸಿಕೆ ಪಡೆಯಲು ಆ. 31 ಡೆಡ್ ಲೈನ್..!

ಬೆಂಗಳೂರು, ಆ.26- ಸಂಭಾವ್ಯ ಕೋವಿಡ್ ಮೂರನೆ ಅಲೆ ಹಿನ್ನೆಲೆಯಲ್ಲಿ ನಗರದ ವಾಣಿಜ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಬಿಬಿಎಂಪಿ ಅಧಿಕೃತ ಆದೇಶ ಹೊರಡಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಿಸಲು ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೊಟೇಲ್ ಮತ್ತು ಕಚೇರಿಗಳು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದರ ಜೊತೆಗೆ ತಮ್ಮದೇ ವೆಚ್ಚದಲ್ಲಿ ತಮ್ಮ ಸಿಬ್ಬಂದಿಗೆ ಶೇ.100ರಷ್ಟು ಲಸಿಕೆ ಕೊಡಿಸಬೇಕು. ಮೊದಲ ಡೋಸ್‍ಅನ್ನು ಈ ತಿಂಗಳ 31ರೊಳಗೆ ಎಲ್ಲಾ ಸಿಬ್ಬಂದಿಗೂ ನೀಡಬೇಕು ಎಂದು …

Read More »

ಪ್ರತಿ ಕ್ವಿಂಟಾಲ್ ಗೆ 7,275 ರೂ.ಗಳಂತೆ ಹೆಸರು ಕಾಳು ಖರೀದಿಗೆ ಸಹಕಾರ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಹೆಸರು ಮತ್ತು ಉದ್ದು ಬೆಳೆಗೆ ಬೆಂಬಲ ಬೆಲೆ ಘೋಷಿಸಿ, ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆ ಆಧಾರದ ಮೇಲೆ 30 ಸಾವಿರ ಟನ್ ಹೆಸರು ಕಾಳು ಹಾಗೂ 10 ಸಾವಿರ ಟನ್ ಉದ್ದಿನ ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರತಿ ಎಕೆರೆಗೆ 4 ಕ್ವಿಂಟಾಲ್ ಗರಿಷ್ಟ, ಪ್ರತಿ ರೈತರಿಂದ 6 ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಬೇಕು. ಉದ್ದಿನ …

Read More »

ರಾಜ್ಯದಲ್ಲಿ ಹಗರಣಗಳ ಸರ್ಕಾರ: ಡಿಕೆಶಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಹಗರಣಗಳ ಸರ್ಕಾರವಿದ್ದು, ಆರೋಗ್ಯ ಕ್ಷೇತ್ರದ ಔಷಧ, ವೆಂಟಿಲೇಟರ್‌, ಆಯಂಬುಲೆನ್ಸ್‌ ವಿಚಾರದಲ್ಲೂ ಹಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರೂ.ಗೆ ಖರೀದಿಸಿದ್ದನ್ನು ರಾಜ್ಯ ಸರ್ಕಾರ 22 ಕೋಟಿ ರೂ.ಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಹಗರಣದಲ್ಲಿ ಮುಳುಗಿದೆ ಎಂದು ಟೀಕಿಸಿದರು. ಕೋವಿಡ್‌ ಸಮಯದಲ್ಲಿ ಮಕ್ಕಳು ಶಾಲೆಗೆ ಹೋಗದ ಸಮಯದಲ್ಲಿ …

Read More »

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಮುಂಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ

ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನೇರ ನೇಮಕಾತಿ ಹೊಂದಿರುವ ಮತ್ತು ಸೇವಾನಿರತ ಸರ್ಕಾರಿ ನೌಕರರು ಮುಂದಿನ ವರ್ಷದ ಮಾರ್ಚ್ 22 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗದಿದ್ದಲ್ಲಿ ಮುಂಬಡ್ತಿ, ವಾರ್ಷಿಕ ಬಡ್ತಿ ಪಡೆಯಲು ಅನರ್ಹರಾಗಿರುತ್ತಾರೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.   ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ಅಡಿಯಲ್ಲಿ ನಿರ್ದಿಷ್ಟ ಹುದ್ದೆ ಹೊರತುಪಡಿಸಿ ಇನ್ನಿತರ ಎಲ್ಲ …

Read More »

ಡಗ್ಸ್ ಜಾಲ ಜಾಲವನ್ನು ನಿರ್ಮೂಲನೆ ಮಾಡುತ್ತೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಆ.25- ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವನ್ನು ನಿರ್ಮೂಲನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೆಎಸ್‍ಆರ್‍ಪಿ ತರಬೇತಿ ಶಾಲೆ- 4ನೆ ಪಡೆ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಗಳಾಗಿ ಯುವ ಪೀಳಿಗೆ ಹಾಳಾಗುವುದನ್ನು ತಪ್ಪಿಸಬೇಕಿದೆ ಎಂದರು. …

Read More »

ಮತ್ತೆ ರಣಕಹಳೆ ಊದಿದ ಪಂಚಮಸಾಲಿ ಸಮುದಾಯ, ಇವತ್ತಿನಿಂದ್ಲೇ ‘ಪಂಚಮಸಾಲಿ’ ಹೋರಾಟ ಶುರು

ಬೆಂಗಳೂರು: ಸೆಪ್ಟಂಬರ್ 13 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗ್ತಿದೆ. ಇದರ ಬೆನ್ನಲ್ಲೇ ಮತ್ತೆ ಮೀಸಲಾತಿ ಕಿಚ್ಚು ಹೊತ್ತಿಕೊಳ್ಳೋ ಸಾಧ್ಯತೆ ಇದೆ. ಯಾಕೆಂದ್ರೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ(2A Reservation Row )ಮತ್ತೆ ರಣಕಹಳೆ ಊದಿದೆ. ಇದ್ರಿಂದ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರಕ್ಕೆ ಮೀಸಲಾತಿ ಸವಾಲ್ ಎದುರಾಗಿದೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ಮಾಡಿತ್ತು. ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸಿದ್ರು. ದೊಡ್ಡ ಮಟ್ಟದಲ್ಲಿ ಸಮಾವೇಶ ಕೂಡ ಮಾಡಿದ್ರು. ಬಿ.ಎಸ್.ಯಡಿಯೂರಪ್ಪ …

Read More »