ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26ರ ದಿನದಂದು ರಾಜಧಾನಿ ಮತ್ತು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರಿ ಗೌರವ ಸಲ್ಲಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26 ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಸರ್ಕಾರದ ಸಕಲ …
Read More »ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …
Read More »ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡು ಪತ್ತೆ ಅಸಾಧ್ಯ!
ಬೆಂಗಳೂರು: ಗಾಂಜಾ ಸಾಗಣೆಗೆ ಸರ್ಕಾರಿಬಸ್ಗಳನ್ನು ಸ್ವತಃ ಸಿಬ್ಬಂದಿ ಇಬ್ಬರು ಬಳಸಿಕೊಳ್ಳುತ್ತಿದ್ದ ಅಂಶ ಈಗ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಬರುವ ದಿನಗಳಲ್ಲಿ ಇದರ ಜಾಡು ಪತ್ತೆ ಹಾಗೂ ಕಡಿವಾಣವೇ ದೊಡ್ಡ ಸವಾಲಾಗಿದೆ. ಬಸ್ಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಿರಿಯ ಸಹಾಯಕ ವಿಠಲ್ ಭಜಂತ್ರಿ ಹಾಗೂ ಚಾಲಕ ಕಂ ನಿರ್ವಾಹಕ ಶರಣ ಬಸಪ್ಪ ಕ್ಷತ್ರೀಯ ಎಂಬುವರು ಲಗೇಜುಗಳ ರೂಪದಲ್ಲಿ ಗಾಂಜಾವನ್ನು ವಿಜಯಪುರ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಸ್ತುವಾರಿಗಳನ್ನು ನೇಮಿಸಲಾಗಿದೆ. ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ ಮತ್ತು ಶಾಸಕ ಅಭಯ ಪಾಟೀಲ ಅವರಿಗೆ ಚುನಾವಣೆ ಹೊಣೆ ವಹಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜವಾಬ್ದಾರಿ ನೀಡಿದೆ. ತನ್ಮೂಲಕ ಚುನಾವಣೆಗೆ ಎಲ್ಲ ಸಿದ್ಧತೆ ಆರಂಭವಾಗಿದೆ. ಬಿಜೆಪಿ ಹುಬ್ಬಳ್ಳಿ -ಧಾರವಾಡಕ್ಕೆ …
Read More »ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ: ಅಧಿಕಾರಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರಿಶೀಲನೆ
ಬೆಂಗಳೂರು :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಿದ್ಧತೆಯನ್ನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ರವರಿಂದ ಧ್ವಜಾರೋಹಣ ನಡೆಯುತ್ತದೆ. ಆದ್ದರಿಂದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಬೆಂಗಳೂರು ನಗರ ಡಿಸಿ ಮಂಜುನಾಥ್, ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ರವರು ಸಾಥ್ ನೀಡಿದ್ದಾರೆ. ಇನ್ನೂ …
Read More »ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ …
Read More »ಸಿ. ಟಿ. ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ : ದಿನೇಶ್ ಗುಂಡೂರಾವ್
ಬೆಂಗಳೂರು : ಇಂದಿರಾ ಗಾಂಧಿಯವರ ಬಗ್ಗೆ ವಿವಾದತ್ಮಕ ಹೇಳಿಕೆ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಬಿಜೆಪಿಯವಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ಸಿ.ಟಿ.ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಿಸಲಿ. ಆ ಯೋಜನೆಗೆ ‘ಗೋಡ್ಸೆ’ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಲಿ. ಬೇಡ ಎನ್ನುವವರು ಯಾರು.? ಎಂದು …
Read More »ಸರಕಾರದ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಧರಣಿ
ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿಯ ಮೂಡಿಗೆರೆಯ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧ ಆವರಣದಲ್ಲಿ ಗುರುವಾರ ಧರಣಿ ನಡೆಸಿದರು. ಕುಮಾರಸ್ವಾಮಿ ಮಾತನಾಡಿ, ನಮ್ಮ ಧ್ವನಿಗೆ ನಮ್ಮದೇ ಸರಕಾರದಲ್ಲಿ ಯಾಕೋ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಅನ್ನೋ ಕಾರಣಕ್ಕೋ ಏನೋ ಕಡೆಗಣಿಸಲಾಗುತ್ತಿದೆ. ಉಸ್ತುವಾರಿ ಸಚಿವರು ಬರುತ್ತಾರೆ, ಆದರೆ ಏನೂ ಮಾಡುವುದಿಲ್ಲ. ಇವರಿಗೆ ಮಾತಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಶೋಕ್ ಭರವಸೆ : ಸ್ಥಳಕ್ಕೆ ಆಗಮಿಸಿದ ಅಶೋಕ್ ಅವರು, ಅನುದಾನ …
Read More »ರಾಜ್ಯದ ಆರು ಪೊಲೀಸರಿಗೆ ರಾಷ್ಟ್ರೀಯ ‘ಶ್ರೇಷ್ಠ ತನಿಖಾ ಪದಕ’
ಬೆಂಗಳೂರು : ರಾಷ್ಟ್ರದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಮಂಗಳೂರು ಉಪವಿಭಾಗದ ಡಿವೈಎಸ್ಪಿ ಪರಮೇಶ್ವರ ಹೆಗಡೆ, ಬಿಡಿಎ ಡಿವೈಎಸ್ಪಿ ಸಿ.ಬಾಲಕೃಷ್ಣ, ಕೆಐಎ ಎಸ್ಐಟಿ ಮನೋಜ್ ಎನ್.ಹೂವಳೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ಇನ್ಸ್ಪೆಕ್ಟರ್ ಟಿ.ವಿ.ದೇವರಾಜ್ ಹಾಗೂ ಹಳೇ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ಶಿವಪ್ಪ ಶೆಟ್ಟಿಪ್ಪ …
Read More »
Laxmi News 24×7