ಗೋಕಾಕ: ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೆಇಬಿ (ವಿದ್ಯುತ್ ಇಲಾಖೆ) ನಿರ್ಲಕ್ಷ್ಯದಿಂದಾಗಿ ದೊಡ್ಡ ಮಟ್ಟದ ಆರ್ಥಿಕ ನಷ್ಟ ಸಂಭವಿಸಿದೆ. ಅಚಾನಕ್ ವಿದ್ಯುತ್ ವೋಲ್ಟೇಜ್ ಏರಿಳಿತದಿಂದ ಮನೆಗಳಲ್ಲಿ ಬಳಸುತ್ತಿದ್ದ ಟಿವಿ, ಫ್ರಿಜ್ ಸೇರಿದಂತೆ ಅನೇಕ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಾರು ₹3 ಲಕ್ಷ ಮೌಲ್ಯದ ಟಿವಿ ಮತ್ತು ಫ್ರಿಜ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಹಾಳಾಗಿವೆ. ವಿದ್ಯುತ್ ಸರಬರಾಜಿನಲ್ಲಿ ನಿಯಂತ್ರಣದ ಕೊರತೆ ಮತ್ತು ಸರಿಯಾದ ನಿರ್ವಹಣೆಯಿಲ್ಲದೆ ಈ ಘಟನೆ ಸಂಭವಿಸಿದೆ …
Read More »ಅಹಿಂಸೆ ಮತ್ತು ಶಾಂತಿಯ ಹರಿಕಾರ ಭಗವಾನ್ ಮಹಾವೀರರ ಜಯಂತಿ ಆಚರಣೆ
ಇಂದು ಸವದತ್ತಿಯ ತಹಸೀಲ್ದಾರ್ ಕಚೇರಿಯಲ್ಲಿ (ಮಿನಿ ವಿಧಾನಸೌಧ) ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ”ಅಹಿಂಸೆ ಪರಮೋ ಧರ್ಮಃ” ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮೌಲ್ಯಗಳನ್ನು ಬೋಧಿಸಿದ ಮಹಾವೀರರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿ. ಈ ಸಂದರ್ಭದಲ್ಲಿ ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ …
Read More »ಮಾ.29 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ …
Read More »ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ
ಬೆಳಗಾವಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಬೆಳಗಾವಿ ತಾಲೂಕಿನ ಚಚಡಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಶುಕ್ರವಾರ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಗರ ಆಗಮಿಸಿದ ಚಚಡಿ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. ಗ್ರಾಮದಲ್ಲಿರೋ ಬಹುತೇಕ ಅಂಗಡಿಕಾರರು ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ಗ್ರಾಮದಲ್ಲಿರೋ ಕುಟುಂಬಗಳು ಬೀದಿಗೆ ಬುರುತ್ತಿವೆ. ಕುಟುಂಬಗಳ ಶಾಂತಿ, ನೆಮ್ಮದಿ ಹಾಳಾಗುತ್ತಿದೆ. ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಕುಡಿದುಬಂದು ನಮ್ಮ …
Read More »ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ
ಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ಗೆ ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಪಾಲಿಕೆಯಲ್ಲಿ ಗುರುವಾರ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿ ಅವರನ್ನು ಸನ್ಮಾನಿಸಿ ಹಲವು ಬೇಡಿಕೆ ಒಳಗೊಂಡಿರುವ ಮನವಿ ಸಲ್ಲಿಸಿದರು. 2005 ಅಕ್ಟೋಬರ್ 10ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಮೇಯರ್, ಉಪಮೇಯರ್ ಅವರು ಪರಿಷತ್ …
Read More »ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್ನಲ್ಲಿನ ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ ಆಸ್ತಿ ಸಂಖ್ಯೆ (ಪಿಐಡಿ) ನೀಡಿ ಅಕ್ರಮ ಎಸಗಿರುವ ಮೂವರು ಅಧಿಕಾರಿ, ಕಟ್ಟಡ ಮಾಲೀಕರ ವಿರುದ್ಧ ಶಿಸ್ತು ಕ್ರಮಕ್ಕೆ ಸದಸ್ಯರು ಒತ್ತಾಯಿಸಿದರು. ನಗರದ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದಲ್ಲಿ ಅನಧಿಕೃತ ಆಸ್ತಿಗಳಿಗೆ ಅಕ್ರಮವಾಗಿ ಪಿಐಡಿ ನೀಡುವ ಕೃತ್ಯ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಕೂಡಲೇ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು. ಆ …
Read More »ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಈಗಾಗಲೇ ಪೆಟ್ರೋಲ್ ಮೇಲೆ 24 ರೂ ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ 30 ರೂ ಪ್ರತಿ ಲೀಟರ್ ಗೆ ನಷ್ಟವನ್ನು ಭರಿಸುತ್ತಿವೆ. ಭಾರತ ಸರ್ಕಾರ ಆ ಹೊರೆಯನ್ನು ತನ್ನದೇ ಆದ ತೆರಿಗೆ ಆದಾಯದ …
Read More »ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಮೂರು ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರ ಲಕ್ಷ್ಮೀ ನಗರದ ಸಚಿನ ಕಾಕತ್ಕರ್ (30)ಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಚಿನ, 2022ರ ಮಾ.8ರಂದು ಬಾಲಕಿ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಪ್ರಕರಣದ ವಿಚಾರಣೆ ನಡೆಸಿ, ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ …
Read More »ಸೇವಾ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ
ಬೈಲಹೊಂಗಲ ಮತಕ್ಷೇತ್ರದ ಮರಕುಂಬಿ ಗ್ರಾಮದಲ್ಲಿ ಜರುಗುತ್ತಿರುವ ಸುಕ್ಷೇತ್ರ ಅಂಕಲಗಿ ಶ್ರೀ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಭವ್ಯ ಜಾನುವಾರು ಜಾತ್ರೆಯ ಅಂಗವಾಗಿ, ಕಾರ್ತಿಕ ಪಾಟೀಲ ಸೇವಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಇಂದು ಪಾಲ್ಗೊಳ್ಳಲಾಯಿತು. ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ವಿವಿಧ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಮಂಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಮಾಜದಲ್ಲಿ ಸರಳತೆ ಮತ್ತು ಸಾಮರಸ್ಯವನ್ನು ಬಿತ್ತರಿಸುವ ಇಂತಹ ಕಾರ್ಯಕ್ರಮಗಳು …
Read More »ಪಿಂಚಣಿದಾರರ ಸೌಲಭ್ಯ ಕಡಿತ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ: ಸರ್ಕಾರಿ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿ ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಮೂಲಕ ರ್ಯಾಲಿಯಲ್ಲಿ ತೆರಳಿದ ನಿವೃತ್ತ ನೌಕರರು ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಳೆದ ಮಾರ್ಚ್ನಲ್ಲಿ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆರ್ಥಿಕ ಬಿಲ್ನಲ್ಲಿ 2025ರ ಏಪ್ರಿಲ್ 1ಕ್ಕಿಂತ …
Read More »
Laxmi News 24×7