ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳಗತಾ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆಸಿದ ಗ್ರಾಪಂ ಅಧ್ಯಕ್ಷೆ ಮಾಧುರಿ ಪಾಟೀಲ, ಪಿಡಿಓ ಚಂದ್ರಕಾಂತ ಮುರಗೋಡ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರುದ್ರಮುನಿಸ್ವಾಮಿ ಚಿಕ್ಕಮಠ,ಗ್ರಾಪಂ ಸದಸ್ಯ ಲಕ್ಷ್ಮಣ ಶಿಪ್ಪೂರೆ,ಬಾಳಾಸಾಹೇಬ ಬೇಡಿಕಿಹಾಳ ಮತ್ತು ದಿನಗೂಲಿ ನೌಕರ ವಿಕಾಸ ಹಟ್ಟಿಯವರ ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ,ಮತ್ತು 100100 ರೂ. ದಂಡ ವಿಧಿಸಿ ಈಚೆಗೆ ತೀರ್ಪು ಪ್ರಕಟಿಸಿದೆ. ಗಳತಗಾ …
Read More »ಡಿಸಿಸಿ ಬ್ಯಾಂಕ್ಗೆ 56.25 ಕೋಟಿ ರೂ. ನಿವ್ವಳ ಲಾಭ
ರಾಜ್ಯದಲ್ಲಿಯೇ ಅತಿಹೆಚ್ಚು ಠೇವಣಿ ಹೊಂದಿರುವ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಟ್ಟಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಬಿಡಿಸಿಸಿ) ಪ್ರಸಕ್ತ ಸಾಲಿನಲ್ಲಿ 56.25 ಕೋಟಿ ರೂ. ನಿವ್ವಳ ಲಾಭ ಹೊಂದಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೋಲ್ಲೆ ತಿಳಿಸಿದರು. ನಗರದ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಲ್ಲಿ ಅತಿ ಹೆಚ್ಚು ಬೆಳೆಸಾಲ ವಿತರಿಸಿದ ಬ್ಯಾಂಕ್ ನಮ್ಮದಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಯ …
Read More »ಜಿಲ್ಲೆಯಲ್ಲಿ 8,309 ಬೆಳೆ ವಿಮೆ ಅರ್ಜಿ ತಿರಸ್ಕಾರ
ಬೆಳಗಾವಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ವಿಮಾ ಸಂಸ್ಥೆಯಿಂದ 8,309 ಬೆಳೆ ವಿಮೆ ಪ್ರಸ್ತಾವನೆಗಳು ತಿರಸ್ಕೃತವಾಗಿವೆ. ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆ ಬೆಳೆ ಸಮೀಕ್ಷೆಯ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗೆ ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಅಶದಲ್ಲಿ ವಿಮಾ ಪರಿಹಾರಕ್ಕಾಗಿ ಲೆಕ್ಕ ಹಾಕಲಾಗಿದೆ.ಇವುಗಳಲ್ಲಿ ಮುಂಗಾರು …
Read More »ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಸಂಕಲ್ಪ
ಬೆಳಗಾವಿ:ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆ ಕೈಬಿಡಲು ಸ್ವಯಂ ಪ್ರೇರಣೆ ಸಂಕಲ್ಪ ಮಾಡಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ್.ಎಂ ಹೇಳಿದರು. ನಗರದ ನರಗುಂದಕರ ಬಾವಿ ಚೌಕ್ನಲ್ಲಿ ಗುರುವಾರ ವಿಶ್ವ ಜಲದಿನ, ಪ್ಲಾಸ್ಟಿಕ್ ಮುಕ್ತ ಅರಿವು ಹಾಗೂ ಕ್ಲಾಥ್ ಬ್ಯಾಗ್ ವೆಡ್ಡಿಂಗ್ ಯಂತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅತಿಯಾದ ಪ್ಲಾಸ್ಟಿಕ್ ಬಳಕೆ ಜನರು ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೆ, ಪರಿಸರ …
Read More »ಬೆಳಗಾವಿ: ಗ್ರಾಹಕರ ಹಣ ಮರಳಿಸದ ಸೊಸೈಟಿ ಅಧ್ಯಕ್ಷನಿಗೆ ಒಂದು ವರ್ಷ ಜೈಲು ಶಿಕ್ಷೆ
ಗ್ರಾಹಕರ ಠೇವಣಿ ಮರಳಿಸುವಂತೆ ನೀಡಿದ್ದ ಆದೇಶ ಪಾಲಿಸದ ಬೆಳಗಾವಿಯ ರಿದ್ದಿಸಿದ್ಧಿ ವಿವಿಧೋದ್ದೇಶ ಕೋ-ಆಪ್ ಸೊಸೈಟಿ ಅಧ್ಯಕ್ಷ ಶ್ಯಾಮ ಜಾಧವಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ಪ್ರಕಟಿಸಿದೆ ಎಂದು ನ್ಯಾಯವಾದಿ ಎನ್.ಆರ್.ಲಾತೂರ್ ತಿಳಿಸಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಠೇವಣಿ ಅವಧಿ ಮುಗಿದರೂ ಹಣ ಮರಳಿಸುತ್ತಿಲ್ಲ ಎಂದು ಸೊಸೈಟಿ ಗ್ರಾಹಕರಾದ ಸ್ನೇಹಾ ನಾದ ಮತ್ತು …
Read More »ರೈತರ ಏಳಿಗೆಗೆ ಶ್ರಮಿಸುತ್ತಿದೆ ಸರ್ಕಾರ
ಅಥಣಿ ಗ್ರಾಮೀಣ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ರಸ್ತೆ, ನೀರಾವರಿ, ಶಾಲಾ ಕೊಠಡಿ ಸೇರಿದಂತೆ ಹಲವು ಕಾಮಗಾರಿ ಕೈಗೊಂಡು ಹಿಂದುಳಿದವರು, ರೈತರು, ಕೂಲಿ ಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ಅಬ್ಬಿಹಾಳ ಗ್ರಾಮದ ಬಳಿ ೩.೬೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಖಿಳೇಗಾಂವ ಅಥಣಿ, ಸತ್ತಿ ರಾಜ್ಯ ಹೆದ್ದಾರಿ ಡಾಂಬರೀಕರಣ ಹಾಗೂ ೩ ಕೋಟಿ ರೂ. ವೆಚ್ಚದಲ್ಲಿ ದರೂರ ಗ್ರಾಮದಿಂದ ಖವಟಕೊಪ್ಪ …
Read More »ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪೋಕ್ಸೋ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ
ಬೆಳಗಾವಿ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಖಾನಾಪೂರ ತಾಲೂಕಿನ ಭೂರಣಕಿ ಗ್ರಾಮದ ನಿವಾಸಿ ಮೊಶೀನ್ ಸಾಹುಕಾರ(೩೦)ಮತ್ತು ಇರ್ಫಾನ್ ವಸ್ತಾದ (೨೪) ಅಪರಾಧಿಗಳಿಗೆ ತಲಾ ೩ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಅಪರಾಧಿಗಳು ೨೦೨೪ರಲ್ಲಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿವಂತೆ, ಕಿರುಕುಳ ನೀಡುವುದರ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಜಿಲ್ಲಾ ನ್ಯಾಯಾಲಯ …
Read More »ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ನಿರ್ಣಯ ಮಂಡನೆಗೆ ಆಗ್ರಹ
ಬೆಳಗಾವಿ : ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂದು ಸರ್ವಾನುಮತದ ನಿರ್ಣಯ ಅಂಗೀಕರಿಸುವಂತೆ ಆಗ್ರಹಿಸಿ ನಗರದಲ್ಲಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಮಹಾರಾಷ್ಟ್ರ ಪರ ನಿರ್ಣಯ ಮಂಡಿಸಿರುವುದನ್ನು ಖಂಡಿಸಿದರು. ಪಾಲಿಕೆಯಲ್ಲಿ ಈಗ ಕನ್ನಡಿಗರೇ ಮಹಾಪೌರ ಮತ್ತು ಉಪಮೇಯರ್ ಆಗಿರುವುದರಿಂದ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ …
Read More »ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜನ್ಮೋತ್ಸವ ಅನಿಲ್ ಬೆನಕೆ ಭೇಟಿ
ಬೆಳಗಾವಿಯ ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜಯಂತಿಯನ್ನು ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಯಿತು. ಮಾಜಿ ಶಾಸಕ ಅನಿಲ್ ಬೆನಕೆ ಹಾಗೂ ಮಾಜಿ ಉಪಮಹಾಪೌರರಾದ ರೇಷ್ಮಾ ಪ್ರವೀಣ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾರುತಿಯ ದರ್ಶನ ಪಡೆದರು. ಬೆಳಗಾವಿಯ ಶಾಹೂ ನಗರದ ವಿನಾಯಕ ಕಾಲನಿಯಲ್ಲಿ ಹನುಮ ಜಯಂತಿಯ ಅಂಗವಾಗಿ ಆಂಜನೇಯ ಮೂರ್ತಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾ ಆರತಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸುಮಂಗಲಿಯರು …
Read More »ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾರುತಿ ರಾಯನ ಕೃಪೆಗೆ ಪಾತ್ರರಾದರು. ತಿಗಡಿ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಮೊದಲ ದಿನದಂದು ದೇವಸ್ಥಾನದಲ್ಲಿ ಮಾರುತಿ ದೇವರಿಗೆ ವಿಶೇಷ ಅಭಿಷೇಕ …
Read More »
Laxmi News 24×7