Breaking News

ಬೆಳಗಾವಿ

ಕಲಾ ವಿಭಾಗದಲ್ಲಿ 600ಕ್ಕೆ 594

ಬೆಳಗಾವಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಲಿಂಗರಾಜ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ ಸೃಷ್ಠಿ ಚಿದಾನಂದ ಸೊಲೋನಿ ಕಲಾ ವಿಭಾಗದಲ್ಲಿ 600ಕ್ಕೆ 594 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಬಂದಿದ್ದಾರೆ. ಸೃಷ್ಠಿ ಮೂಲತಃ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಸೈದಾಪುರ ಗ್ರಾಮದವರು. ತಂದೆ ಚಿದಾನಂದ ಸೊಲೋನಿ ರೈತರಾಗಿದ್ದು, ತಾಯಿ ಹೇಮಲತಾ ಗೃಹಿಣಿ ಆಗಿದ್ದಾರೆ. ಬಡ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿರುವ ಸೃಷ್ಠಿ ಇಂದು ಇಡೀ ರಾಜ್ಯವೇ ಹೆಮ್ಮೆ …

Read More »

ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ.‌ ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …

Read More »

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ 98, ರಸಾಯನಶಾಸ್ತ್ರ 96, ಜೀವಶಾಸ್ತ್ರ 98, ಗಣಿತ 98 ಅಂಕ ಸಿಕ್ಕಿದೆ. ಮಗಳ ಈ ಸಾಧನೆಗೆ …

Read More »

ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ನೂತನ ರಥೋತ್ಸವ ಮತ್ತು ಶ್ರೀ ಗ್ರಾಮದೇವಿಯ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಗೆ ಶುಭ ಕೋರಿದರು. ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಗಳನ್ನು ನೋಡುವುದೇ ಚೆಂದ. ಗ್ರಾಮಸ್ಥರೆಲ್ಲ ಒಟ್ಟಾಗಿ ಭಕ್ತಿ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಆಚರಿಸುತ್ತಾರೆ. ಇದು ಗ್ರಾಮಗಳ ಒಗ್ಗಟ್ಟಿನ ಪ್ರತೀಕವೂ ಹೌದು …

Read More »

ಕದಂಬರ ಉಪರಾಜಧಾನಿ ಹಲಸಿಯಲ್ಲಿ ಮಹಾಲಕ್ಷ್ಮೀ ಜಾತ್ರೆ: ಭಕ್ತಿ ಭಾವದ ಹೊನ್ನಾಟದಲ್ಲಿ ಮಿಂದೆದ್ದ ಭಕ್ತಸಾಗರ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಅತ್ಯಂತ ಅದ್ಧೂರಿಯಾಗಿ ನೆರವೇರುತ್ತಿದೆ. ಕದಂಬರ ಕಾಲದ ಈ ಉಪರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ದೇವಿಯ ಹೊನ್ನಾಟ ನಡೆಯುವ ಮೂಲಕ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ಸಿಕ್ಕಿದ್ದು, ಗ್ರಾಮದಾದ್ಯಂತ ಹಬ್ಬದ ವಾತಾವರಣ ಮನೆಮಾಡಿದೆ. ಖಾನಾಪುರ ತಾಲೂಕಿನ ಕದಂಬರ ಕಾಲದ ಐತಿಹಾಸಿಕ ಉಪರಾಜಧಾನಿ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯು ಅತ್ಯಂತ ಸಡಗರ ಹಾಗೂ ಭಕ್ತಿ ಭಾವದಿಂದ ಪ್ರಾರಂಭವಾಯಿತು. ಇಂದು ಬೆಳ್ಳಂಬೆಳಿಗ್ಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಜಲಕ್ಷಾಮದ ಭೀತಿ: ಬೇಸಿಗೆ ಆರಂಭದಲ್ಲೇ ಘಟಪ್ರಭಾ ನದಿ ಖಾಲಿ ಖಾಲಿ!

ಉತ್ತರ ಕರ್ನಾಟಕದ ರೈತರ ಮತ್ತು ಸಾರ್ವಜನಿಕರ ಜೀವನಾಡಿ ಘಟಪ್ರಭಾ ನದಿ ಈಗ ಬರಿದಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿ ಕರುನಾಡಿನಾದ್ಯಂತ ಹರಿಯುವ ಈ ನದಿ, ಬೇಸಿಗೆಯ ಆರಂಭದಲ್ಲೇ ಬತ್ತಿ ಹೋಗುತ್ತಿರುವುದು ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದೆ. ಹಿಡಕಲ್ ಜಲಾಶಯದ ನೀರಿನ ಮಟ್ಟದಲ್ಲೂ ಗಣನೀಯ ಇಳಿಕೆಯಾಗಿದ್ದು, ಮುಂದಿನ ದಿನಗಳು ಕಷ್ಟಕರವಾಗುವ ಮುನ್ಸೂಚನೆ ಸಿಗುತ್ತಿದೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸಹಸ್ರಾರು ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಆಧಾರವಾಗಿರುವ ಘಟಪ್ರಭಾ …

Read More »

ಅಶೋಕ ಚಂದರಗಿ ನೇತೃತ್ವದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ರಾಜ್ಯೋತ್ಸವ ಅನುದಾನ ದುರ್ಬಳಕೆ ತನಿಖೆಗೆ ಸರ್ಕಾರ ಆದೇಶ

ಬೆಳಗಾವಿಯ ಹಿರಿಯ ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ದೊಡ್ಡ ಯಶಸ್ಸು ಸಿಕ್ಕಿದೆ. ರಾಜ್ಯೋತ್ಸವದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಬೆಳಗಾವಿ ಜಿಲ್ಲಾಡಳಿತವು ಕನ್ನಡ ಸಂಘಟನೆಗಳ ಸಲಹೆಗಳನ್ನು ಕಡೆಗಣಿಸಿ ಹಾಗೂ ಸರ್ಕಾರದ ಶರತ್ತುಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜಿಸಿದ್ದರ ವಿರುದ್ಧ ಅಶೋಕ ಚಂದರಗಿ ಅವರ …

Read More »

ನಿರ್ಮಲಾ ಪ್ರಕಾಶ ಅವರಿಗೆ ರಂಗಸೃಷ್ಟಿಯ ರಂಗಗೌರವ ಪ್ರದಾನ

ಬೆಳಗಾವಿ: ವಿಶ್ವರಂಗಭೂಮಿ ದಿನಾಚರಣೆಯ ಹಿನ್ನೆಲೆಯಲ್ಲಿ ಹಿರಿಯ ರಂಗಕರ್ಮಿ ನಿರ್ಮಲಾ ಪ್ರಕಾಶ ಅವರಿಗೆ ಸೋಮವಾರ ರಂಗಸೃಷ್ಟಿಯ ಈ ವರ್ಷದ ರಂಗಗೌರವ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಮಲಾ ಪ್ರಕಾಶ, ಜೀವನದಲ್ಲಿ ಒಳ್ಳೆಯದನ್ನು ಕಲಿಯಲು ಸಿಕ್ಕ ಅವಕಾಶ ಕಳೆದುಕೊಳ್ಳಬಾರದು. ನನ್ನ ಜೀವನದಲ್ಲಿ ಅದನ್ನು ಸದಾ ಅಳವಡಿಸಿಕೊಂಡಿದ್ದೇನೆ ಎಂದರು. ತಮ್ಮ ದೀರ್ಘ ರಂಗ ಅನುಭವವನ್ನು ಅವರು ಹಂಚಿಕೊಂಡರು. ಮುಖ್ಯ ಅತಿಥಿಯಾಗಿ ಆಗಿ ಆಗಮಿಸಿದ್ದ ಹಿರಿಯ …

Read More »

43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

ಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮತ್ತು ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ. ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ದೇವಿಯ ಮಂಟಪ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ಅನುಗ್ರಹದಿಂದ ಜಾತ್ರಾ ಮಹೋತ್ಸವವು ಯಾವುದೇ ಅಡಚಣೆಗಳಿಲ್ಲದೆ, ಭಕ್ತಿಪೂರ್ವಕವಾಗಿ …

Read More »

ಬೆಳಗಾವಿಯ ಯೆಳ್ಳೂರ ಫಲಕ ವಿವಾದ: 10 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿತು ಜಯ; ಎಲ್ಲಾ ಆರೋಪಿಗಳು ನಿರ್ದೋಷಿ ಮುಕ್ತ!

ಬೆಳಗಾವಿಯ ಯೆಳ್ಳೂರಿನಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ‘ಮಹಾರಾಷ್ಟ್ರ ರಾಜ್ಯ ಯೆಳ್ಳೂರ’ ಫಲಕ ವಿವಾದಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ತೀರ್ಪು ಹೊರಬಿದ್ದಿದೆ. ಅಂದು ಗ್ರಾಮಸ್ಥರ ಮೇಲೆ ದಾಖಲಾಗಿದ್ದ ಎಲ್ಲಾ ಏಳು ಪ್ರಕರಣಗಳಲ್ಲಿಯೂ ಇದೀಗ ನ್ಯಾಯಾಲಯವು ಎಲ್ಲರನ್ನೂ ನಿರ್ದೋಷಿಗಳೆಂದು ಘೋಷಿಸಿದ್ದು, ಮರಾಠಿ ಭಾಷಿಕರ ಕಾನೂನು ಹೋರಾಟಕ್ಕೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಜುಲೈ 27, 2014 ರಂದು ಯೆಳ್ಳೂರಿನಲ್ಲಿ ‘ಮಹಾರಾಷ್ಟ್ರ ರಾಜ್ಯ’ ಎಂಬ ಫಲಕವನ್ನು ತೆರವುಗೊಳಿಸಿದ ಹಿನ್ನಲೆ ದೊಡ್ಡ ಮಟ್ಟದ ಗದ್ದಲ ನಡೆದಿತ್ತು. …

Read More »