ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 3.23 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ವೇಳೆ ಸ್ಥಳೀಯ ನಿವಾಸಿಗಳು …
Read More »ಎರಡು ದಿನಗಳ ಉಚಿತ ಶ್ರವಣ ಪರೀಕ್ಷಾ ಶಿಬಿರ
ಬೆಳಗಾವಿ: ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಸ್ಪೀಚ್ ಆ್ಯಂಡ್ ಹಿಯರಿಂಗ್ ಎಯ್ಡ್ ಸೆಂಟರ್ ವತಿಯಿಂದ ಮಾ.15 ಮತ್ತು 16ರಂದು ಬೆಳಗ್ಗೆ 10.30ರಿಂದ ಸಂಜೆ 6.30ರ ವರೆಗೆ ನಗರದ ಛತ್ರಪತಿ ಶಿವಾಜಿ ರಸ್ತೆಯಲ್ಲಿರುವ ರೇಡಿಯೋ ಕಾಂಪ್ಲೆಕ್ಸ್ದಲ್ಲಿ ಉಚಿತ ಶ್ರವಣ ಪರೀಕ್ಷಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಎಲ್ಲ ವಯೋಮಾನದವರಿಗೂ ಉಚಿತವಾಗಿ ಕಿವಿ ಕೇಳುವಿಕೆ (ಶ್ರವಣ) ಪರೀಕ್ಷೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಶ್ರವಣ ಸಮಸ್ಯೆಗಳು ಕಂಡು ಬರುತ್ತಿದೆ. ಮಕ್ಕಳಿಂದ ವಯೋವೃದ್ಧರ ತನಕ ಕಡಿಮೆ …
Read More »ಬೈಕ್ ಅಪಘಾತ ಯುವಕ ಬಲಿ
ಚಿಕ್ಕೋಡಿ : ರಸ್ತೆಯಲ್ಲಿ ಗುಂಡಿ ತಪ್ಪಿ ಹೋಗಿ ಮುಂದೆ ಬರುತ್ತಿದ್ದ ಇನ್ನೊಂದು ಬೈಕ್ಗೆ ಪರಸ್ಪರ ಡಿಕ್ಕಿಯಾದ ಪರಿಣಾಮ ವಡ್ರಾಳ ಗ್ರಾಮದ ನಿವಾಸಿ ಸತೀಶ ಬಾಳೇಶ ಪಾಟೀಲ(೨೩) ಮೃತನಾಗಿದ್ದರೆ, ಇನ್ನೋರ್ವ ಬೈಕ್ ಸವಾರ ಹಾಲಟ್ಟಿ ನಿವಾಸಿ ರೋಹಣ ಸುಕ್ಕುನಟ್ಟಿ ಗಂಭೀರ ಘಟನೆ ಗೋಟುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 548ಬಿಯಲ್ಲಿನ ಹತ್ತರವಾಟ ಗೇಟ್ ಬಳಿ ಶನಿವಾರ ನಡೆದಿದೆ. ಮೃತ ಯುವಕ ಸತೀಶ ಪಾಟೀಲ ವಡ್ರಾಳಿ ಕಡೆಯಿಂದ ಚಿಕ್ಕೋಡಿ ಕಡೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಈ …
Read More »ಚಿಲಬಾವಿಯ ಅಕ್ರಮ ಮರಳು ಅಡ್ಡೆ ಮೇಲೆ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದಲ್ಲಿ ದಾಳಿ: 110 ಮೆಟ್ರಿಕ್ ಟನ್ ಮರಳು ಜಪ್ತಿ
ಬೆಳಗಾವಿ ಜಿಲ್ಲೆಯ ಚಿಲಬಾವಿ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮರಳು ಅಡ್ಡೆಯ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸಂಜೆ ನಡೆದ ಈ ದಿಢೀರ್ ದಾಳಿಯಲ್ಲಿ ಬರೋಬ್ಬರಿ 110 ಮೆಟ್ರಿಕ್ ಟನ್ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಕ್ರಮ ದಂಧೆಕೋರರಿಗೆ ಬಿಸಿ ಮುಟ್ಟಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಬಾವಿ ಗ್ರಾಮದ ಹದ್ದಿಯಲ್ಲಿ ಅಕ್ರಮ ಮರಳು ಸಂಗ್ರಹದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಇಂದು ಸಂಜೆ 5 ಗಂಟೆ …
Read More »ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಶನಿವಾರ ಉಚಗಾಂವ್ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಹಿಂದುತ್ವದ ಭಾಷಣ ಮಾಡುತ್ತಾರೆ. ಹಿಂದುತ್ವಕ್ಕಾಗಿ ಏನು ಮಾಡಿದ್ದಾರೆ?ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಹಿಂದು – ಮುಸ್ಲಿಂ, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನದಾಸೋಹ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
ಬೆಳಗಾವಿ: ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಸವಣ ಕುಡಚಿ ಗ್ರಾಮದ ಹದ್ದಿಯಲ್ಲಿ ಬರುವ ಶಿಂದೊಳ್ಳಿ ಕ್ರಾಸ್ ಮತ್ತು ಬಸವನ ಕುಡಚಿ ಗ್ರಾಮದ ಹತ್ತಿರ ಇರುವ ಸರಾಯಿ ಅಂಗಡಿಯನ್ನು ಮಾ. 16 ಹಾಗೂ 17 ರಂದು ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್ಗಳು, ಕ್ಲಬ್ಗಳು ಬಂದ್ ಇಡುವಂತೆ ಬೆಳಗಾವಿ ನಗರ ಪೊಲೀಸ್ …
Read More »ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ವಿತರಣೆ
ಹುಕ್ಕೇರಿ: ಪಟ್ಟಣದ ವಿಶ್ವರಾಜ ಭವನದಲ್ಲಿ ಆನ್ಲೈನ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಬೆಂಗಳೂರು ಮತ್ತು ಕಬ್ಬೂರಿನ ಬಿ.ಜಿ.ಬೆಲ್ಲದ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಆಧಾರಿತ 50 ಉಚಿತ ಸ್ಮಾರ್ಟ್ ಬೋರ್ಡ್ ಹಾಗೂ ಕೊಠಡಿಗಳ ನವೀಕರಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ, ಪೀಠೋಪಕರಣ, ಆಟೋಪಕರಣ ವಿತರಣೆ ಸಮಾರಂಭ ಮಾ.13ರಂದು ಬೆಳಗ್ಗೆ 10.30ಕ್ಕೆ ಹುಕ್ಕೇರಿಯ ವಿಶ್ವರಾಜ ಭವನದಲ್ಲಿ ಜರುಗಲಿದೆ. ನಿಡಸೋಸಿ ದುರುದುಂಡೀಶ್ವರ ಸಿದ್ಧ ಸಂಸ್ಥಾನ …
Read More »ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ
ಮತದಾರರ ಪಟ್ಟಿಯ ವಿಶೇಷ ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಪ್ರಕ್ರಿಯೇ ಪ್ರಗತಿ ಹಂತದಲ್ಲಿದ್ದು, ಜಿಲ್ಲೆಯಲ್ಲಿ ಶೇ.75ರಷ್ಟು ಪೂರ್ಣಗೊಂಡಿದ್ದು, ವಾರದಲ್ಲಿ ಮ್ಯಾಪಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ಮುಂದಿನ ಭಾನುವಾರ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಡಿದ ಅವರು, ಮತದಾರರ ಪಟ್ಟಿ ಮ್ಯಾಪಿಂಗ್ ಬೇಗ ಪೂರ್ಣಗೊಳಿಸಿ ಚುನಾವಣೆ ಆಯೋಗ ಸಲ್ಲಿಸಬೇಕು. …
Read More »ಬೆಳಗಾವಿ: ಮಹಾರಾಷ್ಟ್ರದಿಂದ ನೀರು ಬಿಡುಗಡೆ ಪ್ರಯತ್ನ
ಬೆಳಗಾವಿ: ಬೇಸಿಗೆಯಲ್ಲಿ ಜನ, ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಂಟು ಟಿಎಂಸಿ ನೀರು ಬಿಡುಗಡೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ನೀರು …
Read More »
Laxmi News 24×7