ಇಟನಾಳ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಮತ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿರುವ ನೀವು ಮಾಡಿದ್ದಾದರೂ ಏನು ಪಿ.ರಾಜೀವ್ ಅವರೇ ಹಲವಾರು ಆಶ್ವಾಸನೆಗಳನ್ನು ಕೊಟ್ಟಿದ್ರಿ. ಆಶ್ವಾಸನೆಗಳ ಬದ್ಧವಾಗಿ ಕುಡಚಿ ಮತ ಕ್ಷೇತ್ರ ಜನರಿಗೆ ಯಾವ ಕೊಡುಗೆ ಕೊಡಲಿಲ್ಲ. ತಮಗೆ ಬೇಕಾದ ಚೌಹಾಣ್ ಮತ್ತು ರಾಥೋಡ್ ಎಂಬ ಗುತ್ತಿಗೆದಾರರನ್ನು ಗಳನ್ನು ಬೆಳೆಸಿಕ್ಕೊಂಡು ಇವರಿಗೆ ಗುತ್ತಿಗೆ ಕೆಲಸಗಳನ್ನ ಕೊಟ್ಟು ಅವರನ್ನು ಬೆಳಸಿ ತಾವು ಬೆಳದರಿ ಪಿ. ರಾಜೀವ್ ಅವರು ತಮ್ಮ ಬಕೆಟ್ …
Read More »ರಾಮದುರ್ಗ ಮಂಡಲದ ನೂತನ ಬಿಜೆಪಿ ಪದಾಧಿಕಾರಿಗಳು ಪದಗ್ರಹಣ ಸಮಾರಂಭ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರಿಂದ ಉದ್ಘಾಟನೆ..
ರಾಮದುರ್ಗ ನಗರದ ಶ್ರೀ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾದ ರಾಮದುರ್ಗ ಮಂಡಲದ ನೂತನ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಭಾಗವಹಿಸಿ ಪದ ಗ್ರಹಣ ಸಮಾರಂಭ ಉದ್ಘಾಟನೆ ನೆರವೇರಿಸಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಪಕ್ಷ ಸಂಘಟನೆಗೆ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ …
Read More »ಬೆಳಗಾವಿ: ಬೆಡ್ರೂಮ್ನಲ್ಲಿ ಪತ್ನಿ, ಮಕ್ಕಳನ್ನು ಕೂಡಿ ಹಾಕಿ ಪತಿಯಿಂದ ಕ್ರೂರ ಹಿಂಸೆ; ಅಕ್ಕಪಡೆಯಿಂದ ಸಾಹಸಮಯ ರಕ್ಷಣೆ
ಬೆಳಗಾವಿ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಜಾರಿಗೆ ಬಂದಿರುವ ‘ಅಕ್ಕಪಡೆ’ ಇಂದು ಅತ್ಯಂತ ಶ್ಲಾಘನೀಯ ಕಾರ್ಯಾಚರಣೆ ನಡೆಸಿದೆ. ನಗರದ ಟಿಳಕವಾಡಿ ಪ್ರದೇಶದಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮನೆಯ ಬೆಡ್ರೂಮ್ನಲ್ಲಿ ಕೂಡಿ ಹಾಕಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಕ್ಕಪಡೆ ಸಿಬ್ಬಂದಿಗಳು ಮಹಿಳೆಯನ್ನು ರಕ್ಷಿಸಿ ಸುರಕ್ಷಿತವಾಗಿ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಬೆಳಗಾವಿ: ನಗರದ ಟಿಳಕವಾಡಿ ಪ್ರದೇಶದಲ್ಲಿ ಗಂಡನ ಕ್ರೌರ್ಯಕ್ಕೆ ಬಲಿಯಾಗಿ ಮನೆಯೊಳಗೆ ಬಂಧಿಯಾಗಿದ್ದ ಮಹಿಳೆ ಮತ್ತು ಇಬ್ಬರು …
Read More »ಬೆಳಗಾವಿ ಅನಗೋಳ ಬ್ರಹ್ಮಕುಮಾರಿ ಕೇಂದ್ರದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಆರೋಗ್ಯ ಜಾಗೃತಿ ಮೂಡಿಸಿದ ವೈದ್ಯರ ತಂಡ
ಆಧ್ಯಾತ್ಮಿಕತೆಯ ಜೊತೆಗೆ ಆರೋಗ್ಯಕ್ಕೂ ಒತ್ತು ನೀಡುತ್ತಿರುವ ಬೆಳಗಾವಿಯ ಅನಗೋಳ ಬ್ರಹ್ಮಕುಮಾರಿ ಕೇಂದ್ರದಲ್ಲಿ ಇಂದು ಉಚಿತ ದಂತ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಥಳೀಯ ನಾಗರಿಕರು ಹಾಗೂ ಈಶ್ವರೀಯ ವಿಶ್ವವಿದ್ಯಾಲಯದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ನೂರಾರು ಜನರು ಪಾಲ್ಗೊಂಡು ತಪಾಸಣೆ ಮಾಡಿಸಿಕೊಂಡರು.” ಬೆಳಗಾವಿ ನಗರದ ಅನಗೋಳದಲ್ಲಿರುವ ಬ್ರಹ್ಮಕುಮಾರಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ದಂತ ತಪಾಸಣಾ ಶಿಬಿರವು ಯಶಸ್ವಿಯಾಗಿ ನೆರವೇರಿತು. ಪ್ರಖ್ಯಾತ ದಂತವೈದ್ಯರಾದ ಡಾ. ಹೇಮಲತಾ ಅವರ ಮಾರ್ಗದರ್ಶನದಲ್ಲಿ ಈ ಶಿಬಿರ …
Read More »ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಜಯಂತಿ; ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ದೇಶದ ಮಾಜಿ ಉಪಪ್ರಧಾನಿ ಹಾಗೂ ಶೋಷಿತರ ಧ್ವನಿಯಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನವನ್ನು ಇಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾನ್ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಏಪ್ರಿಲ್ 5ರಂದು ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಕ್ತಿಪೂರ್ವಕ ಗೌರವ ಸಮರ್ಪಿಸಿದರು. ಈ …
Read More »ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!
ಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ ಮಾರುತಿ ಜಯಂತಿ ಸಮಾರೋಪದ ಹಿನ್ನೆಲೆ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ ಮಾರುತಿ ಜಯಂತಿ ಸಮಾರೋಪದ ಹಿನ್ನೆಲೆ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಹನುಮಾನ ಜಯಂತಿಯ ದಿನದಿಂದ ಶನಿವಾರದ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶನಿವಾರ ಸಂಜೆ ಮಹಾಪ್ರಸಾದದೊಂದಿಗೆ …
Read More »ದಾವಣಗೆರೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಮರ್ಥ್ ಶಾಮನೂರು ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕ್ಯಾಂಪ್ ಆಫೀಸ್ನಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಚಿವರು ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜಿನಲ್ಲಿರುವ ಪಕ್ಷದ ಕ್ಯಾಂಪ್ ಆಫೀಸ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಲೆ ಬೀಸುತ್ತಿದ್ದು, ಗೆಲುವು …
Read More »ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿದ ವ್ಯಕ್ತಿಯ ಬರ್ಬರ ಹತ್ಯೆ.. !
ಬೆಳಗಾವಿ-ಬೆಳಗಾವಿಯಲ್ಲಿ ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಘಟನೆ. ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ. ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯ. ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ ಸಂಗನಗೌಡ. ಕುಣಿಬೇಡಾ ಮುಂದೆ ಹೋಗು ಎಂದು ಹೇಳಿದ್ದ ಆರೋಪಿಗಳು. ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ನಡೆಯಿತು ಕೊಲೆ. ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ …
Read More »ಶಾಸಕ ರಮೇಶ ಜಾರಕಿಹೊಳಿ ಅವರಿಂದ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕಾಕ: ನಗರದ ಜನತೆ ಮತ್ತು ಭಕ್ತರಿಗಾಗಿ ಶ್ರೀ ಚೌಡೇಶ್ವರಿ ದೈವಿ ವನ ನಿರ್ಮಾಣ ಮಾಡಲಾಗುತ್ತಿದೆ. ಗೋಕಾಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ಕಡಬಗಟ್ಟಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಸುಮಾರು ೧ಕೋಟಿ ರೂಗಳ ವೆಚ್ಚದಲ್ಲಿ ಅರಣ್ಯ ಇಲಾಖೆಯಿಂದ ಶುಕ್ರವಾರದಂದು ಚೌಡೇಶ್ವರಿ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗೋಕಾಕ ನಗರ ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ಅನೇಕ ಜನಪರ …
Read More »ಸಕ್ಕರೆ ಕಾರ್ಖಾನೆಗಳ 3500 ಕೋಟಿ ‘ಬಿಲ್’ ಬಾಕಿ; ಬೆಳಗಾವಿಯಲ್ಲಿ ಸಿಡಿದೆದ್ದ ರೈತರು ನಮಗೆ ಯಾರ ಎಂಜಲ ಕಾಸು ಬೇಡ!!! ನಮ್ಮ ಬೆಳೆಗೆ ವೈಜ್ಞಾನಿಕ ಬೆಲೆ ನೀಡಿ…
ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಹಣವನ್ನು ಪಾವತಿಸದೆ ಇರುವುದನ್ನು ಖಂಡಿಸಿ, ಬಡ್ಡಿ ಸಮೇತ ತಕ್ಷಣ ಪಾವತಿಸಬೇಕೆಂದು ಆಗ್ರಹಿಸಿ ಶನಿವಾರ ಭಾರತೀಯ ಕೃಷಿಕ ಸಮಾಜದ ವತಿಯಿಂದ ರೈತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು, ಕಬ್ಬು ಸರಬರಾಜು ಮಾಡಿದ ನಂತರ 15 ದಿನಗಳೊಳಗೆ ಬಿಲ್ ಪಾವತಿಸಬೇಕು ಎಂಬ ನಿಯಮ ಇದ್ದರೂ, ಅನೇಕ ಕಾರ್ಖಾನೆಗಳು ಇದನ್ನು ಪಾಲಿಸದೆ ರೈತರ ಬಾಕಿ …
Read More »
Laxmi News 24×7