ಬೆಳಗಾವಿ : ಎಲ್ಲ ಸರ್ಕಾರದಲ್ಲೂ ಸಿಎಂ ಬದಲಾವಣೆ ಚರ್ಚೆಗಳಾಗಿವೆ. ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಎಲ್ಲ ಸರ್ಕಾರದಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳು ಕೇಳಿಯೇ ಕೇಳುತ್ತಾರೆ. ತಂದೆಯವರೇ ಐದು ವರ್ಷದ ಅವಧಿ ಮುನ್ನಡೆಸಿಕೊಂಡು ಹೋಗಲಿ ಎಂಬುದು ನಮ್ಮ ವೈಯಕ್ತಿಕ ಬೇಡಿಕೆಯಾಗಿದ್ದು, ಈ ಚರ್ಚೆಗಳಿಗೆ ಮುಖ್ಯಮಂತ್ರಿಯೇ ಸ್ಪಷ್ಟನೆ ಕೊಟ್ಟಿರುವುದರಿಂದ ಹೆಚ್ಚಿಗೆ ಮಾತನಾಡಲಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಬೈಲಹೊಂಗಲ ತಾಲೂಕಿನ ಸುಖದೇವಾನಂದ ಮಠದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ …
Read More »ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆಗೆ ನಿವೃತ್ತರಾದ ಪಿಂಚಣಿದಾರರ ಆಗ್ರಹ
ಬೆಳಗಾವಿ: ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ನಿಂದ ನಿವೃತ್ತರಾದ ಪಿಂಚಣಿದಾರರಿಗೆ ಸರ್ಕಾರದಿಂದ ಬರಬೇಕಿರುವ ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆ ಮಾಡುವಂತೆ ಆಗ್ರಹಿಸಿ ನಗರದ ಬಿಎಸ್ಎನ್ಎಲ್ ಕಚೇರಿ ಎದುರು ಗುರುವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತೀಯ ಬಿಎಸ್ಎನ್ಎಲ್ ಪಿಂಚಣಿದಾರರ ಸಂಘ ಸೇರಿದಂತೆ ಒಟ್ಟು 12 ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿನ ಪ್ರಧಾನ ಕಚೇರಿ ಎದುರು ಸೇರಿದ ಪಿಂಚಣಿದಾರರು ತಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದೇ ಹೋದಲ್ಲಿ ಏ.30ರಂದು ದೇಶಾದ್ಯಂತ ಎಲ್ಲ ಬಿಎಸ್ಎನ್ಎಲ್ ಕಚೇರಿಗಳ ಎದುರು …
Read More »ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ
ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು ಮುಂದಾಗಿದ್ದ, ಇದು ಬ್ಯಾಂಕಿನ ಭವಿಷ್ಯಕ್ಕೆ ಮಾರಕವಾಗಲಿದ್ದು, ಆಡಳಿತ ಮಂಡಳಿ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಮುಂಬರುವ ಸಭೆಯಲ್ಲಿ ಸಾಲ ಮಂಜೂರಾತಿಗಾಗಿ ಈಗಾಗಲೇ ಅನೇಕ ಸಕ್ಕರೆ ಕಾರ್ಖಾನೆಗಗಳು ಹಾಗೂ ಕೆಲ ರಾಜಕಾರಣಿಗಳು ಜಮೀನು …
Read More »ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು
ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು ಅತ್ಯಂತ ಪ್ರಖರವಾಗಿವೆ ಎಂದು ಹಿರಿಯ ಸಾಹಿತಿ ಡಾ.ರಾಘವೇಂದ್ರ ಪಾಟೀಲ ಹೇಳಿದರು. ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಮಹಾಂತ ಭವನದಲ್ಲಿ ಏರ್ಪಡಿಸಿದ್ದ ಡಾ.ಬೆಟಗೇರಿ ಕೃಷ್ಣ್ಣಶರ್ಮ ಜಯಂತಿ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನವೋದಯದ ಪ್ರತಿಭಾವಂತ ಕವಿಯಾಗಿದ್ದ ಕೃಷ್ಣಶರ್ಮರು ಕಾವ್ಯಗಳಲ್ಲಿ ಸ್ತ್ರೀಗೆ …
Read More »ಖಾನಾಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೊಲೀಸರ ನಡೆಗೆ ಖಂಡನೆ
ಬೆಳಗಾವಿ : ಅಪರಾಧ ಚಟುವಟಿಕೆಗಳ ಹಿನ್ನೆಲೆವುಳ್ಳವರಿಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಈಚೆಗೆ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಶಾಂತಿ ಸಭೆಯಲ್ಲಿ ಪ್ರಾತಿನಿಧ್ಯ ನೀಡಿರುವುದನ್ನು ಖಂಡಿಸಿ ಖಾನಾಪುರ ಪಟ್ಟಣದಲ್ಲಿ ಗುರುವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು. ಸಮಾಜಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಸಭೆಗಳಿದ್ದಾಗ, ಆಯಾ ಊರಿನ ಅಥವಾ ಸಮುದಾಯದ ಹಿರಿಯರನ್ನು ಆಹ್ವಾನಿಸುವ …
Read More »ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ
ಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಇದಕ್ಕೆ ಪೂರಕವಾದ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ …
Read More »ಏಪ್ರಿಲ್ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ಏಪ್ರಿಲ್ 20 ಮತ್ತು 21 ರಂದು ಎರಡು ದಿನಗಳ ಕಾಲ ಪಾವನಕ್ಷೇತ್ರ ಬಡೇಕೊಳ್ಳಮಠದ ಶ್ರೀ ನಾಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವ ಜಯಂತಿ ನಿಮಿತ್ತ ಕೊಳ್ಳಬಸವ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸೋಮವಾರ ದಿ. 20 ರಂದು ಮುಂಜಾನೆ 8 ಗಂಟೆಗೆ ವೇದಮೂರ್ತಿ ಶ್ರೀ ಮಹೇಶ ಸ್ವಾಮಿಗಳು ಇವರಿಂದ ಕೊಳ್ಳಬಸವ ನಾಗಲಿಂಗೇಶ್ವರನಿಗೆ ಅಭೀಷೇಕ ಜರುಗುವುದು. ಬಸವ ಜಯಂತಿ ಮೆರವಣಿಗೆ ಹಾಗೂ …
Read More »ಆರೋಗ್ಯ ಇಲಾಖೆಯ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ
ಆರೋಗ್ಯ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ ಸರ್ಕಾರದ ಅತ್ಯಂತ ಕೆಟ್ಟ ನಿರ್ಧಾರವಾಗಿದೆ ಎಂದು ಸತ್ಯಪ್ಪ ವಿಷಾದ ವ್ಯಕ್ತಪಡಿಸಿದರು. ಈ ಬಗ್ಗೆ ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರು ಮಾತನಾಡಿ ಶ್ರೀ ಹರ್ಷ ಗುಪ್ತ ಸಾಹೇಬರು ತಮ್ಮ 30 ವರ್ಷಗಳ ಸೇವಾ ಅವಧಿಯಲ್ಲಿ 26 ಬಾರಿ ಏಕಾಏಕಿ ವರ್ಗಾವಣೆಯಾಗಿದ್ದು ಈ ಬಾರಿಯೂ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದ …
Read More »ಖಾನಾಪುರ ಗ್ರಾಮದ ಶಿವಲಿಂಗ ಹಾದಿಮನಿ ನಿಧನ
ಗೋಕಾಕ ತಾಲೂಕಿನ ಖಾನಾಪುರ ಗ್ರಾಮದ ಹಿರಿಯರು ಹಾಗೂ ಗೌರವಾನ್ವಿತ ಪಂಚರಾದ ಶಿವಲಿಂಗ ಹಾದಿಮನಿ ಅವರು ನಿಧನ ಹೊಂದಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಮತ್ತು ಗ್ರಾಮಾಭಿವೃದ್ಧಿಗೆ ಮಾಡಿದ ಸೇವೆಗಳ ಮೂಲಕ ಅವರು ಎಲ್ಲರ ಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ.
Read More »ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ೩೦ ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ತಾಲೂಕಿನ ಅರಳಿಕಟ್ಟಿ ಗ್ರಾಮದ ನಿವಾಸಿ ಮಹಾಂತೇಶ ಶಿವಪ್ಪ ಉರ್ಪ ಶಿವಾನಂದ ಗಿರೆಣ್ಣವರ(೨೩) ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಬಾಲಕಿಯು ಮನೆಯಲ್ಲಿ ಒಬ್ಬಳೆ ಇದ್ದಾಗ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿರುವ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ೨೦೨೫ರಲ್ಲಿ ದೂರು ದಾಖಲಾಗಿತ್ತು. …
Read More »
Laxmi News 24×7