ಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು ಭಾಗವಹಿಸಿ, ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕೆ ದಂಡುಮಂಡಳಿ ಪ್ರದೇಶದ ಸುಮಾರು 6045 ಚ.ಮಿ ಕ್ಷೇತ್ರವನ್ನು ಕೃಷಿ ಮರುಕಟ್ಟೆ ಸಮಿತಿಯ ಪರವಾನಗಿ ಪಡೆಯದೆ ನಿಯಮ ಬಾಹಿರವಾಗಿ ಹಂಚಿಕೆ ಮಾಡಿರುವ ವಿಚಾರವಾಗಿ ದಂಡುಮಂಡಳಿಗೆ ಲಕ್ಷಾಂತರ ರೂಪಾಯಿ ನಷ್ಟಕ್ಕೆ ದಾರಿ ಮಾಡಿಕೊಟ್ಟಿರುವ ವಿಷಯ ಪ್ರಸ್ತಾಪಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದಂಡುಮಂಡಳಿ ಪ್ರದೇಶವನ್ನು ಯಾವುದೊ ಒಂದು …
Read More »ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪಷ್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್ನಲ್ಲಿ ಕಾಣಿಸುತ್ತಿಲ್ಲ. ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ …
Read More »ಸಮೃದ್ಧ ಕರ್ನಾಟಕಕ್ಕೆ ಪೂರಕ ಬಜೆಟ್: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 4.48 ಲಕ್ಷ ಕೋಟಿ ರೂ. ಮೊತ್ತದ ಈ ಬೃಹತ್ ಆಯವ್ಯಯವು “ಸಮೃದ್ಧ ಕರ್ನಾಟಕ” ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. 2026-27 ಸಾಲಿನ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, …
Read More »ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ
ಗ್ಯಾರೆಂಟಿಗಳ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸರಕಾರ ರಾಜ್ಯದ ಜನತೆಗೆ ಕೇವಲ ಆಶ್ವಾಸನೆಗಳನ್ನು ನೀಡಿದೆ. ಕೃಷಿ, ಆರೋಗ್ಯ,ಸಹಕಾರ ಹಾಗೂ ನೀರಾವರಿ ಕ್ಷೇತ್ರಗಳಿಗೆ ಕೊಡ ಬೇಕಾದಂತಹ ಪ್ರಮುಖ ಆದ್ಯತೆಗಳನ್ನು ನೀಡಿಲ್ಲ. ಜನತೆಯ ಮೂಗಿಗೆ ತುಪ್ಪವನ್ನು ಸವರಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ನಿರಾಶದಾಯಕವಾದ ಬಜೆಟ್. ಪ್ರಗತಿಯ ನಾಗಾಲೋಟದಲ್ಲಿ ಸಾಗಬೇಕಾದಂತಹ ರಾಜ್ಯ ಹಲವಾರು ಗ್ಯಾರಂಟಿಗಳ ಭರದಲ್ಲಿ ರಾಜ್ಯವನ್ನು ಸಾಲದ ಸುಲಿಗಿ ಸಿಲುಕಿಸಿದೆ. ಪ್ರಗತಿದಾಯಕ ಇದಲ್ಲ.
Read More »ಜೆಸಿಬಿ ಕಾರ್ಯಾಚರಣೆ ವೇಳೆ ಮೇಘಾ ಗ್ಯಾಸ್ ಪೈಪ್ಲೈನ್ ಸೋರಿಕೆ: ಸ್ಥಳಕ್ಕೆ ಧಾವಿಸಿ ಅನಾಹುತ ತಪ್ಪಿಸಿದ ನಗರಸೇವಕ ನಿತೀನ್ ಜಾಧವ್
ಬೆಳಗಾವಿಯ ಹಿಂದವಾಡಿ ಭಾಗದಲ್ಲಿ ಇಂದು ಜೆಸಿಬಿ ಕಾರ್ಯಾಚರಣೆಯ ವೇಳೆ ಅನಿಲ ಪೈಪ್ಲೈನ್ ಸೋರಿಕೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯ ನಗರಸೇವಕರ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಬೆಳಗಾವಿಯ ಹಿಂದವಾಡಿ ಜೈನ್ ಕಾಲೇಜ್ ಪಕ್ಕದಲ್ಲಿರುವ ವಸತಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಮನೆಯ ಕಾಂಪೌಂಡ್ ಗೋಡೆ ಕಟ್ಟುವ ಉದ್ದೇಶದಿಂದ ಜೆಸಿಬಿ ಮೂಲಕ ಮಣ್ಣು ಅಗೆಯುವಾಗ, ಅಕಸ್ಮಾತ್ತಾಗಿ ಭೂಮಿಯ ಅಡಿಯಲ್ಲಿದ್ದ ಮೇಘಾ ಗ್ಯಾಸ್ ಕಂಪನಿಯ …
Read More »ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ: ಆಣ್ಣಾಸಾಹೇಬ್ ಜೊಲ್ಲೆ
ಬೆಳಗಾವಿಯಲ್ಲಿ ಶೈಕ್ಷಣಿಕ ಕಾರ್ಯಾಗಾರ ಭಾರತದಲ್ಲಿ ಜೀವ ವಿಮೆಯ ಬಗ್ಗೆ ಜಾಗೃತಿ ಮೂಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಮತ್ತು ಮುಂಬೈನ ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಬ್ರೋಕರ್ಸ್ ಪ್ರೈವೆಟ್ ಲಿಮಿಟೆಡ್’ನ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಧಾರವಾಡ, ಕಾರವಾರ, ಗದಗ ಹಾಗೂ ಹಾವೇರಿ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ …
Read More »ಬೆಳಗಾವಿ ಮಹಾಪಾಲಿಕೆಯಿಂದ ‘ಆಪರೇಷನ್ ಲೈಸೆನ್ಸ್’: ನಿಯಮ ಉಲ್ಲಂಘಿಸಿದ ಖ್ಯಾತ ಮಳಿಗೆಗಳಿಗೆ ಭಾರಿ ದಂಡ!
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಬೆನ್ನಲ್ಲೇ ಈಗ ನಗರದಾದ್ಯಂತ ಹೆಲ್ತ್ ಇನ್ಸ್ಪೆಕ್ಟರ್ಗಳ ತಂಡ ಅಖಾಡಕ್ಕಿಳಿದಿದೆ. ವ್ಯಾಪಾರ ಪರವಾನಗಿ ಪಡೆಯದೆ ವಹಿವಾಟು ನಡೆಸುತ್ತಿರುವ ದೊಡ್ಡ ದೊಡ್ಡ ಮಳಿಗೆಗಳಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ನಗರದ ಉತ್ತರ ಮತ್ತು ದಕ್ಷಿಣ ವಲಯದ ಆರೋಗ್ಯ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಸಮಾದೇವಿ ಗಲ್ಲಿಯಲ್ಲಿರುವ ಪ್ರಸಿದ್ಧ ‘ಕಲ್ಯಾಣಿ ಸ್ವೀಟ್ ಮಾರ್ಟ್’ ಮೇಲೆ ದಾಳಿ …
Read More »ಸಾಲದ ಭಾರ ಹೊರೆಸುವ ಬಜೆಟ್
ಲಕ್ಷಾಂತರ ಕೋಟಿ ಸಾಲದ ಭಾರ ಹಾಗೂ ಸಾವಿರಾರು ಸುಳ್ಳಿನ ಭರವಸೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ದಿಕ್ಕು-ದಿಶೆ ಇಲ್ಲದೆ, ಜನಸಾಮಾನ್ಯರ ಆಶಾ-ಆಕಾಂಕ್ಷೆಗಳಿಗೆ ಭಂಗ ತರುವಂತಹ ಬಜೆಟ್ ಇದಾಗಿದೆ.
Read More »ಸವುಳು- ಜವಳಿಗೆ: ಪ್ಯಾಕೇಜ್ ನೀಡಿ
ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …
Read More »ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ
ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …
Read More »
Laxmi News 24×7