Breaking News

ಬೆಳಗಾವಿ

ಬೆಳಗಾವಿಯಲ್ಲಿ ಆಲಿಕಲ್ಲು ಮಳೆಗೆ 39 ಕುರಿಗಳು ಬಲಿ; ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕುರಿಗಾಹಿ ಕುಟುಂಬ

ಬೆಳಗಾವಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಆಲಿಕಲ್ಲು ಮಳೆಯು ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಪ್ರಕೃತಿಯ ವಿಕೋಪಕ್ಕೆ ಬರೋಬ್ಬರಿ 39 ಕುರಿಗಳು ಬಲಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಹಾನಿಯಾಗಿದೆ. ಘಟನೆಯ ವಿವರ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ದಿಢೀರನೆ ಸುರಿದ ಆಲಿಕಲ್ಲು ಮಳೆಯ ತೀವ್ರತೆಗೆ ಸಿಲುಕಿದ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕುಟುಂಬಕ್ಕೆ ಆಘಾತ: ಮೃತಪಟ್ಟ ಕುರಿಗಳು ಶಂಕರ ಕರಜಗಿ ಎಂಬುವವರಿಗೆ ಸೇರಿದ್ದಾಗಿವೆ. ತಮ್ಮ ಜೀವನೋಪಾಯಕ್ಕೆ ಆಧಾರವಾಗಿದ್ದ ಕುರಿಗಳನ್ನು …

Read More »

ಬೆಳಗಾವಿ | ₹4,746 ಕೋಟಿ ಕಬ್ಬಿನ ಬಿಲ್‌ ಬಾಕಿ: 10 ಸಕ್ಕರೆ ಕಾರ್ಖಾನೆಗೆ ನೋಟಿಸ್‌

ಬೆಳಗಾವಿ: ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಶೇ 60ಕ್ಕಿಂತ ಕಡಿಮೆ ಬಿಲ್‌ ಪಾವತಿಸಿದ (ಫೆ.28ರ ವರೆಗೆ) 10 ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಆಯುಕ್ತರು ನೋಟಿಸ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳು 550 ಲಕ್ಷ ಟನ್‌ ಕಬ್ಬು ನುರಿಸಿ, 47.35 ಲಕ್ಷ ಟನ್‌ ಲಿ ಸಕ್ಕರೆ ಉತ್ಪಾದಿಸಿವೆ. ಒಟ್ಟು ₹22,171 ಕೋಟಿ ಬಿಲ್‌ ಪಾವತಿಸಬೇಕಿದ್ದು,₹4,741 ಕೋಟಿ ಬಾಕಿ ಉಳಿಸಿಕೊಂಡಿವೆ. ‘ವಿವಿಧ ಕಾರ್ಖಾನೆಗಳು ಬಿಲ್‌ ಪಾವತಿಸಿದ ಪ್ರಮಾಣ ಶೇ 78ರಷ್ಟಿದೆ. …

Read More »

15 ದಿನದ ಮಗುವಿಗೆ ತಂದೆ ವಿಷಪ್ರಾಶನ ?: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ತಾಯಿ

ಬೆಳಗಾವಿ: ಪ್ರಪಂಚವನ್ನೇ ಕಾಣದ 15 ದಿನದ ಮಗುವಿಗೆ ಪಾಪಿ ತಂದಯೇ ವಿಷಪ್ರಾಶನ ಮಾಡಿದ್ದಾನೆ ಎಂದು ಹೆತ್ತ ತಾಯಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ಘೋರ ಘಟನೆ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿದೆ. ಉಸಿರು ಚೆಲ್ಲಿದ ಮಗುವನ್ನು ನೋಡಲಾಗದೇ ಹೆತ್ತತಾಯಿ ಮೌನಕ್ಕೆ ಜಾರಿದ್ದಾರೆ. ಎರಡಯ ವಾರಗಳ ಹಿಂದೆಯಷ್ಟೇ ತಾಯಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು, ಮಗುವನ್ನು ನೋಡಲು ಬಂದ ತಂದನೇ ಕರುಳು ಬಳ್ಳಿಗೆ ವಿಷಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಇಂತಹ …

Read More »

ಭಾರಿ ಮಳೆ,ಗೋಡೆ ಕುಸಿದು ಮಹಿಳೆ ಸಾವು

ಬೆಳಗಾವಿ : ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಹಿಳೆಯೊಬ್ಬಳು ಮೃತಪಟ್ಟಿದ್ದು ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ ಹೊಸೂರ ಗ್ರಾಮದಲ್ಲಿ ನಡೆದಿದೆ. ವಂಟಮೂರಿ ಗ್ರಾಮದ ಪರ್ವಿನ್ ಬೇಪಾರಿ (34) ಮೃತ ದುರ್ದೈವಿ. ಸ್ವಲ್ಪದರಲ್ಲೇ ಪತಿ ಶರೀಫ್ ಪಾರಾಗಿದ್ದಾನೆ. ಕೋಳಿ ವ್ಯಾಪಾರಕ್ಕೆ ಹೊರಟಿದ್ದ ದಂಪತಿ ಮಳೆ ಬಂದ ಕಾರಣಕ್ಕೆ ಹಳೆಯದಾದ ಮನೆ ಪಕ್ಕ ನಿಂತಿದ್ದರು. ಈ ವೇಳೆ ಗೋಡೆ ಕುಸಿದಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಉಪಮೇಯರ್ ಆಯ್ಕೆ

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್ ಸ್ಥಾನಕ್ಕೆ ಹನುಮಂತ ಕೊಂಗಾಲಿ ಆಯ್ಕೆ ಕೋರ ಕಮಿಟಿ ಸಭೆ ನಡೆಸಿ ಮೇಯರ್, ಉಪಮೇಯರ್ ಸ್ಥಾನಗಳಿಗೆ ಹೆಸರು ಅಂತಿಮ 24ನೇ ಅವಧಿಗೆ ಮೇಯರ್ ಆಗಿ ನೇಕಾರರು ಸಮಾಜದ ಪ್ರೀತಿ ಕಾಮಕರ್ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಲಿಂಗಾಯತ ಸಮಾಜದ ಹನುಮಂತ ಕೊಂಗಾಲಿ ಆಯ್ಕೆ ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ ಹೇಳಿಕೆ ಪ್ರೀತಿ ಕಾಮಕರ್, ಹನುಮಂತ ಕೊಂಗಾಲಿ ಉಪಮೇಯರ್ ಆಗಿ ಆಯ್ಕೆ …

Read More »

ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ನೀಡಬೇಕು

ಖಾನಾಪುರ: ದೇಶದ ಭವಿಷ್ಯ ಕಟ್ಟುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ನೀಡುವಂತೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಅಲದಾಳ ಗ್ರಾಮದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಚಿವ ಸತೀಶ ಜಾರಕಿಹೊಳಿ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು  ಆದ್ಯತೆ ನೀಡಿದ್ದಾರೆ. ಪಾಲಕರು ಸರ್ಕಾರಿ ಸೌಲಭ್ಯಗಳ ಸದುಪಯೋಗ …

Read More »

ಚುನಾವಣೆ ಎದುರಿಸಲು ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಬೇಕು

ಬೆಳಗಾವಿ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಚುನಾವಣೆ ಎದುರಿಸಲು ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪ್ರದೇಶ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ  ವಿನಯಕುಮಾರ ಸೊರಕೆ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಳಗಾವಿ, ಗ್ರಾಮೀಣ ಜಿಲ್ಲಾ ಪ್ರಚಾರ ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂದು ನಿರ್ಲಕ್ಷಿಸಬಾರದು. ಪದಾಧಿಕಾರಿಗಳು, ಕಾರ್ಯಕರ್ತರು ಅಧಿಕಾರದ ಬದಲಾಗಿ ಪಕ್ಷಕ್ಕಾಗಿ ದುಡಿಯುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು …

Read More »

ಬೆಳಗಾವಿ:15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಬೆಳಗಾವಿ: 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನ ವ್ಯಕ್ತವಾಗಿದೆ. ಬೆಳಗಾವಿ  ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾನೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದ 28 ಶಾಲೆಗಳು ಕೇಂದ್ರದ ‘ಪಿಎಂ-ಶ್ರೀ’ ಯೋಜನೆಗೆ ಆಯ್ಕೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಪಿಎಂ-ಶ್ರೀ’ ಯೋಜನೆಯಡಿ ಬೆಳಗಾವಿ ಲೋಕಸಭಾ ಕ್ಷೇತ್ರದ 21 ಪ್ರಾಥಮಿಕ, 6 ಪ್ರೌಢ ಶಾಲೆಗಳು ಮತ್ತು 1 ಪದವಿ ಪೂರ್ವ ಸರ್ಕಾರಿ ಶಾಲೆಗಳನ್ನು ಅತ್ಯಾಧುನಿಕ ಹಾಗೂ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಶಿಕ್ಷಣ ಸಚಿವಾಲಯವು ಆಯ್ಕೆ ಮಾಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಿಎಂ-ಶ್ರೀ’ ಯೋಜನೆಯ ಅನುಷ್ಠಾನದ …

Read More »

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ; 15 ಕ್ಕೂ ಹೆಚ್ಚು ಸಿಲಿಂಡರ್ ವಶಕ್ಕೆ

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ ಮಾಡ್ತಿದ್ದ ಹೊಟೇಲ್ ಮಾಲೀಕರಿಗೆ ಆಹಾರ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅನಧಿಕೃತವಾಗಿ ಗ್ಯಾಸ್ ಬಳಕೆ ಮಾಡ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ನಗರದ ಸೋಲಾಪುರ ರಸ್ತೆಯ ಹೊಟೇಲ್ ಗಳಲ್ಲಿ ತಪಾಸಣೆ ನಡೆಸಿದ್ರು. ಈ ವೇಳೆ ಕೆಲ ಹೊಟೇಲ್ ಗಳಲ್ಲು ಅನಧಿಕೃತವಾಗಿ ಗೃಹ ಬಳಕೆ ಸಿಲೆಂಡರ್ ಉಪಯೋಗಿಸುತ್ತಿರೋದು ಕಂಡು ಬಂದಿದೆ. ಅನಧಿಕೃತವಾಗಿ ಬಳಕೆ ಮಾಡ್ತಿದ್ದ 15ಕ್ಕು ಅಧಿಕ ಗೃಹ ಬಳಕೆ ಸಿಲೆಂಡರ್‌ಗಳನ್ನ …

Read More »