ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುಕಾಲದ ಕನಸಾದ ‘ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ’ಯ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಯೋಜನೆಗೆ ಬೇಕಾದ ಬೃಹತ್ ಸಾಮರ್ಥ್ಯದ ಮೋಟಾರ್ಗಳು ಸಿದ್ಧಗೊಂಡಿವೆ. ಹೊಸೂರಿನ ಹೆಸರಾಂತ WEG ಮೋಟಾರ್ ತಯಾರಿಕಾ ಕಂಪನಿಯಲ್ಲಿ ಸಿದ್ಧವಾಗಿರುವ ಈ ಮೋಟಾರ್ಗಳನ್ನು ಇಂದು ನಾನು ಮತ್ತು ಇಂಜಿನಿಯರ್ಗಳ ತಂಡದೊಂದಿಗೆ ಭೇಟಿ ನೀಡಿ ಅಂತಿಮ ಹಂತದ ಪರಿಶೀಲನೆ ನಡೆಸಿದೆವು, ಈ ಏತ ನೀರಾವರಿ ಯೋಜನೆಯಲ್ಲಿ ನೀರನ್ನು ಮೇಲೆತ್ತಲು ಅತ್ಯಾಧುನಿಕ ತಂತ್ರಜ್ಞಾನದ …
Read More »ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ
ಬೆಳಗಾವಿ: ಒಳ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ, ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಹಾಗೂ …
Read More »ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ: ನ್ಯಾಯಾಧೀಶ ಮಂಜುನಾಥ ನಾಯಕ
ಬೆಳಗಾವಿ: ಮಕ್ಕಳ ರಕ್ಷಣಾ ಹಕ್ಕು ಮತ್ತು ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾ. 7ರಂದು ಜಿಲ್ಲೆಯ 1200 ಪ್ರೌಢಶಾಲೆಗಳಲ್ಲಿ ಒಂದೇ ಸಮಯಕ್ಕೆ ಏಕಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ ಅವರು ತಿಳಿಸಿದರು. ಜಿಲ್ಲಾ ನ್ಯಾಯಲಯದ ಸಭಾಂಗಣದಲ್ಲಿ ಜರುಗಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಪೋಕ್ಸೊ ಕಾನೂನು, ಬಾಲ ಕಾರ್ಮಿಕ ಪದ್ಧತಿ, ಬಾಲ್ಯವಿವಾಹದ, ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದಲ್ಲಿ ಏಕಕಾಲಕ್ಕೆ ಕಾರ್ಯಕ್ರಮಗಳನ್ನು …
Read More »ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ …
Read More »ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ
ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) …
Read More »ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ
ಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು ಗೋವಾ ರಾಜ್ಯದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಪೊಲೀಸ್ ರು ಬಂಧಿಸಿದ್ದಾರೆ. ಅಬಕಾರಿ ಪೊಲೀಸರು ದಾಳಿ ಮಾಡಿ ತಾಲೂಕಿನ ಮುತ್ನಾಳ ಗ್ರಾಮದ ಅರುಣ ರಾಜು ವಾಘಮೋರೆ (21) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹಬ್ಬದಲ್ಲಿ ಭರ್ಜರಿ ವ್ಯಾಪಾರ ಮಾಡಬೇಕೆಂಬ ಉದ್ದೇಶದಿಂದ ಮುತ್ನಾಳ ಗ್ರಾಮದ ಹೊರವಲಯದ ಶೆಡ್ ನಲ್ಲಿ ಗೋವಾ …
Read More »ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …
Read More »ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚಿದೆ
ನಿಪ್ಪಾಣಿ: ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು. ತಾಲೂಕಿನ ಕಾರದಗಾ ಗ್ರಾಮದ ಜಿಪಂ ಮಾಜಿ ಸದಸ್ಯೆ ಸುಮಿತ್ರಾ ಉಗಳೆ ಹಾಗೂ ಸುದೀಪ …
Read More »ಸ್ವಯಂ ಉದ್ಯೋಗದಿಂದ ನಿಶ್ಚಿತ ಗುರಿ ಸಾಧ್ಯ
ರಾಮದುರ್ಗ: ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಆತ್ಮವಿಶ್ವಾಸದೊಂದಿಗೆ ಸ್ವಯಂ ಉದ್ಯೋಗ ಕೆಗೊಂಡದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ ಎಂದು ವಿರಕ್ತಮಠ ಟ್ರಸ್ಟ್ ಅಧ್ಯ ಪ್ರದಿಪಕುಮಾರ ಪಟ್ಟಣ ಹೇಳಿದರು. ನಗರದ ಅರಮನೆ ಆವರಣದಲ್ಲಿರುವ ಕ್ಯಾಂಬ್ರೀಡ್ಜ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈಚೆಗೆ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶಿಣದ ಪಾತ್ರ ಅಲ್ಲಗಳೆಯುವಂತಿಲ್ಲ. ಪಾಲಕರು …
Read More »ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆ: ಮುರುಂದ್ರ ಸ್ವಾಮೀಜಿ
ಸವದತ್ತಿ: ಸಮಾನತೆ, ಸಾಮರಸ್ಯ ಹಾಗೂ ಸಂಸ್ಕಾರಗಳ ಮಹತ್ವ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಂದ್ರ ಸ್ವಾಮೀಜಿ ಹೇಳಿದರು. ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೇಣುಕಾಚಾರ್ಯರ ಉಪದೇಶಗಳು ಶಾಂತಿ ಮತ್ತು ಸೌಹಾರ್ದ ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಉದ್ಯಮಿ ಅಶ್ವತ್ಥ ವೈದ್ಯ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದ ಬೆಳವಣಿಗೆಗೆ ರೇಣುಕಾಚಾರ್ಯರ …
Read More »
Laxmi News 24×7