ಮಮದಾಪುರ: ಕತ್ತಲದಿಂದ ಅಧರ್ಮ ಜ್ಯೋತಿ ಮಾಯವಾಗಿ ಬೆಳಕಿನಡೆಗೆ ಧರ್ಮದ ಜ್ಯೋತಿ ನಿರಂತರವಾಗಿ ಬೆಳಗಲಿ ಎಂದು ನದಿ ಇಂಗಳಗಾಂವನ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಗುರುಲಿಂಗ ಜಂಗಮ ಮಠದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಯುಗಾದಿ ಮಹೋತ್ಸವ, ಶರಣ ಸಂಸ್ಕೃತಿ ಹಾಗೂ ಪ್ರವಚನ ಮಂಗಲೋತ್ಸವದ ಧರ್ಮಸಭೆಯಲ್ಲಿ ಮಾತನಾಡಿದರು. ಮುರುಘೇಂದ್ರ ಶಿವಯೋಗಿಗಳು ಅಥಣಿಯಿಂದ ಅಂಕಲಗಿ ಅಡವಿಸಿದ್ದೇಶ್ವರ ಮಠದವರೆಗೆ ಪಾದಯಾತ್ರೆ ಮೂಲಕ ಸಂಚರಿಸುವ ಸಂದರ್ಭದಲ್ಲಿ ತೆಪ್ಪೋತ್ಸವ ನೆರವೇರಿಸಿದ ಕೊಳವಿ ಗ್ರಾಮದ ಗುರುಲಿಂಗ ಜಂಗಮ …
Read More »ದ್ಯಾಮವ್ವದೇವಿ ಹಾಗೂ ದುರ್ಗಾದೇವಿ ಜಾತ್ರಾ ಮಹೋತ್ಸವ ಹೊನ್ನಾಟದಲ್ಲಿ ಮಿಂದೆದ್ದ ಭಕ್ತಗಣ
ಮಲ್ಲಮ್ಮನ ಬೆಳವಡಿ: ಸಮೀಪದ ಪಟ್ಟಿಹಾಳ ಕೆ.ಬಿ.ಗ್ರಾಮದಲ್ಲಿ ದ್ಯಾಮವ್ವದೇವಿ ಹಾಗೂ ದುರ್ಗಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಅದ್ದೂರಿ ಹೊನ್ನಾಟ ಜರುಗಿತು. ತಳಿರು-ತೋರಣ ಹಾಗೂ ರಂಗೋಲಿ ಚಿತ್ತಾರಗಳಿಂದ ಗ್ರಾಮದ ಪ್ರಮುಖ ಬೀದಿಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದವು. ಗ್ರಾಮದ ಗುರು-ಹಿರಿಯರು ಅದ್ದೂರಿ ಹೊನ್ನಾಟಕ್ಕೆ ಚಾಲನೆ ನೀಡಿದರು. ವಿವಿಧ ವಾದ್ಯಮೇಳಗಳೊಂದಿಗೆ ಸಾಗಿದ ಹೊನ್ನಾಟದಲ್ಲಿ ಭಕ್ತರೆಲ್ಲ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮ ಸೇರಿ ಸವಟಗಿ, ಖೊದಾನಪುರ ಸೇರಿ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಶ್ರದ್ಧಾ, ಭಕ್ತಿಯಿಂದ ದ್ಯಾಮವ್ವದೇವಿ ಹಾಗೂ ದುರ್ಗಾದೇವಿಯರಿಗೆ …
Read More »ಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳು ಜಾರಿ
ಚಿಕ್ಕೋಡಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿ.ಎಂ ಆವಾಸ , ಜಲ ಜೀವನ, ಸ್ವಾಭಿಮಾನದ ಭಾರತ ಯೋಜನೆಗಳಂತಹ ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರ ಜೀವನ ಮಟ್ಟದ ಸುಧಾರಣೆಗೆ ಶ್ರಮಿಸುತ್ತಿದೆ ಎಂದು ವಿ.ಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅಭಿಪ್ರಾಯಪಟ್ಟರು. ಪಟ್ಟಣದ ಕೇಶವ ಕಲಾಭವನದಲ್ಲಿ ಕುಡಚಿ ಮಂಡಲ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಪಂಡಿತ ದೀನದಯಾಳ್ ಉಪಾಧ್ಯಾಯ ಶಿಕ್ಷಣ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡ ಮತ್ತು ಮಧ್ಯಮ …
Read More »ಕೆರೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ
ಬೆಳಗಾವಿ: ಕೆರೆಗಳ ಅಭಿವೃದ್ದಿಯಿಂದ ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಸಹಕಾರಿಯಾಗಲಿದೆ, ಕೆರೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ಯಾಸ್ ಫೌಂಡೇಶನ್ ಅಧ್ಯಕ್ಷ ಡಾ.ಮಾಧವಪ್ರಭು ಅಭಿಪ್ರಾಯಪಟ್ಟರು. ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿವವಾಡಿ ಗ್ರಾಮದಲ್ಲಿ ‘ಪ್ಯಾಸ್ ಫೌಂಡೇಶನ್’ ವತಿಯಿಂದ ಸಿಎಸ್ಆರ್ ಸಂಸ್ಥೆ ಮತ್ತು ಎಕೆಪಿ ಫೆರೋಕಾಸ್ಟ’ ಯೋಜನೆಯೊಂದಿಗೆ ಹಮ್ಮಿಕೊಂಡಿದ್ದ ಎರಡು ಕೆರೆಗಳ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾರ್ಯಕ್ಕೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೆರೆ ಹೂಳು ತೆಗೆಯುವುದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ …
Read More »ವದಂತಿಗೆ ಹೆಚ್ಚಿದ ಸಿಲಿಂಡರ್ ಬುಕ್ಕಿಂಗ್
ಚಿಕ್ಕೋಡಿ: ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ವದಂತಿ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂಬ ಜಿಲ್ಲಾಡಳಿತ ಭರವಸೆ ನಡುವೆಯು ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ ಹೆಚ್ಚಾಗಿದ್ದು, ಬುಕ್ ಮಾಡಿದರೂ ಸಿಲಿಂಡರ್ ಪೂರೈಸುತ್ತಿಲ್ಲ ಎಂಬ ದೂರು ಗ್ರಾಹಕರಿಂದ ಕೇಳಿ ಬರುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ರಾಜ್ಯಕ್ಕೆ ಅನಿಲ ಪೂರೈಕೆಯಲ್ಲಿನ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ ಗ್ಯಾಸ್ ಸಿಲಿಂಡರ್ ಅಭಾವದ ವದಂತಿಯಿಂದ ಜನರು ತಮ್ಮ ಬಳಿ ಇರುವ ಹೆಚ್ಚುವರಿ ಸಿಲಿಂಡರ್ ತುಂಬಿಸಿಕೊಳ್ಳಲು ಗಣನೀಯ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ
ಚಿಕ್ಕೋಡಿ: ಪಟ್ಟಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದು, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಿಂದ 14.48 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು. ಪಟ್ಟಣದ ಝಾರಿ ಗಲ್ಲಿ, ವಿಠ್ಠಲ ದಾಮೋದರ ನಗರ, ಆರ್. ಕೆ ಕಾಲೋನಿ, ಹುಡ್ಕೊ ಕಾಲೋನಿ, ಬಸವೇಶ್ವರ ನಗರ ಹಾಗೂ ಸಾಯಿ ಮಂದಿರ ಬಳಿ ಚರಂಡಿ, ಸೋಮವಾರ ರಸ್ತೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಂತದಲ್ಲಿ 3 ಕೋಟಿ ರೂ.ವೆಚ್ಚದ ಕಾಮಗಾರಿಗೆ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ …
Read More »ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್ & ಅಭಯ್
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಈ ಇಬ್ಬರು ರಾಜಕೀಯ ಬದ್ಧ ವೈರಿಗಳು ಅಕ್ಕ-ಪಕ್ಕ ನಿಂತು ಗಮನ ಸೆಳೆದರು. ಹೌದು… ಇಂದು ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಅಕ್ಕ-ಪಕ್ಕದಲ್ಲಿ ನಿಂತರೂ ಈ ಇಬ್ಬರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ. …
Read More »ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ
ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣಕ್ಕೆ ಹೊಟೆಲ್ ಬಂದ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ. ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಹನುಮಾನ ಹೊಟೆಲ್ ಮಾಲೀಕರಾಗಿದ್ದ ರಾಮು. ಮಾರ್ಚ್ ಅಂತ್ಯದ ವೇಳೆ ಬಡ್ಡಿ ಹಣವನ್ನ ಕಟ್ಟಬೇಕಿದ್ದ ರಾಮು. ಇದೇ ಹೊತ್ತಲ್ಲಿ ಹೊಟೆಲ್ …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆ, ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು; ತರಕಾರಿ, ಹಣ್ಣುಗಳು ನೀರುಪಾಲು
ಬೆಳಗಾವಿಯಲ್ಲಿ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆ, ಅಂಗಡಿಗಳು, ಮಾರ್ಕೆಟ್, ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಂಪೂರ್ಣ ಪೋರ್ಟ್ ರೋಡ್ ನೀರಿನಿಂದ ತುಂಬಿಕೊಂಡಿರುವುದರಿಂದ ರವಿವಾರ ಪೇಟೆ ಬೆಲ್ಲದ ಮಾರ್ಕೆಟ್ ಹಾಗೂ ಕಾಂದಾ ಮಾರುಕಟ್ಟೆ ನದಿಯಂತಾಗಿದೆ. ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು, ಹೂಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ವ್ಯಾಪಾರಸ್ಥರು ಪರದಾಡುವಂತಾಯಿತು. ಕೆಲ ನಿವಾಸಿಗಳು ಕಸಗಳನ್ನು ತಂದು ಘಟಾರಕ್ಕೆ ಸುರಿಯುವುದರಿಂದ ಮಳೆ ನೀರು ಸರಾಗವಾಗಿ ಹರಿಯದೆ …
Read More »
Laxmi News 24×7