ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
ಬೆಳಗಾವಿ: ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಸವಣ ಕುಡಚಿ ಗ್ರಾಮದ ಹದ್ದಿಯಲ್ಲಿ ಬರುವ ಶಿಂದೊಳ್ಳಿ ಕ್ರಾಸ್ ಮತ್ತು ಬಸವನ ಕುಡಚಿ ಗ್ರಾಮದ ಹತ್ತಿರ ಇರುವ ಸರಾಯಿ ಅಂಗಡಿಯನ್ನು ಮಾ. 16 ಹಾಗೂ 17 ರಂದು ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್ಗಳು, ಕ್ಲಬ್ಗಳು ಬಂದ್ ಇಡುವಂತೆ ಬೆಳಗಾವಿ ನಗರ ಪೊಲೀಸ್ …
Read More »ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ವಿತರಣೆ
ಹುಕ್ಕೇರಿ: ಪಟ್ಟಣದ ವಿಶ್ವರಾಜ ಭವನದಲ್ಲಿ ಆನ್ಲೈನ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಬೆಂಗಳೂರು ಮತ್ತು ಕಬ್ಬೂರಿನ ಬಿ.ಜಿ.ಬೆಲ್ಲದ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಆಧಾರಿತ 50 ಉಚಿತ ಸ್ಮಾರ್ಟ್ ಬೋರ್ಡ್ ಹಾಗೂ ಕೊಠಡಿಗಳ ನವೀಕರಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ, ಪೀಠೋಪಕರಣ, ಆಟೋಪಕರಣ ವಿತರಣೆ ಸಮಾರಂಭ ಮಾ.13ರಂದು ಬೆಳಗ್ಗೆ 10.30ಕ್ಕೆ ಹುಕ್ಕೇರಿಯ ವಿಶ್ವರಾಜ ಭವನದಲ್ಲಿ ಜರುಗಲಿದೆ. ನಿಡಸೋಸಿ ದುರುದುಂಡೀಶ್ವರ ಸಿದ್ಧ ಸಂಸ್ಥಾನ …
Read More »ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ
ಮತದಾರರ ಪಟ್ಟಿಯ ವಿಶೇಷ ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಪ್ರಕ್ರಿಯೇ ಪ್ರಗತಿ ಹಂತದಲ್ಲಿದ್ದು, ಜಿಲ್ಲೆಯಲ್ಲಿ ಶೇ.75ರಷ್ಟು ಪೂರ್ಣಗೊಂಡಿದ್ದು, ವಾರದಲ್ಲಿ ಮ್ಯಾಪಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ಮುಂದಿನ ಭಾನುವಾರ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಡಿದ ಅವರು, ಮತದಾರರ ಪಟ್ಟಿ ಮ್ಯಾಪಿಂಗ್ ಬೇಗ ಪೂರ್ಣಗೊಳಿಸಿ ಚುನಾವಣೆ ಆಯೋಗ ಸಲ್ಲಿಸಬೇಕು. …
Read More »ಬೆಳಗಾವಿ: ಮಹಾರಾಷ್ಟ್ರದಿಂದ ನೀರು ಬಿಡುಗಡೆ ಪ್ರಯತ್ನ
ಬೆಳಗಾವಿ: ಬೇಸಿಗೆಯಲ್ಲಿ ಜನ, ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಂಟು ಟಿಎಂಸಿ ನೀರು ಬಿಡುಗಡೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ನೀರು …
Read More »ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ
ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆವರಣದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 79ಕ್ಕೂ ಅಧಿಕ ಸಕ್ಕರೆ ಕಾರ್ಖಾನೆಗಳು 4,700 ಕೋಟಿ ರೂ. ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಬೆಳಗಾವಿ ಜಿಲ್ಲೆಯ 21 ಸಕ್ಕರೆ ಕಾರ್ಖಾನೆಗಳು 1,200 ಕೋಟಿ ರೂ. ಬಿಲ್ ಬಾಕಿ …
Read More »ಕೆಎಲ್ಇ ಆಸ್ಪತ್ರೆಯಲ್ಲಿ ಬೇಸಿಕ್ ಲೈಫ್ ಸಪೋರ್ಟ್ ತರಬೇತಿ ಕಾರ್ಯಕ್ರಮ
ಬೆಳಗಾವಿ: ವ್ಯಕ್ತಿಯ ಹಿನ್ನೆಲೆಯನ್ನು ಗುರುತಿಸದೇ ಆತನ ಜೀವ ಉಳಿಸುವಲ್ಲಿ ಬೇಸಿಕ್ ಲೈಫ್ ಸಪೋರ್ಟ್ನ ಕೌಶಲ್ಯಗಳು ಅತ್ಯುಪಯುಕ್ತವಾಗಿವೆ ಎಂದು ಯುಎಸ್ಎಂಕೆಎಲ್ಇ ನಿರ್ದೇಶಕ ಡಾ. ಹೆಚ್ ಬಿ ರಾಜಶೇಖರ ಹೇಳಿದರು. ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಕ್ ಲೈಫ್ ಸಪೋರ್ಟ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವ ವೈದ್ಯರು ತರಬೇತಿಯನ್ನು ಮನನ ಮಾಡಿಕೊಂಡು ಸಕಾಲದಲ್ಲಿ ಉಪಯೋಗಿಸಿಕೊಂಡು ತೊಂದರೆಗೀಡಾದ ವ್ಯಕ್ತಿಯ ಜೀವ ಉಳಿಸುವಲ್ಲಿ …
Read More »ಗೋಕಾಕ-ಧಾರವಾಡ ಹೆದ್ದಾರಿ ಮೇಲ್ದರ್ಜೆಗೆ 86.40 ಕೋಟಿ ರೂ. ಅನುದಾನ ಬಿಡುಗಡೆ ಮನವಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 80.33 ಕಿಮೀ ಉದ್ದದ ರಸ್ತೆ ಸುಧಾರಣೆಗೆ ಕೇಂದ್ರ ಮೂಲಸೌಕರ್ಯ ರಸ್ತೆ ನಿಧಿ ಯೋಜನೆ ಅಡಿಯಲ್ಲಿ 86.40 ಕೋಟಿ ರೂ. ಅನುದಾನ ಬಿಡುಗಡೆ ಕೇಂದ್ರ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ದೆಹಲಿಯ ಹೊಸ ಸಂಸದ ಭವನದಲ್ಲಿ ಗುರುವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಬೆಳಗಾವಿ ಲೋಕಸಭಾ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು. …
Read More »ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ನಾಮಫಲಕ ಉದ್ಘಾಟನೆ
ಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ಎನ್ನುವ ನಾಮಫಲಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಗ್ರಾಮಗಳ ಅಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದ್ದು, ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದರು. ಸಾಂಬ್ರಾ …
Read More »ಐಐಐಟಿಯಲ್ಲಿ ಜರುಗಿದ ಪ್ರದರ್ಶನದಲ್ಲಿ ಉತ್ತಮ ಸಾಧನೆ ಮಾಡಿದ ಎಸ್ಜಿಬಿಐಟಿ ವಿದ್ಯಾರ್ಥಿಗಳು
ಬೆಳಗಾವಿ: ಧಾರವಾಡದ ಐಐಐಟಿಯಲ್ಲಿ ಈಚೆಗೆ ಜರುಗಿದ ನೈನ್ 2.0 ಪದವಿ ಮತ್ತು ಯೋಜನಾ ಪ್ರದರ್ಶನದಲ್ಲಿ ನಗರದ ಎಸ್ಜಿಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿ ಪ್ರದರ್ಶಿಸಿದ್ದ ಯೋಜನೆಗಳಿಗೆ ತಲಾ 2 ಲಕ್ಷ ರೂ. ಅನುದಾನದೊಂದಿಗೆ ಮೊದಲ ಮತ್ತು ದ್ವಿತೀಯ ಅತ್ಯುತ್ತಮ ಯೋಜನಾ ಪ್ರಶಸ್ತಿ ಲಭಿಸಿದೆ. ಈ ಪ್ರದರ್ಶನದಲ್ಲಿ ಎಸ್ಜಿಬಿಐಟಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಒಟ್ಟು 10 ಯೋಜನೆಗಳು ಮೌಲ್ಯಮಾಪನ ಸಮಿತಿ ಮತ್ತು ವಿದ್ಯಾರ್ಥಿಗಳಿಂದ ಹೆಚ್ಚಿನ ಮೆಚ್ಚುಗೆ ಪಡೆದವು. ಅದರಲ್ಲಿ ‘ಲಘು ಸಂಚಾರಕ್ಕಾಗಿ ಪ್ಲಾಸ್ಟಿಕ್ ಮತ್ತು ಮರಳನ್ನು …
Read More »
Laxmi News 24×7