ಸಿನೀಮಿಯ ರೀತಿ ಹಂಟಿಂಗ್ ಮಾಡಿದ ಹಾರೂಗೇರಿ ಪೊಲೀಸರು ಬೆಳಗಾವಿ ಜಿಲ್ಲೆಯ ಹಾರೋಗೇರಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ ಡಕಾಯತಿ ಮಾಡಿ ಗೋವಾ ಕ್ಯಾಸಿನೋ ಹೋಗ್ತಿದ್ದ ಖದೀಮರು 7 ಜನ ಡಕಾಯಿತರನ್ನ ಬಂಧಿಸಿ 36 ಲಕ್ಷ 11 ಸಾವಿರ ಮೌಲ್ಯದ ಚಿನ್ನಾಭರಣ, ನಗದು ಹಣ ಜಪ್ತಿ ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಹಾರಾಷ್ಟ್ರ ಜಾಲನಾ ಜಿಲ್ಲೆ ತಾಂಡಾದಲ್ಲಿದ್ದ ಖದೀಮರು ಅರೆಸ್ಟ್ ಮಾಡಲು ಹೋಗಿದ್ದ ಮಹಾರಾಷ್ಟ್ರ ಪೊಲೀಸ್ …
Read More »ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ ಮೇಲೆ ನಂದಗಡ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ಈ ಮೂಲಕ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದ ಸುತ್ತಮುತ್ತಲಿನ ಹಳ್ಳಿಗಳ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಭೀಮಪ್ಪ ಯಲ್ಲಪ್ಪ ದಳವಾಯಿ ಎಂಬಾತ ಕಲ್ಲಪ್ಪ ಮೀಟಗಾರ ಎಂಬುವವರ ಜಮೀನಿನ ಹತ್ತಿರದ ಹಳ್ಳದಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದನು. ಇದರಿಂದಾಗಿ …
Read More »ಬೆಳಗಾವಿಯಲ್ಲಿ ಆಟೊ ಗ್ಯಾಸ್ಗೆ ಪರದಾಟ
ಬೆಳಗಾವಿ: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕರಿನೆರೆಳು ದೇಶದ ಕೆಲ ಜನರ ಬದುಕನ್ನು ಬುಡಮೇಲು ಮಾಡಿದ್ದು, ಮಧ್ಯಮ ವರ್ಗದ ಜನರ ಪಾಡಂತೂ ಹೇಳತೀರದಾಗಿದೆ. ಹೌದು… ಕುಂದಾನಗರಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ವ್ಯತ್ಯಯದಿಂದ ಹೋಟೆಲ್ಗಳ ಬಾಗಿಲು ಮುಚ್ಚುತ್ತಿದ್ದರೆ ಸಿಎನ್ ಜಿ ಗ್ಯಾಸ್ ಕೊರತೆಯಿಂದ ಆಟೊ ಚಾಲಕ ಬದುಕಿಗೂ ಪೆಟ್ಟು ಬಿದ್ದಿದೆ. ಈ ಚಾಲಕರು ಹೊತ್ತಿನ ಊಟಕ್ಕಾಗಿ ದುಡಿದ ತಿನ್ನುವ ಶ್ರಮಿಕರು. ನಗರದಲ್ಲಿ ನಿತ್ಯ ಆಟೊ ಓಡಾಡಿಸಿಕೊಂಡು ದುಡಿದರೆ ಮಾತ್ರ …
Read More »ಬೆಳಗಾವಿಯಲ್ಲಿ ಸಿಲಿಂಡರ್ ಅಭಾವ: ನಡು ರಸ್ತೆಯಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ
ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಎಲ್ಲಡೆ ಬೀರಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗದ ಕಾರಣ ಜನ ರೊಚ್ಚಿಗೆದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಲಿಂಡರ್ ಸಿಗದ ಕಾರಣ ಕಂಗಾಲಾದ ಜನ ರೊಚ್ಚಿಗೆದ್ದು ನಡುರಸ್ತೆಯಲ್ಲೇ ಸಿಲಿಂಡರ್ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಕಳೆದೊಂದು ತಿಂಗಳಿನಿಂದ ಬುಕ್ ಮಾಡಿದರು ಸಿಲಿಂಡರ್ ಸಿಗುತ್ತಿಲ್ಲ. ಸಿಲಿಂಡರ್ ಕಚೇರಿಗೆ ಹೋದರು ಯಾರು ಕ್ಯಾರೆ …
Read More »ಕ್ಷುಲ್ಲಕ ಕಾರಣಕ್ಕೆ ಆಟೋ ಡ್ರೈವರ್ಗಳ ನಡುವೆ ಮನಸ್ತಾಪ ಕೊಲೆಯಲ್ಲಿ ಅಂತ್ಯ
ಚಿಕ್ಕೋಡಿ:ರೀಕ್ಷಾ ಚಾಲಕರ ನಡುವೆ ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ಸಲುವಾಗಿ ವಾಗ್ವಾದ. ಸರತಿ ಸಾಲಿನಲ್ಲಿ ರಿಕ್ಷಾ ನಿಲ್ಲಿಸುವ ಆಟೋ ಚಾಲಕರ ನಡುವೆ ವೈಮನಸ್ಸು. ಮಂಗಸೂಳಿ ಗ್ರಾಮದಲ್ಲಿ ಓರ್ವ ಆಟೋ ಚಾಲಕನ್ನ ಕೊಲೆ ಮಾಡಿದ ಆಟೋಚಾಲಕರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಾ ವಡ್ಡರ,ಸಾಗರ ವಡ್ಡರ, ವಿನೋದ್ ವಡ್ಡರ ಬಂಧಿತ ಆರೋಪಿಗಳು. ಅಶೋಕ ವಡ್ಡರ (27) ಮೃತ ದುರ್ದೈವಿ. ಅಶೋಕ ವಡ್ಡರ ಹಾಗೂ ಬಂಧಿತ ಆರೋಪಿಗಳ …
Read More »ಮಾನವೀಯತೆ ಮರೆತ ಪಾಪಿ ತಂದೆ: ಸ್ವಂತ ಮಗಳ ಮೇಲೆಯೇ ದೌರ್ಜನ್ಯ — ತಾಯಿಯೂ ಸಾಥ್, ಬಂಧನ
ಬೆಳಗಾವಿ: ಸಮಾಜ ತಲೆತಗ್ಗಿಸುವಂತ ಅಮಾನವೀಯ ಘಟನೆಯೊಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ತಂದೆಯೇ ಭಕ್ಷಕನಾಗಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ …
Read More »ಅಂಚೆ ಕಚೇರಿ ದಿಢೀರ್ ಸ್ಥಳಾಂತರ: ಎಂ.ಕೆ. ಹುಬ್ಬಳ್ಳಿಯಲ್ಲಿ ಮಹಿಳೆಯರ ರೌದ್ರಾವತಾರ!
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಉಪ ಅಂಚೆ ಕಚೇರಿಯನ್ನು ಯಾವುದೇ ಪೂರ್ವ ಸೂಚನೆ ನೀಡದೆ ದಿಢೀರ್ ವರ್ಗಾವಣೆ ಮಾಡುತ್ತಿರುವುದನ್ನು ಖಂಡಿಸಿ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದರು. ಅಂಚೆ ಕಚೇರಿಯ ಮುಂದೆ ಜಮಾಯಿಸಿದ ನೂರಾರು ಮಹಿಳೆಯರು ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 50 ವರ್ಷಗಳಿಂದ ಇದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿರುವ ಈ ಅಂಚೆ ಕಚೇರಿಯನ್ನು ಯಾವುದೇ ಮುನ್ಸೂಚನೆ ಇಲ್ಲದೆ …
Read More »ಶ್ರೀ ರೇಣುಕಾ ಯಲ್ಲಮ್ಮನ ಸನ್ನಿಧಿಯಲ್ಲಿ ಅಕ್ರಮ ಸಾರಾಯಿ ಮಾರಾಟ: ಕಾರ್ಯಾಚರಣೆಯಲ್ಲಿ ಆರೋಪಿಗಳ ಬಂಧನ
ಶ್ರೀ ರೇಣುಕಾ ಯಲ್ಲಮ್ಮನ ಸನ್ನಿಧಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎಂಬ ನಿಖರ ಮಾಹಿತಿಯ ಆಧಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ಗುಡ್ಡ ಪ್ರದೇಶದ ವಿವಿಧ ಸ್ಥಳಗಳಲ್ಲಿ ಸಮನ್ವಯಿತ ಕಾರ್ಯಾಚರಣೆ ಕೈಗೊಂಡು, ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅಕ್ರಮ ಸಾರಾಯಿ ಮತ್ತು ಸಂಬಂಧಿತ ಸಾಮಗ್ರಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದು, ಆರೋಪಿಗಳ ವಿರುದ್ಧ ಸಂಬಂಧಿತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ತಡೆಯೊಡ್ಡಲು …
Read More »ಬೆಳಗಾವಿ ಹಾಲು ಸಂಘಕ್ಕೆ 12.59 ಕೋಟಿ ರೂ. ಲಾಭ, ಬೆಳಗಾವಿಗೆ ಮೆಗಾ ಡೈರಿ: ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ 12 ಕೋಟಿ ರೂ. 59 ಲಕ್ಷ ನಿಕರಿ ಲಾಭ ಗಳಿಸಿದ್ದು, 510 ಕೋಟಿ ರೂ. ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮತ್ತು ಬೆಳಗಾವಿಗೆ ಮೆಗಾ ಡೈರಿ ನಿರ್ಮಾಣ ಮಾಡಲು ಈಗಾಗಲೇ ಒಂದು ಯೋಜನೆ ರೂಪಿಸಿದೆ ಎಂದು ಬೆಮುಲ್ ಅಧ್ಯಕ್ಷ, ಶಾಸಕಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿಯಲ್ಲಿ …
Read More »ಯಮಕನಮರಡಿ ಬಳಿ ದುರಂತ – 6 ಯುವಕರು ಈಜಲು ಹೋಗಿ 2 ಜನರ ದುರ್ಘಟನೆ ಮರಣ
ಯಮಕನಮರಡಿ ಸಮೀಪದ ಸಣಿಪ್ ಪ್ರದೇಶದಲ್ಲಿರುವ ಹೊಳೆಗೆ ಈಜಲು ತೆರಳಿದ್ದ 6 ಯುವಕರಲ್ಲಿ ಇಬ್ಬರು ದುರ್ಘಟನೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಉಳಿದ 4 ಯುವಕರು ಅತೀವ ಕಷ್ಟಪಟ್ಟು ತಮ್ಮನ್ನು ತಾವು ರಕ್ಷಿಸಿಕೊಂಡು ಸುರಕ್ಷಿತವಾಗಿ ಹೊರಬಂದಿದ್ದಾರೆ. ಮಾಹಿತಿಯ ಪ್ರಕಾರ, ಯುವಕರು ಸ್ನೇಹಿತರಾಗಿ ಸೇರಿಕೊಂಡು ಹೊಳೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಆಳ ಹಾಗೂ ಪ್ರವಾಹದ ತೀವ್ರತೆ ಹೆಚ್ಚಿರುವುದರಿಂದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡ ತಕ್ಷಣ …
Read More »
Laxmi News 24×7