ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …
Read More »ಅಥಣಿ:ಡಯಾಬಿಟಿಸ್ಗೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿನಿ
ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತಡರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ದುರ್ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಂಜಲಿ ಮಂಜುನಾಥ್ ಗುಜ್ಜರ್ (14) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಪ್ರತಿದಿನವೂ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಳು ಎನ್ನಲಾಗಿದೆ. ನಿನ್ನೆ ಏಕಾಏಕಿ ಅಂಜಲಿ ಪ್ರಜ್ಞಾಹೀನ …
Read More »ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನಹರಿಸಲಿ
ಅಥಣಿ ಗ್ರಾಮೀಣ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ ಕಲಿಕಾ ಗುಣಮಟ್ಟದಲ್ಲಿ ಯಶಸ್ವಿಯಾಗುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಾರಣ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭ ಹಾಗೂ ಸ್ನೇಹಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಲವಾರು ಸಾಹಿತಿಗಳು, ತತ್ತ್ವಜ್ಞಾನಿಗಳು ಕಾಯಕ ನಿಷ್ಠೆ ಹಾಗೂ ನಿರಂತರ ಪ್ರಯತ್ನದಿಂದ ಸಾಧಕರಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಅರಿತು ಮೊಬೈಲ್, …
Read More »ಇಷ್ಟಲಿಂಗ ಪೂಜೆಯಿಂದ ಸಂಕಷ್ಟ ದೂರ
ಅಥಣಿ: ಇಷ್ಟಲಿಂಗ ಪೂಜೆಯಿಂದ ಸಂಕಷ್ಟ ದೂರವಾಗುತ್ತವೆ. ಮಾನಸಿಕ ನೆಮ್ಮದಿ, ಶಾಂತಿ, ಸಮಾಧಾನ ಲಭಿಸಲು ನಿತ್ಯ ಲಿಂಗಪೂಜೆ ರೂಢಿಸಿಕೊಳ್ಳಬೇಕೆಂದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಇಲ್ಲಿನ ಗಚ್ಚಿನಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಸಹಜ ಶಿವಯೋಗ ಕಾರ್ಯಕ್ರಮದಲ್ಲಿ ಮಾತನಾಡಿ, ಭಕ್ತಿಭಾವದಿಂದ ಶಿವನನ್ನು ಆರಾಽಸಬೇಕು. ದಿನಕ್ಕೆ ಸೀಮಿತಗೊಳಿಸದೆ ನಿತ್ಯವೂ ಶಿವರಾತ್ರಿಯಾಗಬೇಕು. ಗಚ್ಚಿನಮಠದ ಶಿವರಾತ್ರಿ ಉತ್ಸವ ಮಾದರಿಯಾಗಿದೆ ಎಂದರು. ನಾವದಗಿಯ ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯರು ಮಾತನಾಡಿ, ಪ್ರತಿಯೊಬ್ಬರೂ ಲಿಂಗಧಾರಿಗಳಾಗಿ ಇಷ್ಟಲಿಂಗ …
Read More »ಮದುವೆ ದಿನವೇ ಅಂಗಾಂಗ ದಾನ ; ಅಥಣಿಯಲ್ಲೊಂದು ಸಾಮಾಜಿಕ ಸೇವೆಯ ಮದುವೆ
ಅಥಣಿ : ತಮ್ಮ ಮದುವೆಯ ದಿನವೇ ಅಂಗಾಂಗ ದಾನ ಮಾಡುವ ಮೂಲಕ ಜನರಲ್ಲಿ ದೇಹದಾನದ ಮಹತ್ವ ತಿಳಿಸಿಕೊಡುವ ಮಹತ್ವ ಕೆಲಸವನ್ನು ನವಜೋಡಿ ಮಾಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ. ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ವಾಗೇಶ ಕಾಡದೇವರಮಠ ಮತ್ತು ಕೋಮಲ ಹಿರೇಮಠ ಇವರ ವಿವಾಹ ಸಮಾರಂಭ ಬುಧವಾರ ಸಂಪ್ರದಾಯದಂತೆ ಜರುಗಿತು. ಈ ವೇಳೆ ವಾಗೇಶ್ ಹಾಗೂ ಕೋಮಲ್ ಇಬ್ಬರೂ ದೇಹದಾನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸುತ್ತಮುತ್ತಲಿನ …
Read More »belagavi: ರೈತ ವಸತಿ ಮನೆಗಳಿಗೂ ಸತತ ವಿದ್ಯುತ್
ಐಗಳಿ: ಗ್ರಾಮದ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಆದಾಯ ಮೂಲ ಅವಶ್ಯ. ಯುವಕರ ಉದ್ಯೋಗಕ್ಕೆ ಅವಕಾಶ ಮಾಡಿಕೊಟ್ಟು ಸ್ವಯಂ ಉದ್ಯೋಗಕ್ಕೆ ಆಸ್ಪದ ನೀಡಬೇಕು. ಗ್ರಾಮೀಣ ಪ್ರದೇಶದ ರೈತ ವಸತಿ ಮನೆಗಳಿಗೂ ನಿರಂತರ ವಿದ್ಯುತ್ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಸ್ಥಳೀಯ ಗ್ರಾಮ ಪಂಚಾಯಿತಿಯ ನಾಲ್ಕು ವ್ಯಾಪಾರ ಮಳಿಗೆ ಹಾಗೂ ಭಜಂತ್ರಿ ವಸತಿ ಪ್ರದೇಶಕ್ಕೆ ನಿರಂತರ ಜ್ಯೋತಿ ಸಂಪರ್ಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಿ.ಎಸ್.ನೇಮಗೌಡ, ಬಿ.ಎಸ್.ಬಿರಾದಾರ, ನೂರಅಹ್ಮದ್ ಡೊಂಗರಗಾಂವ, ಎ.ಎಸ್.ಪಾಟೀಲ, ಬಸವರಾಜ …
Read More »ಬಿಜೆಪಿಗೆ ಅಬಕಾರಿ ಸಚಿವರೇ ಟಾರ್ಗೆಟ್:ಸಿದ್ಧಾರ್ಥ ಸಿಂಗೆ ಆಕ್ರೋಶ
ಅಥಣಿ ಗ್ರಾಮೀಣ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಾರ್ ಲೈಸನ್ಸ್ ಹಂಚಿಕೆ ಹಗರಣ ವಿಚಾರದಲ್ಲಿ ವಿನಾಕಾರಣ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೆಸರು ಉಲ್ಲೇಖಿಸಿ ಬಿಜೆಪಿಯವರು ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿದ್ದಾರೆ ಎಂದು ಅಥಣಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಆರೋಪಿಸಿದರು. ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿರೀಕ್ಷಣಾಮಂದಿರದಲ್ಲಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯವರು ಅಬಕಾರಿ ಸಚಿವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈಗಾಗಲೇ ಸುಳ್ಳು ಆರೋಪಗಳ …
Read More »ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ
ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರೊಟೆಸ್ಟ್ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ಮಾಡಿ ಆಕ್ರೋಶ ಪೊಲೀಸ್ ನಡೆ ಖಂಡಿಸಿ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ
Read More »ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ
ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ ಮತ್ತು ಆಟದ ಸಾಮಗ್ರಿಗಳ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದೆ. ಪರಿಸರ ಸಂರಕ್ಷಣೆ, ಮಕ್ಕಳ ಮನೋರಂಜನೆ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ನೆರವಾಗುವ ಈ ಉದ್ಯಾನವನವು ಸಮಾಜಕ್ಕೆ ಉಪಯುಕ್ತವಾಗಲಿ. ಸಮೂಹ ಪ್ರಯತ್ನದಿಂದ ನಿರ್ಮಿತವಾದ ಇಂತಹ ಕಾರ್ಯಗಳು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡಲಿ ಎಂದು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದೆ. ಅಥಣಿಯ ಶೆಟ್ಟರ ಮಠದ …
Read More »ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು
ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »
Laxmi News 24×7