Breaking News

ಅಥಣಿ

ಅಥಣಿಯಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ನವಜಾತ ಮಗು ಪತ್ತೆ.. ಸಿಕ್ಕಿ ಬಿದ್ದ ಕಳ್ಳಿ

ಅಥಣಿ: ಸಿನಿಮೀಯ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಆದರೆ, ಎರಡೂವರೆ ಗಂಟೆಯಲ್ಲಿ ಮಗುವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಜನಿಸಿದ್ದ ನವಜಾತ ಗಂಡು ಮಗು ಪತ್ತೆ ಹಚ್ಚಿ ತಾಯಿಗೆ ಹಸ್ತಾಂತರಿಸುವಲ್ಲಿ ಅಥಣಿ ಮತ್ತು ಕಾಗವಾಡ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗಿನ ಜಾವ 10.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ನರ್ಸ್ …

Read More »

2A ಮೀಸಲಾತಿ ವಿಳಂಬ 5 ಸಾವಿರಕ್ಕೂ ಹೆಚ್ಚು ಜನ ಬೊಮ್ಮಾಯಿನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ: ರಮೇಶ್ ಗೌಡ ಪಾಟೀಲ್

  ಅಥಣಿ  :ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ …

Read More »

ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್

ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.   ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …

Read More »

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನಂದ ಪಾಟೀಲ ಸಾವು

ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಪಟ್ಟು. ವಿದ್ಯುತ್ ಲೈನ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮೆನ್ ಸಹಾಯಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದಲ್ಲಿ ಘಟನೆ ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಲೈನ್ ಮನ್ …

Read More »

ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು

ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …

Read More »

ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್‍ನಲ್ಲಿ ಸ್ವಾಗತ ಮಾಡಿದರು. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು …

Read More »

ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ

ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಯಾಗಿ ಅಧಿಕಾರ ವಹಿಸಿದ ಬಳಿಕ ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ ನೀಡಿದರು. ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಮತ್ತು ಸಿಬ್ಬಂದಿಗಳಿಂದ ಗೌರವ ಸಮರ್ಪಣೆ ಪಡೆದ ನಂತರ ಅಥಣಿ ಪೋಲಿಸ್ ಠಾಣೆಯ ಎಎಸ್ಐ, ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ಖುದ್ದು ಮಾಹಿತಿ ಪಡೆದರು . ಬಳಿಕ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೇಸಿ ಮಾತನಾಡಿದ ಅವರು ಮಾರ್ಚ್ ತಿಂಗಳಲ್ಲಿ ಅಥಣಿ …

Read More »

ಖಾಸಗಿ ಆಸ್ಪತ್ರೆಗಳಿಂದ ರೋಗದ ಭೀತಿಯಲ್ಲಿ ಗ್ರಾಮೀಣ ಜನರು….

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆ ಎಡವಟ್ಟು ಹಾಗೂ ಹವಮಾನ ವೈಪರಿತೆಯಿಂದ ರೋಗರುಜನೆಗಳು ಜನರಿಗೆ ತಗಲುತ್ತವೆ ಎಂಬ ಭಯದ ವಾತಾವರಣದಲ್ಲಿದ್ದಾರೆ.   ಇದೆಲ್ಲಾ ಕಂಡು ಬಂದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮವಾದ ಕೊಕಟನೂರ ದಲ್ಲೀ ಖಾಸಗಿ ಆಸ್ಪತ್ರೆಯದವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ತಮ್ಮ ಆಸ್ಪತ್ರೆಗಳಲ್ಲಿ ರೋಗಿಯನ್ನ ಗುಣಪಡಿಸಲು ಉಪಯೋಗಿಸಿದ ಔಷಧೀಯ ಮೆಡಿಸನಗಳಾದ, ಸಿರಂಜ್,ಸಲೈನ್,ಬ್ಯಾಂಡೇಜ್, ವೇಸ್ಟ್ ಆದ ಔಷಧಿ ಬಾಟಲಿಗಳನ್ನು ಹಾಗೂ …

Read More »

ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು. ಸ್ಥಳಕ್ಕೆ …

Read More »

ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಎಲ್ಲರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತದೆ : ಮಾಧುಸ್ವಾಮಿ

ಅಥಣಿ (ಬೆಳಗಾವಿ): ಎಲ್ಲರಿಗೂ ಸಿಎಂ ಆಗೋಕೆ ಆಸೆ ಇರುತ್ತದೆ. ಸಿದ್ದರಾಮಯ್ಯ ಅವರಿಗೂ ಆಸೆಯಿದೆ. ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಮ್ಮೆ ಸಿಎಂ ಆಗ್ಬೇಕು ಅಂತ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಜನರು ತೀರ್ಮಾನ ಮಾಡಬೇಕೆಂದು ಎಂದು ಚಿಕ್ಕ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ …

Read More »