Breaking News
Home / ಜಿಲ್ಲೆ / ಬೆಳಗಾವಿ / ಕಿತ್ತೂರು

ಕಿತ್ತೂರು

ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು: ಬಾಬಾಸಾಹೇಬ ಪಾಟೀಲ

ಕಿತ್ತೂರು: ‘ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮನ್ವಯತೆಯಿಂದ ಕೆಲಸ ಮಾಡೋಣ. ಸಾರ್ವಜನಿಕರಿಗೆ ಒಳ್ಳೆಯ ಆಡಳಿತ ನೀಡುವ ಸಂದೇಶ ಕೊಡೋಣ’ ಎಂದರು. ‘ಎಲ್ಲ ಕೆಲಸಗಳಲ್ಲೂ ಉತ್ತಮ ಗುಣಮಟ್ಟವಿರಲಿ. ಚುನಾವಣೆ ಪ್ರಚಾರದ ವೇಳೆ …

Read More »

ಆಕಾಶಕ್ಕೆ ಲಗ್ಗೆ ಇಟ್ಟ ಚಿಣ್ಣರ ದಂಡು

ಚನ್ನಮ್ಮನ ಕಿತ್ತೂರು: ಅತ್ತ ರಾಜುವಿನ ಗಾಳಿಪಟ, ಇತ್ತ ಚಂದ್ರಿಕಾಳ ಗಾಳಿಪಟ, ರಮ್ಯ ಕೈಯಲ್ಲಿ ದಾರದ ಉಂಡೆ, ಉಸ್ತಾದನ ಕೈಯಲ್ಲಿ ಬಾಲಂಗೋಚಿ, ಸೂತ್ರ ಹರಿದು ಮಾಯವಾಯಿತು ಪರಮೇಶಿಯ ಪಟ, ಅದ ನೋಡಿ ಹೋಯ್‌… ಎಂದು ಕೂಗಿದ ಚಿಣ್ಣರ ದಂಡು. ‘ ವಿವಿಧ ಶಾಲೆಗಳಿಂದ ಬಂದಿದ್ದ ನೂರಾರು ಮಕ್ಕಳಿಗೆ ಬಣ್ಭಬಣ್ಣದ ಪಟಗಳನ್ನು ಉಚಿತವಾಗಿ ನೀಡಲಾಯಿತು. ಪಟ ಮತ್ತು ದಾರದ ಉಂಡೆಗಳು ಕೈಗೆ ಸಿಕ್ಕಿದ್ದೇ ತಡ ಚಿಣ್ಣರು ನಾ ಮುಂದು, ತಾ ಮುಂದು ಎಂದು …

Read More »

ಸಾಧನೆಗೆ ತಾಳ್ಮೆ, ಏಕಾಗ್ರತೆ ಅವಶ್ಯ: ಜಿ. ಎಂ. ಗಣಾಚಾರಿ

ಕಿತ್ತೂರು: : ಕಾಲೇಜು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದವರು ಹೆಚ್ಚಾಗಿ ಉತ್ತರ ಕರ್ನಾಟಕದವರೆ ಆಗಿದ್ದಾರೆ. ಇಲ್ಲಿಂದ ವಲಸೆ ಹೋಗಿ ಅಲ್ಲಿ ನೆಲೆಸಿದವರಾಗಿದ್ದಾರೆ ಎಂದು ಆರ್‌ಜಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಂ. ಗಣಾಚಾರಿ ತಿಳಿಸಿದರು.   ಇಲ್ಲಿನ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯಿಂದ ಗುರುವಾರ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಸಾಧನೆಗೆ ಏಕಾಗ್ರತೆ ಮತ್ತು ತಾಳ್ಮೆ ಬೇಕು. ಪ್ರಾಮಾಣಿಕತೆ ಇರುವವ ಸಾಧಕ ಆಗುತ್ತಾನೆ. ಪ್ರಾಮಾಣಿಕತೆ ಇಲ್ಲದ …

Read More »

ಆಕಸ್ಮಿಕ ಬೆಂಕಿ: ಉರಿದ ಲಾರಿ

ಚನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ. ಪೊಟ್ರೋಲ್‌ ಪಂಪ್‌ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು. ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್‌ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು …

Read More »

ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು‌ ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ

ಕಿತ್ತೂರು ತಾಲೂಕಿನ ಶಿವನೂರು ಗ್ರಾಮದಲ್ಲಿ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು‌ ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಅಕ್ಷತಾ ಹೂಲಿಕಟ್ಟಿ ಮೃತದೇಹ ಶಿವನೂರು ತಲುಪುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸರ್ಕಾರಕ್ಕೆ ಹಿಡಿಶಾಪ ಹಾಕಿ ನೂರಾರು ಮಹಿಳೆಯರು ಕಣ್ಣೀರುಡುತ್ತಿರುವ ದೃಶ್ಯ ಎಲ್ಲರು ಕರುಳು ಚುರ್ ಎನ್ನುವಂತಿತ್ತು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಹಾಗೂ ಶಿವನೂರು ಗ್ರಾಮಕ್ಕೆ …

Read More »

ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ

ಕಿತ್ತೂರು : ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.   ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್‌ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ …

Read More »

ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್

ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.

Read More »

ವಿನಯ್ ಕುಲಕರ್ಣಿಗೆ ಶಕ್ತಿ ತುಂಬಿದ ಲಕ್ಷಾಂತರ ಅಭಿಮಾನಿಗಳು..!

ಚನ್ನಮ್ಮ ಕಿತ್ತೂರಿನಲ್ಲಿ ನಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟು ಹಬ್ಬದ ಕಾರ್ಯಕ್ರಮ ಹೊಸ ಇತಿಹಾಸ ಬರೆದಿದೆ. ನಾಡಿನ ಮಠಾಧೀಶರು, ಕಾಂಗ್ರೆಸ್ ಘಟಾನುಘಟಿ ನಾಯಕರು, ಲಕ್ಷಾಂತರ ಅಭಿಮಾನಿಗಳು, ಕಾರ್ಯರ್ತರು ಭಾಗಿಯಾಗಿ ವಿನಯ್ ಕುಲಕರ್ಣಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ವೇದಿಕೆಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹೌದು ಮಾಜಿ ಸಚಿವ ವಿನಯ್ ಕುಲಕರ್ಣಿ ಉತ್ತರಕರ್ನಾಟಕದ ಪ್ರಭಾವಿ ರಾಜಕಾರಣಿ. ಅದರಲ್ಲಿಯೂ ಲಿಂಗಾಯತ ಪಂಚಮಸಾಲಿ ಸಮುದಾಯದ …

Read More »

ಬೆಳಗಾವಿ: ಕಾರ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಚನ್ನಮ್ಮನ ಕಿತ್ತೂರಿನಲ್ಲಿ ಮಂಗಳವಾರ ರಾತ್ರಿ ಕಿತ್ತೂರು ಉತ್ಸವದ ಕಾರ್ಯಕ್ರಮ ನೋಡಿಕೊಂಡು ಮರಳುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರ್‌ ಹರಿದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾನಾಪುರ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33) ಹಾಗೂ ಕರೆಪ್ಪ ತಳವಾರ (36) ಮೃತಪಟ್ಟವರು.   ಮಂಗಳವಾರ ರಾತ್ರಿ ಗಾಯಕ ರಘು ದೀಕ್ಷಿತ್‌ ಅವರ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದ ಇಬ್ಬರೂ ಊರಿಗೆ ಮರಳಲು ವಾಹನಕ್ಕೆ ಕಾಯುತ್ತಿದ್ದರು. ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ …

Read More »

‘ಕಿತ್ತೂರು ಕೇಸರಿ’ ಪಟ್ಟಕ್ಕಾಗಿ ಪಟ್ಟುಬಿಡದ ಜಟ್ಟಿಗಳು

ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಎರಡನೇ ದಿನವಾದ ಮಂಗಳವಾರ ನಡೆದ ರಾಷ್ಟ್ರಮಟ್ಟದ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನೋಡಲು ಅಪಾರ ಸಂಖ್ಯೆಯ ಕ್ರೀಡಾಭಿಮಾನಿಗಳು ಸೇರಿದರು. ಮಹಿಳಾ ಹಾಗೂ ಪುರುಷ ವಿಭಾಗ ಸೇರಿ ಒಟ್ಟು 234 ಪೈಲ್ವಾನರು ಇಲ್ಲಿ ಮುಖಾಮುಖಿಯಾಗಿದ್ದಾರೆ.   ಪ್ರತಿವರ್ಷ ಜಂಗಿ ನಿಕಾಲಿ ಕುಸ್ತಿ ನಡೆಯುತ್ತಿದ್ದವು. ಇದೇ ಮೊದಲ ಬಾರಿ ಪಾಯಿಂಟ್ ಆಧರಿತ ಕುಸ್ತಿ ಆಯೋಜಿಸಲಾಗಿತ್ತು. ಎರಡು ದಿನಗಳ ಟೂರ್ನಿಯಲ್ಲಿ ನಡೆದ ಬಹುತೇಕ ಪಂದ್ಯಗಳು ಪೈಪೋಟಿಯಿಂದ …

Read More »