Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 29)

ಗೋಕಾಕ

ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧ,5 ಸಾವಿರಕ್ಕೂ ಹೆಚ್ಚು ಗ್ರಾಮ‌ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕಿನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …

Read More »

ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »

ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …

Read More »

ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ: ಸತೀಶ ಜಾರಕಿಹೊಳಿ 

ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak ಗೋಕಾಕ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಹೀಗಾಗಿ, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿಗಳು ಹಾನಗಲ್ ನಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದಾರೆ ಎಂದರು. ಉಪಚುನಾವಣೆ ಎಂದರೆ ಹಾಗೆ. …

Read More »

ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ

ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …

Read More »

ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.

ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …

Read More »

90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ

ಗೋಕಾಕ: ಕೊರೋನಾ ಆಘಾತದಿಂದ ಸಹಜ ಸ್ಥಿತಿಯತ್ತ ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹಾಗೂ ಕಠೀಣ ಪರಿಶ್ರಮದಿಂದ ಶೈಕ್ಷಣಿಕವಾಗಿ ಪ್ರಗತಿಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣ ನಿರ್ದೇಶನಗಳನ್ನು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ   ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು   ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »