Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 60)

ಗೋಕಾಕ

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …

Read More »

ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.

ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …

Read More »

ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ

ಮೂಡಲಗಿ : ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯ ಕಿಶೋರ ಗಣಾಚಾರಿ ಕಿಡಿಕಾರಿದರು. ಸಮೀಪದ ಹಳ್ಳೂರ ಗ್ರಾಪಂ.ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ರೈತರ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿರುವಾಗ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರಿವಾಜ್ಞೆ …

Read More »

ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!

ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …

Read More »

ಮೂಢನಂಬಿಕೆ ವಿರುದ್ಧ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು: ಸತೀಶ್ ಜಾರಕಿಹೊಳಿ

ಗೋಕಾಕ : ‘ ಮೂಢನಂಬಿಕೆ ವಿರುದ್ಧ ಅಂಬೇಡ್ಕರ್, ಬಸವಣ್ಣನವರು ಸೇರಿ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೇಲ್ಲ ಮುನ್ನಡೆಯಬೇಕು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದ ಸೇವಾ ಸಮಿತಿ ಆಯೋಜಿಸಿದ್ದ ಗೋಕಾಕ್, ಮೂಡಲಗಿ ತಾಲ್ಲೂಕಿನ ಮಾದಿಗ ಸಮಾಜದ ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ ದಲಿತ ಸಮುದಾಯದ ಜನರು ಎಲ್ಲ ರಂಗದಿಂದ …

Read More »

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರ: ಸತೀಶ್ ಜಾರಕಿ ಹೊಳಿ

ಗೋಕಾಕ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರವಾಗಿದೆ. ನಿಗಮ, ಪ್ರಾಧಿಕಾರ ಸ್ಥಾಪನೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಬೇಕು. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಭಾರತದಲ್ಲಿ 5 ರಿಂದ ಆರು ಸಾವಿರ ಜಾತಿಗಳಿವೆ ಎಲ್ಲಾ ಜಾತಿಗಳಿಗೆ ಬಿಜೆಪಿಯು ನಿಗಮ ಪ್ರಾಧಿಕಾರ ಮಾಡುವ ಮುಖಾಂತರ ಪ್ರಜಾಪ್ರಭುತ್ವ ವಿರೋಧಿ ಕೆಲಸವನ್ನು ಮಾಡಲು ಹೊರಟಿದೆ ಎಂದು ಶಾಸಕ, ಕೆಪಿಸಿಸಿ …

Read More »

ರಾಹುಲ್, ಪ್ರಿಯಾಂಕಾರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ಆಚರಣೆ

ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …

Read More »