Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 66)

ಗೋಕಾಕ

ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.

ಗೋಕಾಕ್: ನಗರದಲ್ಲಿ ರಾಜಸ್ತಾನ ವ್ಯಾಪಾರಿಗಳ ಕಳಪೆ ಗುಣಮಟ್ಟದ ವಸ್ತುಗಳ ಕಡಿಮೆ ಬೆಲೆ ಮಾರಾಟದಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ರಾಜಸ್ತಾನ ಹಠಾವೋ..ಗೋಕಾಕ್ ಬಚಾವೋ ಎಂಬ ಅಭಿಯಾನದ ಮೂಲಕ ವ್ಯಾಪಾರಸ್ಥ ಸಂಘದಿಂದ ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ.     ಗೋಕಾಕ್ ನಗರದಲ್ಲಿ ರಾಜಸ್ತಾನಿ ವ್ಯಾಪಾರಿಗಳು ಕಳಪೆ ಗುಣಮಟ್ಟದ ವಸ್ತು, ಸಾಮಗ್ರಿಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ತೊಂದರೆಯಾಗಿದೆ. ವ್ಯಾಪಾರದಲ್ಲಿ ಮೊದಲೇ ನಷ್ಟ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

  ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.   ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ …

Read More »

ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು.

ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ  ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು. ಭಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ. ಕೋವಿದ19 ನಲ್ಲಿ ಪೌರಕಾರ್ಮಿಕರು ಮಾಡಿದ ಸೇವೆ ಯಾವ ಸೇವೆಗಿಂತ ಕಮ್ಮಿಯಿಲ್ಲ.ನಾವು ಮಾಡಿದ ಸೇವೆಯನ್ನು ನೋಡಿ ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಡಿದ್ದರು. ನಾವು ಪ್ರತಿ ವರ್ಷದಂತೆ ಈ ವರ್ಷಕೂಡ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಂತಕಾರ ಮಾಡಲಾಯಿತು. ಮತ್ತು covied19 ನಲ್ಲಿ ನಮ್ಮ ಜೀವವನ್ನು …

Read More »

NHM ಸಿಬ್ಬಂದಿಗಳಿಂದ ನಾಳೆಯಿಂದ ಮುಷ್ಕ್ ರ

ಗೋಕಾಕ :ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ , ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, HR Policy ಮತ್ತು ಇತರೇ ಬೇಡಿಕೆಗಳ ಈಡೇರಿಕೆಗೆ ಇಂದು ತಹಸೀಲ್ದಾರ್ ಗೋಕಾಕ ಮತ್ತು ತಾಲೂಕಾ ಆರೋಗ್ಯ ಅಧಿಕಾರಗಳು  ಇವರಿಗೂ ಸಹ ಮನವಿ ಪತ್ರ ನೀಡಿದರು ಇನ್ನೂ ಮುಂದುವರೆದು, ಇಲಾಖೆ ಖಾಯಂ ನೌಕರರನ್ನು ಅವಲಂಬಿಸಿದೆ ಮತ್ತು ಎಲ್ಲಾ ಜಿಲ್ಲೆಯಲ್ಲಿ …

Read More »

ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ

ಗೋಕಾಕ್: ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದ ಅಡಿಬಟ್ಟಿ ಕಾಲೋನಿಯಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಇಂದು ಉದ್ಘಾಟಿಸಿ, ಮಾತನಾಡಿದರು. ಪೌರ ಕಾರ್ಮಿಕರಿಗಾಗಿ ಜಿ+2ಮಾದರಿಯಲ್ಲಿ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ಮುಂದಿನ ಹಂತದಲ್ಲಿ 10 ಎಕರೆ ಜಾಗದಲ್ಲಿ ಇನ್ನಷ್ಟು ಮನೆಗಳನ್ನು …

Read More »

ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »