Breaking News

ಚಿಕ್ಕೋಡಿ

1500 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಚಿಕ್ಕೋಡಿ: ‘ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ ಸದಾ ಕಾಲವೂ ಜನರ ಸಮಸ್ಯೆಗೆ ಸ್ಪಂದಿಸುತ್ತ ಜನರ ಹೃದಯದಲ್ಲಿ ನೆಲೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದು ಕ್ಷೇತ್ರದ ಜನರ ಹೆಮ್ಮೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಮಾ ಮಾನೆ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಬುಧವಾರ ದು ಶಾಸಕ ಗಣೇಶ ಹುಕ್ಕೇರಿ ಅವರ 46ನೇ …

Read More »

ಅಪಾಯ ಮಟ್ಟ ಮೀರಿದ ಕೃಷ್ಣೆ-ಉಪನದಿಗಳು

ಚಿಕ್ಕೋಡಿ: ಕೃಷ್ಣಾ ನದಿ ಉಗಮಸ್ಥಾನ ಮಹಾಬಳೇಶ್ವರ, ಕೊಯ್ನಾ, ನವಜಾ ಮತ್ತು ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಹಾಗೂ ರಾಜ್ಯದ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ಭಾಗದಲ್ಲಿಯೂ ನಿರಂತರವಾಗಿ ಮಳೆ ಆಗುತ್ತಿದೆ. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳಿಗೆ 1.05 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲು ದಾಟಿ ಹರಿದು ಪಕ್ಕದ ಬೆಳೆಗಳಿಗೆ ನುಗ್ಗಿವೆ. ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೊಯ್ನಾ, ನವಜಾ ಹಾಗೂ …

Read More »

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು. *ಚಿಕ್ಕೋಡಿ ಜಿಲ್ಲೆ ರಚನೆ:* “ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು. *ಮಾಜಿ ಸಚಿವ ನಾಗೇಂದ್ರರ ಬಂಧನ:* “ಮುಂದಿನ ಕಾನೂನು ಪ್ರಕ್ರಿಯೆ …

Read More »

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …

Read More »

ಚಿಕ್ಕೋಡಿ | ನೀರಿಲ್ಲದೇ ಸಸ್ಯೋತ್ಪಾದನೆ ಕುಸಿತ; ಅರಣ್ಯೀಕರಣಕ್ಕೆ ಅಡೆತಡೆ

ಚಿಕ್ಕೋಡಿ: ತಾಲ್ಲೂಕಿನ ಜೈನಾಪುರ ಹಾಗೂ ಚಿಂಚಣಿ ಗ್ರಾಮಗಳಲ್ಲಿ ಅರಣ್ಯ ಇಲಾಖೆಯು ನರ್ಸರಿಗಳ ಮೂಲಕ ಪ್ರತಿ ವರ್ಷ ಸಾವಿರಾರು ಸಸಿಗಳ ಉತ್ಪಾದನೆ ಮಾಡುತ್ತಲಿದೆ. 2023-24ರ ಸಾಲಿನಲ್ಲಿ ಸರ್ಮಪಕವಾಗಿ ಮಳೆ ಇಲ್ಲದೇ ಬೇಡಿಕೆಗೆ ತಕ್ಕಷ್ಟು ಸಸಿಗಳ ಉತ್ಪಾದನೆ ಮಾಡಲು ಸಾಧ್ಯವಾಗಿಲ್ಲ. ಇದೀಗ ಸಮರ್ಪಕವಾಗಿ ಮಳೆಯಾಗಿದ್ದರೂ ಬೇಡಿಕೆಗೆ ತಕ್ಕಷ್ಟು ಸಸಿಗಳ ಲಭ್ಯತೆ ಇಲ್ಲದೇ ಅರಣ್ಯೀಕರಣ ಮಾಡಲು ಹಿನ್ನೆಡೆಯಾಗಿದೆ. 3 ಎಕರೆ ಪ್ರದೇಶ ವ್ಯಾಪ್ತಿಯಲ್ಲಿಯ ಜೈನಾಪುರ ನರ್ಸರಿಯಲ್ಲಿ 2023ರಲ್ಲಿ 45 ಸಾವಿರ ಸಸಿಗಳ ಉತ್ಪಾದನೆ ಮಾಡಲಾಗಿತ್ತು, ಆದರೆ …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ …

Read More »

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …

Read More »

ನಿಬ್ಬೆರಗಾಗಿಸುವ ಜಲಯೋಗ ಸಾಧಕ: 3 ತಾಸು ನೀರಿನಲ್ಲಿ ತೇಲುವ 72ರ ವೃದ್ಧ!

ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …

Read More »

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ.   ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ …

Read More »