Breaking News

ಚಿಕ್ಕೋಡಿ

ಕನ್ನಡಿಗರನ್ನ ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತೆ’: ಮಹಾರಾಷ್ಟ್ರ ನಾಯಕರ ಉದ್ಧಟತನದ ಹೇಳಿಕೆ.

ಚಿಕ್ಕೋಡಿ: ಕರ್ನಾಟಕ ಮತ್ತು ಮಹಾಷ್ಟ್ರದ ಗಡಿ ವಿವಾದ ದಿನೇ ದಿನೇ ಕಾವು ಪಡೆಯುತ್ತಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರೇ ಖಡಕ್​ ಉತ್ತರ ನೀಡಿದರೂ ಇನ್ನೂ ಮಹಾ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಉದ್ಧವ್​ ಠಾಕ್ರೆ ಬಣದವರು ಗಡಿ ಭಾಗದಲ್ಲಿ ‘ಮಹಾರಾಷ್ಟ್ರಕ್ಕೆ ಕರ್ನಾಟಕ ಬಸ್ ಬರೋದು ಬ್ಯಾನ್ ಮಾಡಬೇಕಾಗುತ್ತೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.   ನಿನ್ನೆ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ರಾಜ್ ಠಾಕ್ರೆ ಬಣದವರಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿದೆ. ಇವರ …

Read More »

ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು

ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್​ ಪೋಸ್ಟ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …

Read More »

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದಲ್ಲಿ ನಡೆದಿದೆ. ಯಕ್ಸಂಬಾ- ಚಿಕ್ಕೋಡಿ ರಸ್ತೆಯ ಮದ್ಯ ಶವವಿಟ್ಟು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡಲಾಯಿತು. ಇಂದು ಬೆಳಗ್ಗೆ ಅನಾರೋಗ್ಯದಿಂದ ನಣದಿವಾಡಿ ಗ್ರಾಮದ ಸುಧಾಕರ ಮಹಾದೇವ ನಾಯಕ ಎಂಬುವವರು ಮೃತಪಟ್ಟಿದರು. ರುದ್ರಭೂಮಿಗೆ ಹೋಗುವ ದಾರಿ ವಿಚಾರಕ್ಕೆ ಸಂಬಂಧಸಿದಂತೆ ನಣದಿವಾಡಿ ಗ್ರಾಮದ ಯಕ್ಸಂಬಿ ಕುಟುಂಬವು ತಕರಾರು ತಗೆದಿತ್ತು. ಅಷ್ಟೇ ಅಲ್ಲದೇ ರುದ್ರಭೂಮಿಗೆ …

Read More »

ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ

ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ.   15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ …

Read More »

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ

ಚಿಕ್ಕೋಡಿ(ನ.05): ಅಖಂಡ ಕರ್ನಾಟಕವಾಗಬೇಕೆಂದು ಕನಸು ಕಂಡವರು ಉತ್ತರ ಕರ್ನಾಟಕದ ಜನ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಟಕ ಹೆಚ್ಚು ಅನ್ಯಾಯಕ್ಕೆ ಒಳಗಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು. ಅವರು ಬುಧವಾರ ತಾಲೂಕಿನ ಚಿಂಚಣಿ ಗ್ರಾಮದ ಗಡಿ ಕನ್ನಡಿಗರ ಬಳಗದಿಂದ ಶ್ರೀಅಲ್ಲಮಪ್ರಭು ಸಿದ್ದಸಂಸ್ಥಾನಮಠದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡರತ್ನ ಡಾ.ಪ್ರಭಾಕರ ಕೋರೆ ಹಾಗೂ ನನ್ನ ಸಂಗೀತ ವ್ಯಾಸಂಗ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, …

Read More »

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ

ಚಿಕ್ಕೋಡಿ: ಇಂದು ಬೆಳಿಗ್ಗೆ 07 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿ‌ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು, ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು. ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲಗೊಳ್ಳುತ್ತಿದ್ದಂತೆ …

Read More »

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಜನಾಕ್ರೋಶ: ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ?

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಬೆಳಗಾವಿ: ಜನರ ಮನಸ್ಸು ಗೆದ್ದ ಪ್ರಮಾಣಿಕ, ದಕ್ಷ ಆಡಳಿತಗಾರರಾಗಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜನರ ಪರವಾಗಿ ಇರುವುದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚಿಕ್ಕೋಡಿ ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ದಿಡೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಜನರು …

Read More »

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …

Read More »

ಮನೆ ಕಳ್ಳತನ: ಆರೋಪಿಗಳ ಬಂಧನ;15.64 ಲಕ್ಷ ರೂ. ಮೌಲ್ಯದ ಆಭರಣ ವಶ

ಚಿಕ್ಕೋಡಿ: ಹಗಲು ವೇಳೆಯಲ್ಲಿ ಮನೆ ಕೀಲಿ ಮುರಿದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಸುಮಾರು 15.64 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ದಿ.12 10 2022 ರಂದು ಚಿಕ್ಕೋಡಿ ನಗರದ ವಿಷ್ಣು ಪ್ರಕಾಶ ನೇತಲಕರ ಅವರ ಮನೆ ಕೀಲಿ ಮುರಿದು 370 ಗ್ರಾಂ ಬಂಗಾರ ಆಭರಣ. 1.50 ಲಕ್ಣ ರೂ. ನಗದು ಹಣ ಹೀಗೆ 12.61 ಲಕ್ಷ ರೂ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರು …

Read More »

ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ- ಅತ್ಯಾಚಾರ ಎಂದು ಗ್ರಾಮಸ್ಥರಿಂದ ಆರೋಪ

ಚಿಕ್ಕೋಡಿ: ಕಳೆದ ನಾಲ್ಕು ಹಿಂದೆ ವೃದ್ಧೆಯನ್ನು (OldWoman) ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದರು. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದಲ್ಲಿ ಬೇವನೂರು ಗ್ರಾಮದ ಫುಲಾಭಾಯಿ ಲಕ್ಷ್ಮಣ ಯಮಗಾರ(65)ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಬಾಯಿಗೆ ಬಟ್ಟೆ ಹಾಕಿ ಕಿರುಚದಂತೆ ಮಾಡಿ ಕೊಲೆ ಮಾಡಿ ಮೈಮೇಲಿದ್ದ ಆಭರಣಗಳನ್ನು ದೋಚಿ ಗುಂಪೊಂದು ಪರಾರಿಯಾಗಿತ್ತು.ಸದ್ಯ ಅಥಣಿ ಪೊಲೀಸರು ಪ್ರಕರಣಕ್ಕೆ ಸಂಬಧಿಸಿದಂತೆ ಅದೇ ಗ್ರಾಮದ ಸಂಘರ್ಷ ಕಾಂಬಳೆ ಎಂಬಾತನನ್ನು …

Read More »