ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು. ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು …
Read More »ಚಿಕ್ಕೋಡಿ: ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನ ಆಚರಣೆ
ಚಿಕ್ಕೋಡಿ: ‘ಲಿಂಗಾಯತ ಸಮಾಜ ಉಚಿತವಾಗಿ ಅನ್ನದಾಸೋಹ ಮಾಡುವ ಮೂಲಕ ಹೆಸರಾಗಿದ್ದು, ಕೆಎಲ್ಇ ಸಂಸ್ಥೆ 300ಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಮೂಲಕ ನಾಡಿಗೆ ಜ್ಞಾನ ದಾಸೋಹ ಮಾಡುತ್ತಿದೆ’ ಎಂದು ಸಾಹಿತಿ ರಾಮಕೃಷ್ಣ ಮರಾಠೆ ಹೇಳಿದರು. ಪಟ್ಟಣದ ಬಿ.ಕೆ ಕಾಲೇಜಿನಲ್ಲಿ ಹಮ್ಮಿಕೊಂಡ 109ನೇ ಕೆಎಲ್ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ‘ಶಿಕ್ಷಣ, ವೈದ್ಯಕೀಯ, ಸಮಾಜ ಸೇವೆಯಲ್ಲಿ ಕೆಎಲ್ಇ ಸಂಸ್ಥೆ ತನ್ನದೇ ಆದ ಕೊಡುಗೆಯನ್ನು ದೇಶ ವಿದೇಶಗಳಲ್ಲಿ ನೀಡುತ್ತಿದೆ’ ಎಂದರು. …
Read More »ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ
ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಈ ವೇಳೆ ಬೆಳಗಾವಿ ನಗರದ ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ ನ ವತಿಯಿಂದ ಧರ್ಮಗುರು ರೇವರೆಂಡ್ ಫಾದರ್ ಶಾಂತಪ್ಪ ಅಂಕಲಗಿ, …
Read More »ಚಿಕ್ಕೋಡಿ | ಯಮನವ್ವಗೆ ಸುವರ್ಣ ಕರ್ನಾಟಕ ಪ್ರಶಸ್ತಿ
ಚಿಕ್ಕೋಡಿ: ತಾಲ್ಲೂಕಿನ ಧುಳಗನವಾಡಿ ಗ್ರಾಮದ ಹಿರಿಯ ಬಯಲಾಟ ಕಲಾವಿದೆ ಯಮನವ್ವಾ ಕಲಾಚಂದ್ರ(86) ಅವರ ಕಲೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಯಮನವ್ವಾ ಅವರು ವಿವಿಧ ಕಲಾ ಪ್ರಕಾರಗಳಲ್ಲಿ 6 ದಶಕಗಳಿಂದ ಕಲಾಸೇವೆ ಸಲ್ಲಿಸಿದ್ದಾರೆ. 2015-16ನೇ ಸಾಲಿನಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಪ್ರಶಸ್ತಿ ಪಡೆದುಕೊಂಡ ಅವರಿಗೆ ಸುವರ್ಣ ಕರ್ನಾಟಕದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದ್ದು ಚಿಕ್ಕೋಡಿ ಭಾಗದ ಕಲಾವಿದರಿಗೆ …
Read More »ಚಿಕ್ಕೋಡಿ: ನೀರಾವರಿ ಕಾಲುವೆಯಲ್ಲಿ ಹೂಳು ಭರ್ತಿ
ಚಿಕ್ಕೋಡಿ: ತಾಲ್ಲೂಕು ವ್ಯಾಪ್ತಿಯ ಕೊಟಬಾಗಿ ಏತ ನೀರಾವರಿಯ ಘಟಪ್ರಭಾ ಬಲದಂಡೆಯ 2ನೇ ಹಂತದ ವಿತರಣಾ ಕಾಲುವೆ, ಉಪ ಕಾಲುವೆಗಳಲ್ಲಿ ಹೂಳು ಭರ್ತಿಯಾಗಿ, ಗಿಡಗಂಟಿಗಳು ಬೆಳೆದಿವೆ. ಕೆಲವೊಂದು ಕಡೆಗೆ ಕಾಲುವೆಗೆ ಹಾಕಿದ ಸಿಮೆಂಟ್ ಕಿತ್ತು ಹೋಗಿದೆ. ಇನ್ನು ಕೆಲವು ಕಡೆಗೆ 10 ಅಡಿಯಷ್ಟು ಆಳದ ಕಾಲುವೆಯಲ್ಲಿ 8 ಅಡಿಯಷ್ಟು ಹೂಳು ತುಂಬಿದ್ದು, ನೀರಾವರಿ ಇಲಾಖೆಯ ನಿರ್ಲಕ್ಷ್ಯ ಹಿಡಿದ ಕೈಗನ್ನಡಿಯಾಗಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ನಿರ್ವಹಣೆ ಆಗಬೇಕಿರುವ 17 ಕಿ.ಮೀ …
Read More »ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದ ಶಾಸಕ ಗಣೇಶ ಹುಕ್ಕೇರಿ
ಚಿಕ್ಕೋಡಿ: ‘ಚಿಕ್ಕೋಡಿ ಸದಲಗಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಪಸಂಖ್ಯಾತರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುತ್ತಿದೆ. ಹಿರೇಕೋಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದು ಶಾಸಕ ಗಣೇಶ ಹುಕ್ಕೇರಿ ಭರವಸೆ ನೀಡಿದರು. ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಶನಿವಾರ ಮುಸ್ಲಿಂ ಸಮುದಾಯದವರಿಗಾಗಿ ₹20 ಲಕ್ಷ ವೆಚ್ಚದ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಮುಸ್ಲಿಂ ಸಮುದಾಯದ ಜನರಿಗೆ …
Read More »ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು
ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ
ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್ ಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್, …
Read More »ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ
ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …
Read More »ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …
Read More »