Breaking News

ಚಿಕ್ಕೋಡಿ

ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್

ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ  ಪ್ರಶ್ನಿಸಿದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ …

Read More »

ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಇಬ್ಬರು ಸಹೋದರರು ಸೇರಿಂತೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಶಿಕ್ಷಕರು ಕೋವಿಡ್​ಗೆ ಪ್ರಾಣ ಕಳೆದುಕೊಂಡಿದ್ದಾರೆ.

ಚಿಕ್ಕೋಡಿ: ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಹೋದರರಿಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗರ್ಲಜುಂಜಿಯ ಗ್ರಾಮದ ಪಿ.ಕೆ ಕುಂಬಾರ ಹಾಗೂ ಅವರ ತಮ್ಮ ನಾರಾಯಣ್ ಕೆ.ಕುಂಬಾರ ಮೃತರು. ಈ ಇಬ್ಬರು ಸಹೋದರರು ತೋಪಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ತಮ್ಮನಾದ ನಾರಾಯಣ್ ಕೆ.ಕುಂಬಾರಗೆ ಕಳೆದ ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ‌ ಆತನಿಂದ …

Read More »

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »

ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ

ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು.  ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ …

Read More »

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …

Read More »

ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ

ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …

Read More »

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »