Breaking News

ಚಿಕ್ಕೋಡಿ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು.

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಚಿಕ್ಕೋಡಿ- 6, ಗೋಕಾಕ-4. ಅಥಣೀ-3, ರಾಯಬಾಗ-1,ಮತ್ತು ಹುಕ್ಕೇರಿ-1 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಳಾಗಿತ್ತು. ಒಟ್ಟು 6247 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಅವರಲ್ಲಿ 690 ಗೈರು ಹಾಜರಾಗಿದ್ದು, 5557 ವಿದ್ಯಾರ್ಥಿಗಳು ಪರೀಕ್ಷೆ ಬರೆದರು …

Read More »

ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?

ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್‌ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …

Read More »

ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸ:ನಿಡಸೋಸಿ ಗ್ರಾಮದಶಿವಲಿಂಗೇಶ್ವರ ಸ್ವಾಮೀಜಿ

ಚಿಕ್ಕೋಡಿ(ಬೆಳಗಾವಿ): ಮಳೆಗಾಲ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿರುತ್ತೆ. ಇಂಥ ಸಂದರ್ಭದಲ್ಲಿ ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸವನ್ನ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾಡುತ್ತಿದ್ದಾರೆ. ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ಶ್ರೀಗಳು ಬಂದರೆ ಅವರ ಸುತ್ತ ನೂರಾರು ಪಾರಿವಾಳಗಳು ಜಮಾವಣೆಗೊಳ್ಳುತ್ತವೆ. ಆ ಪಾರಿವಾಳಗಳಿಗೆ ಸ್ವಾಮಿಜಿ ಜೋಳ ಹಾಗೂ ಅಕ್ಕಿ ಕಾಳುಗಳನ್ನ ಹಾಕುತ್ತಿದ್ದಾರೆ. …

Read More »

ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ  ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …

Read More »

ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ

ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ …

Read More »

ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ: ಉಮೇಶ ಕತ್ತಿ

ಚಿಕ್ಕೋಡಿ: ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆ ಆಗಬಾರದು. ತೊಂದರೆ ಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹುಕ್ಕೇರಿ ತಹಶೀಲ್ದಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಕೊರೊನಾ ನಿಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಅಂತ್ಯಕ್ರಿಯೆ ಮಾಡಲು ಯಾವುದೇ ಸಮಸ್ಯೆ ಆಗಬಾರದು. ಸರ್ಕಾರಿ ಜಮೀನುಗಳಿದ್ದರೆ ಅವುಗಳನ್ನು ಸ್ಮಶಾನಗಳಿಗಾಗಿ ಮೀಸಲಿಡಬೇಕು …

Read More »

ನಮಾಜ್‍ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..

ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.   ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್‍ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಲಾಕ್‍ಡೌನ್…….

ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಮುಂದಿನ ಒಂದು ವಾರಗಳ ಲಾಕ್‍ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ …

Read More »