Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 33)

ಚಿಕ್ಕೋಡಿ

ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ

ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …

Read More »

“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …

Read More »

ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ – 22 ಮಂದಿ ಬಂಧನ

ಚಿಕ್ಕೋಡಿ: ನಿನ್ನೆ ರಾತ್ರಿ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರೂ ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ಯಮಕನಮರಡಿ ಹಾಗೂ ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಲೈಟ್ ಆನ್ ಇದೆ ಎಂದು ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 9 ಜನರ ಗುಂಪನ್ನ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿ ಮಸೀದಿಯಲ್ಲಿ …

Read More »

ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು; ದುರ್ಯೋಧನ ಐಹೋಳೆ

ಚಿಕ್ಕೋಡಿ: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಸಿದ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮ ಪಂಚಾಯತಿ ವತಿಯಿಂದ ಮಾಸ್ಕ್ …

Read More »

ದೆಹಲಿ ಸಮಾವೇಶಕ್ಕೆ ಹೋಗಿದ್ದವರ ಶೋಧಕ್ಕೆ ಹುಕ್ಕೇರಿ ಪೊಲೀಸರ ಹೊಸ ಐಡಿಯಾ

ಬೆಳಗಾವಿ(ಚಿಕ್ಕೋಡಿ): ದೇಶವನ್ನೇ ತಲ್ಲಣಗೊಳಿಸಿರುವ ಕೊರೊನಾ ಶಂಕಿತರಾದ ದೆಹಲಿ ನಿಜಾಮುದ್ದೀನ್ ಸಮಾವೇಶದ ನಂಟು ಇದ್ದವರ ಪತ್ತೆಗಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಪೊಲೀಸರು ಹೊಸ ಐಡಿಯಾವೊಂದನ್ನ ಮಾಡಿದ್ದಾರೆ. ಪೊಲೀಸರು ಗಲ್ಲಿ ಗಲ್ಲಿಗಳಿಗೆ ಹೋಗಿ ಯಾರಾದರೂ ದೆಹಲಿಯ ನಿಜಾಮುದ್ದೀನ್ ಸಮಾವೇಶಕ್ಕೆ ಜಮಾತ್‍ಗೆ ಹೋಗಿ ಬಂದಿದ್ದರೆ ದಯವಿಟ್ಟು ಬಂದು ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ ಪಟ್ಟಣದ ತಬ್ಲಿಗ ಸಮಾಜದ ಎರಿಯಾಗಳಿಗೆ ಹೋಗಿ ಪೊಲೀಸರು ಧ್ವನಿ ವರ್ಧಕಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ …

Read More »

ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …

Read More »

ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ.

ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಆದೇಶ ಹೇರಲಾಗಿದೆ. ಲಾಕ್‍ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿಯುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ಕೂಡ ತೋರಿಸಿದ್ದಾರೆ. ಪೋಲಿಸರ ಲಾಠಿ ಏಟಿಗೂ ಲಾಕ್ ಡೌನ್ ಪಾಲಿಸದ ಜನರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ …

Read More »

ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆ:ಗಣೇಶ ಹುಕ್ಕೇರಿ

ಚಿಕ್ಕೋಡಿ – ಕೊರೋನಾ ವೈರಸ್ ಹರಡುವುದನ್ನು ತಡೆಯಲು ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಜನಪ್ರತಿನಿಧಿಗಳು ನಿರಂತರ ಪ್ರಯತ್ನ ಮುಂದುವರಿಸಿದ್ದಾರೆ. ಜನರಲ್ಲಿ ಅರಿವು ಮೂಡಿಸುವುದು, ಔಷಧಗಳನ್ನು ಸಿಂಬಡಿಸುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತರಿಸುವುದು… ಇತ್ಯಾದಿ ಕೆಲಸಗಳನ್ನು ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಗಣೇಶ ಹುಕ್ಕೇರಿ ಶಾಸಕ ಗಣೇಶ ಹುಕ್ಕೇರಿ ಕಳೆದ ವಾರ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೋನಾ ವೈರಸ್ ನಿಯಂತ್ರಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ …

Read More »

ಲಾಕ್‍ಡೌನ್ ಯಶಸ್ವಿಗೊಳಿಸಲು ಮೋದಿಗೆ ಚಿಕ್ಕೋಡಿ ಗೃಹಿಣಿ ಪತ್ರ

ಚಿಕ್ಕೋಡಿ(ಬೆಳಗಾವಿ): ಲಾಕ್ ಡೌನ್ ಯಶಸ್ವಿಗೊಳಿಸಲು ಗೃಹಿಣಿಯೊಬ್ಬರು ಪ್ರಧಾನಿ ಮೋದಿಗೆ ಟ್ವೀಟ್ ಮೂಲಕ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಗೃಹಿಣಿ ದೀಪಾ ಬಿ.ಕೆ, ಪ್ರಧಾನಿಗೆ ಪತ್ರ ಬರೆದು ರಾಜ್ಯದ ಎಲ್ಲ ಇಲಾಖೆಗಳನ್ನ ಲಾಕ್ ಡೌನ್ ಸೇವೆಗೆ ಬಳಸಿಕೊಳ್ಳಬೇಕು. ಕೇವಲ 5 ರಿಂದ 6 ಇಲಾಖೆಗಳು ಮಾತ್ರ ಲಾಕ್ ಡೌನ್ ಇದ್ದರೂ ಸೇವೆ ಸಲ್ಲಿಸುತ್ತಿವೆ. ಬಾಕಿ ಉಳಿದಿರುವ 50ಕ್ಕೂ ಹೆಚ್ಚು ಇಲಾಖೆಗಳ ನೌಕರರ ಸದ್ಬಳಕೆ ಮಾಡಿಕೊಂಡು ಕೊರೊನಾ ಬಗ್ಗೆ ಜಾಗೃತಿ …

Read More »

ಉದ್ದೇಶಪೂರ್ವಕವಾಗಿ ಲಾಠಿ ಬೀಸಬಾರದು: ಮಹಾಂತೇಶ ಕವಟಗಿಮಠ

ಚಿಕ್ಕೋಡಿ : ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿಯೂ ಎಲ್ಲ ಜನರಿಗೂ ಮಾಸ್ಕ ವಿತರಿಸುವ ಮೂಲಕ ಸಾಮಾಜಿಕ ಅಂತರಕಾಯ್ದುಕೊಳ್ಳುವಂತೆ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ವಿಧಾನಪರಿಷತ್‍ನ ಸರಕಾರಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ಪಟ್ಟಣದ ಮಿನಿವಿಧಾನ ಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳಸಭೆಯಲ್ಲಿ ಮಾತನಾಡಿದ ಅವರು, ತರಕಾರಿ ಮಾರಾಟಕ್ಕೆ ಹೋಗುವವರು ಹಾಗೂ ಅಟೋದವರು ಕಡ್ಡಾಯವಾಗಿ ಮಾಸ್ಕ ಹಾಕಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು …

Read More »