ಚಿಕ್ಕೋಡಿ (ಬೆಳಗಾವಿ): ನಡೆದುಕೊಂಡೇ ಜಾರ್ಖಂಡ್ನ ತನ್ನ ಗ್ರಾಮಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬಾಲಾಲ್ ಸಿಂಗ್(45) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಂಡವು ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿತ್ತು. ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 13 ಜನರ ಕಾರ್ಮಿಕರು ವಾಹನ ಹಾಗೂ ರೈಲ್ವೆ ವ್ಯವಸ್ಥೆ ಇಲ್ಲದ ಕಾರಣ ಮೇ 5ರಂದು ನಡೆದುಕೊಂಡು ಜಾರ್ಖಂಡ್ಗೆ …
Read More »ಚಿಕ್ಕೋಡಿ:ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ
ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಯಕ್ಸಂಬಾದ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಪೂಗತ್ಯಾನಟ್ಟಿ ಇವರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಬಂದ ಶಮನೇವಾಡಿಯ ಸಂಜೀವಕುಮಾರ …
Read More »ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ……
ಚಿಕ್ಕೋಡಿ (ಬೆಳಗಾವಿ): ಲಾಕ್ಡೌನ್ ಹಿನ್ನೆಲೆ ರಾಜ್ಯದಲ್ಲಿ ಕಳೆದ 43 ದಿನಗಳಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ನಿನ್ನೆಯಿಂದ ರಾಜ್ಯ ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿ ಕಂಟೈನಮೆಂಟ್ ಝೋನ್ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮದ್ಯ ಸಿಕ್ಕಿದ್ದೇ ತಡ ಕೆಲವೆಡೆ ಕುಡುಕರ ರಂಪಾಟ, ಗಲಾಟೆಗಳು ಜೋರಾಗಿ ಶುರುವಾಗಿವೆ. ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಕುಡುಕನೊಬ್ಬ ವೈದ್ಯರ ಮೇಲೆ ಹಲ್ಲೆ …
Read More »11 ಟೈರ್ ಟ್ಯೂಬ್ನಲ್ಲಿ ಸಾಗಿಸುತ್ತಿದ್ದ 330 ಲೀಟರ್ ಕಳ್ಳಭಟ್ಟಿ ವಶ………
ಚಿಕ್ಕೋಡಿ/ಬೆಳಗಾವಿ: ಕೊರೊನಾದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದ ಕಾರಣ ಕಳ್ಳ ಭಟ್ಟಿ ದಂಧೆಗೆ ಕಡಿವಾಣ ಹಾಕಲು ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ. ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ …
Read More »ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ …
Read More »ಡೊಣ್ಣೆ ಮೆಣಸಿನಕಾಯಿ ಹಾನಿ ಲಕ್ಷಾಂತರ ರೊ ನಷ್ಟ ಸರ್ಕಾರ ನೀಡುತ್ತಾ ಸಹಾಯ ದನ ?…..
ಚಿಕ್ಕೋಡಿ:೧೫ ಲಕ್ಷ ರೂ ಹಾನಿ. ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ನೀರು ತರಿಸಿದ ಡೊಣ್ಣ ಮೆಣಸಿನಕಾಯಿ ತರಕಾರಿ ಬೆಳೆ ಒಂದು ಕಡೆ ಕೊರೊನಾ ಭೀತಿ ಮತ್ತೊಂದು ಕಡೆ ನೆತ್ತಿ ಸುಡುವ ಬೀರು ಬಿಸಲಿನ ಬೇಗೆ ಇಂತಹ ಸಂದೀಗ್ಧ ಪರಿಸ್ಥಿತಿಯಲ್ಲಿ ಜಮೀನಿನಲ್ಲಿ ಹುಲಸಾಗಿ ಬೆಳೆದ ಡೊಣ್ಣೆ ಮೆಣಸಿನಕಾಯಿ ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ಕಣ್ಣಿರು ತರಿಸುತ್ತಿದೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ವ್ಯಾಪ್ತಿಯ ಡೋಣವಾಡ ಗ್ರಾಮದ ಸಿದ್ದಗೌಡ ಪಾಟೀಲ ಎಂಬ ರೈತ ತನ್ನ …
Read More »ಸಿ ಆ ಪಿ ಎಫ್ ಯೋಧನಿಗೆ ಜಾಮೀನು,ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ..
ಬೆಳಗಾವಿ- ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಮಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಸಿಕ್ಕಿದೆ. *ಚಿಕ್ಕೋಡಿ 1ನೇ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 1ನೇ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ನೀಡಿದೆ. ಮಾಸ್ಕ್ ಹಾಕದ ವಿಚಾರಕ್ಕೆ ಪೇದೆ – ಸಿಆರ್ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ …
Read More »ಕುಡಚಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಚಿಕ್ಕೊಡಿಗು ಕೋರೋನ್ ಟೆಸ್ಟಿಂಗ್ ಲ್ಯಾಬ್ ಬೇಕು – ಗಣೇಶ್ ಹುಕ್ಕೇರಿ
ಚಿಕ್ಕೋಡಿ – ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಚಿಕ್ಕೋಡಿಯಲ್ಲೂ ಕೊರೋನಾ ಟೆಸ್ಟಿಂಗ್ ಲ್ಯಾಬ್ ಅಗತ್ಯವಾಗಿದ್ದು, ತಕ್ಷಣ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಗಣೇಶ ಹುಕ್ಕೇರಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಜೊತೆ ಮಾತನಾಡಿದ್ದೇನೆ. ಇಬ್ಬರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದಷ್ಟು ಬೇಗ ಲ್ಯಾಬ್ ಆರಂಭಿಸಬೇಕು ಎಂದರು. ಚಿಕ್ಕೋಡಿ ವ್ಯಾಪ್ತಿಯ ಕುಡಚಿಯಲ್ಲಿ ಅತ್ಯಂತ ಹೆಚ್ಚು ಕೊರೋನಾ ಸೋಂಕು ಕಂಡು ಬಂದಿದೆ. ಅಲ್ಲಿಯ ಜನರನ್ನು ಅಥವಾ ಬೇರೆ ಭಾಗದ …
Read More »ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ:ಸಚಿವರ ಕಿಡಿ
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು. …
Read More »ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಯೋಧ ಸಚಿನ ಸಾವಂತ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದಲಾಗ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಎಫ್ ಕೋಬ್ರಾ ಕಮಾಂಡೋ ಯೋಧನಿಗೆ ಬೇಡಿ ಹಾಕಿ ಕೂರಿಸಿದ್ದ …
Read More »