Breaking News
Home / ಜಿಲ್ಲೆ / ಬೆಳಗಾವಿ / ಬೈಲ್ ಹೊಂಗಲ್

ಬೈಲ್ ಹೊಂಗಲ್

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ.‌ ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …

Read More »

SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು. ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು …

Read More »

ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮ: ₹ 1 ಕೋಟಿ ಹಾನಿ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಸಮೀಪದ ಇಂಚಲ ಗ್ರಾಮದಲ್ಲಿ ಸೋಮವಾರ ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮವಾಗಿವೆ. ಒಂದು ಟ್ರ್ಯಾಕ್ಟರ್‌ ಹಾಗೂ ಕೃಷಿ ಯಂತ್ರೋಪಕರಣಗಳು ಸುಟ್ಟಿವೆ. ಇದರಿಂದ ₹ 1 ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.   ಬಿಳಿಜೋಳ, ಗೋವಿನ ಜೋಳ ಮತ್ತಿತರ ಬೆಳೆಗಳ ರಾಶಿ ಮುಗಿಸಿದ ರೈತರು ಗ್ರಾಮದ ಹೊರವಲಯದಲ್ಲಿ ಒಂದೇ ಕಡೆ ಬಣವಿ ಒಟ್ಟಿದ್ದರು. ಸೋಮವಾರ ಮಧ್ಯಾಹ್ನ ಒಂದು ಬಣವಿಗೆ ಬೆಂಕಿ ಹೊತ್ತಿಕೊಂಡಿತು. ಜನ ಅದನ್ನು …

Read More »

28 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ತಮ್ಮ ಊರಿಗೆ ಆಗಮಿಸಿದ ತಾಲೂಕಿನ ಸುತಗಟ್ಟಿ ಗ್ರಾಮದ ಯೋಧ ಈರಪ್ಪ ಬಾಳಿಗಟ್ಟಿ ಅವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ

ಬೈಲಹೊಂಗಲ: ಭಾರತೀಯ ಸೇನೆಯಲ್ಲಿ 28 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ತಮ್ಮ ಊರಿಗೆ ಆಗಮಿಸಿದ ತಾಲೂಕಿನ ಸುತಗಟ್ಟಿ ಗ್ರಾಮದ ಯೋಧ ಈರಪ್ಪ ಬಾಳಿಗಟ್ಟಿ ಅವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳಗಾವಿ ಜಿಲ್ಲಾ ಘಟಕ ಹಾಗೂ ಊರಿನ ಎಲ್ಲ ಮಾಜಿ ಸೈನಿಕರು ಹಮ್ಮಿಕೊಂಡಿದ್ದರು ಊರಿನ ದ್ವಾರದಿಂದ ಶ್ರೀ ಜೋಡು ಬಸವಣ್ಣನ ಗುಡಿಯವರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬಸವಂತಪ್ಪ ಕರಾಂವಿ ಇವರ ನೇತೃತ್ವದಲ್ಲಿ …

Read More »

ದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. :B.S.Y.

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ‘ಸಿದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. ನರೇಂದ್ರ ಮೋದಿ ಅವರ ಟೀಕೆ ಮಾಡುವುದನ್ನು ಬಿಟ್ಟು ನಿಮ್ಮ ಪರಿಸ್ಥಿತಿ ಎನಾಗಿದೆ, ಕಾಂಗ್ರೆಸ್‌ ಸ್ಥಿತಿ ಏನಾಗಿದೆ ನೋಡಿಕೊಳ್ಳಿ’ ಎಂದು ಶಾಸಕ ಬಿ.ಎಸ್‌. ಯಡಿಯೂರ‍ಪ್ಪ ಕಿಡಿಕಾರಿದರು. ಪಟ್ಟಣದಲ್ಲಿ ಶನಿವಾರ ನಡೆಸಿದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ‘ಎಲ್ಲ ಚುನಾವಣೆಗಳಲ್ಲೂ ಜನ ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ಹಣ ಬಲ, ತೋಳ ಬಲ, ಜಾತಿಯ ವಿಷಬೀಜ ಬಿತ್ತಿ ಚುನಾವಣೆ …

Read More »

ಮಲ್ಲಮ್ಮನ ಪ್ರತಿಮೆ ಲೋಕಾರ್ಪಣೆ ನಿರ್ಲಕ್ಷ್ಯ, ತೀವ್ರ ಪ್ರತಿಭಟನೆ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಅಶ್ವಾರೂಢ ಕಂಚಿನ ಪ್ರತಿಮೆ ಅನಾವರಣ ಸಂಬಂಧವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ತೀವ್ರ ವಾಗ್ವಾದ ನಡೆಯಿತು. ಬೆಳವಡಿ ಮಲ್ಲಮ್ಮನ ಉತ್ಸವ ಮೆರವಣಿಗೆ ಬೆಳಿಗ್ಗೆಯೇ ನಡೆಯಿತು. ಇದಕ್ಕೂ ಮುನ್ನ ಪ್ರತಿಮೆ ಅನಾವರಣ ಕಾರ್ಯಕ್ರಮ ಇತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಯೂ ಬರಲಿಲ್ಲ. ಇದರಿಂದ ಅನಾವರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕುತ್ತ ಬರಲಾಯಿತು. ರಾತ್ರಿ 8ರ ನಂತರ ಸಂಸದೆ …

Read More »

ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ

ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ. ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ …

Read More »

ಹಾರೂಗೊಪ್ಪ: ಚನ್ನಬಸವೇಶ್ವರ ರಥೋತ್ಸವ

ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ನವಿಲಿನ ಕಳಶ ಹೊತ್ತು ಆಕರ್ಷಕ ರಥವನ್ನು ಭಕ್ತರು ಹುಮ್ಮಸ್ಸಿನಿಂದ ಎಳೆದರು.   ಭಕ್ತರು ಹರಹರ ಮಹಾದೇವ, ಉಳವಿ ಚನ್ನಬಸವೇಶ್ವರ ಮಹರಾಜಕೀ ಜೈ ಎನ್ನುತ್ತ ರಥ ಎಳೆದರು. ಸುತ್ತಲಿನ ಗ್ರಾಮಗಳಿಂದ ಬಂದ ಜನ ಹೂವು, ಹಣ್ಣು, ಕಾರೀಕ್‌ಗಳನ್ನು ರಥಕ್ಕ ಎಸೆದರು. ದೇವಸ್ಥಾನದಲ್ಲಿ ಉಳವಿ ಚನ್ನಬಸವೇಶ್ವರ, ನಂದಿ ಮೂರ್ತಿಗಳಿಗೆ ವಿಶೇಷ ಪೂಜೆ, ಮಹಾಭಿಷೇಕ, …

Read More »

ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ’

ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ರಾಷ್ಟ್ರಪ್ರೇಮದ ಕುರಿತು ಮಕ್ಕಳಿಗೆ ತಿಳಿಸಿ, ಅವರಲ್ಲಿ ದೇಶಾಭಿಮಾನ ಬೆಳೆಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಶನಿವಾರ ವೀರಜ್ಯೋತಿ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿ ಅವರು ಮಾತನಾಡಿದರು.   ‘ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಸಂಚರಿಸಿದ ಜ್ಯೋತಿ ವಾಹನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬರುವ ದಿನಗಳಲ್ಲಿ ಕಿತ್ತೂರು ಉತ್ಸವ ರಾಷ್ಟ್ರ ಮಟ್ಟದಲ್ಲಿ …

Read More »

ಸಾವಿನಲ್ಲೂ ಸಾರ್ಥಕತೆ: ಇಬ್ಬರು ಅಂಧರ ಬಾಳಿಗೆ ಬೆಳಕಾದ ರುದ್ರಮ್ಮ ಹೊಂಗಲ್

ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಹಿರಿಯ ಜೀವಿ ರುದ್ರಮ್ಮ ಬಸವಣೆಪ್ಪ ಹೊಂಗಲ(ಕುದರಿ) ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಒಕ್ಕುಂದ ಗ್ರಾಮದ 93 ವರ್ಷದ ರುದ್ರಮ್ಮ ಹೊಂಗಲ ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ಅವರ ಕುಟುಂಬಸ್ಥರ ನಿರ್ಧಾರದಂತೆ‌ ಬೆಳಗಾವಿ ಕೆಎಲ್ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮುಖಾಂತರ ನೇತ್ರಗಳನ್ನು ದಾನ …

Read More »