Home / ಜಿಲ್ಲೆ / ಬೆಳಗಾವಿ / ಸವದತ್ತಿ (page 2)

ಸವದತ್ತಿ

ಜಾಕ್‌ವೆಲ್‌ ಮುತ್ತಿಗೆ ಯತ್ನ: ಲಘು ಲಾಠಿ ಪ್ರಹಾರ

ಸವದತ್ತಿ: ಬಾಕಿ ವೇತನ ಹಾಗೂ ನೇಮಕಾತಿ ಆದೇಶ ನೀಡಲು ಆಗ್ರಹಿಸಿ ಧಾರವಾಡದ ಜಲಮಂಡಳಿಯ ದಿನಗೂಲಿ ಕಾರ್ಮಿಕರು ಪಟ್ಟಣದಲ್ಲಿ ಬುಧವಾರ ನಡೆಸಿದ ಧರಣಿ ವೇಳೆ, ನೂಕಾಟ- ತಳ್ಳಾಟ ನಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಸಂದರ್ಭದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾದವು.   ಹುಬ್ಬಳಿ- ಧಾರವಾಡ ನಗರಗಳಿಗೆ ನೀರು ಸರಬರಾಜು ಮಾಡುವ ಇಲ್ಲಿನ ಜಾಕ್‌ವೆಲ್ ಬಳಿ ಬೆಳಿಗ್ಗೆಯಿಂದ ಶಾಂತಿಯುತ ಧರಣಿ ನಡೆಸಲಾಯಿತು. ಮಧ್ಯಾಹ್ನದವರೆಗೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ, …

Read More »

ರೇಣುಕಾ ಸನ್ನಿಧಿಯಲ್ಲಿ ಭಕ್ತಿ ಹೊಳೆ- ಮುಗಿಲು ಮುಟ್ಟಿದ ಜೈಕಾರ

ಸವದತ್ತಿ: ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಕ್ತಿಯ ಹೊಳೆ ಹರಿಯಿತು. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಜಗದಂಬಾ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಕ್ಷಿಪ್ತವಾಗಿ ಆಚರಿಸಲಾಗಿತ್ತು. ಈ ಬಾರಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಅಪಾರ ಜನ ಸೇರಿದರು.   ರೇಣುಕಾದೇವಿ ಸನ್ನಿಧಿಗೆ ಬಂದು ಪರಡಿ ತುಂಬುವುದು ಭಾರತ ಹುಣ್ಣಿಮೆಯ ಸಂಪ್ರದಾಯಗಳಲ್ಲಿ ಒಂದು. ಅದರಂತೆ, ಭಾನುವಾರ ಕೂಡ ಅಪಾರ ಭಕ್ತರು ಬೆಟ್ಟದಲ್ಲೇ ಪುಣ್ಯಸ್ನಾನ ಮಾಡಿ, ನೈವೇದ್ಯ ಸಿದ್ಧಪಡಿಸಿ ಪರಡಿ ತುಂಬಿದರು. ಕರಿಗಡಬು, …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

ಸವದತ್ತಿ ಬಳಿ ವ್ಯಕ್ತಿಯ ಮರ್ಡರ್…..

ಸವದತ್ತಿ: ಇಲ್ಲಿಯ ಹೂಲಿಯಲ್ಲಿ ವ್ಯಕ್ತಿಯೋರ್ವನನ್ನು ಮರ್ಡರ್ ಮಾಡಲಾಗಿದೆ. ಗುರುವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿದೆ. ಮಲ್ಲಪ್ಪ ಗಂಗಪ್ಪ ನಂದೆಣ್ಣವರ್ ಎನ್ನುವ 62 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. 30 ವರ್ಷದ ಉಮೇಶ ಫಕೀರಪ್ಪ ಹಾವುಕಡದ್ ಆರೋಪಿ. ಉಮೇಶ್ ಮಲ್ಲಪ್ಪನ ಸಹೋದರ ಸಂಬಂಧಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.

Read More »

ಮದ್ಯದ ಅಂಗಡಿಗಳಿಗೆ ಡಿ.ಸಿ ಭೇಟಿ: ಪರಿಶೀಲನೆ

ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎರಡು ಮದ್ಯದ ಅಂಗಡಿಗಳಿಗೆ ತೆರಳಿದರು. ಲೈಸೆನ್ಸ್, ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.   ಡಿ.ಸಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಡೆದ ಮಹಿಳೆಯರು, ಊರ ಮಧ್ಯದಲ್ಲಿರುವ ಎರಡು ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು. ಆಗ, ಪಾಟೀಲ ಸ್ವತಃ ಅಂಗಡಿಗಳಿಗೆ ಹೋಗಿ ಪರಿಶೀಲಿಸಿದರು. ಸದ್ಯ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ಸಮಗ್ರವಾಗಿ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

    ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಈ ಸಂದರ್ಭದಲ್ಲಿ ವಿಶಾಲ ಹಿರೇಮಠ್ …

Read More »

ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ C.M.

ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಉಪ ಸಭಾಧ್ಯಕ್ಷ ಆನಂದ ಮಾಮನಿ(56) ಅವರು ಭಾನುವಾರ(ಅ.23) ನಿಧನರಾಗಿದ್ದರು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಮಾಮನಿಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ …

Read More »

ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ‌ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ.‌ ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …

Read More »

ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತ ಸಾಗರ

ಸವದತ್ತಿ: ಜಗನ್ಮಾತೆ ನಿತ್ಯ ಪೂಜಿತೆ ಏಳುಕೊಳ್ಳದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರ ಅದ್ದೂರಿಯಿಂದ ವಿಜ್ರಂಭಿಸುತ್ತಿದೆ. 7 ನೇ ದಿನ ರವಿವಾರ ರಾಜ್ಯ ಸೇರಿ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನಾಶೀರ್ವಾದ ಪಡೆದು ಪುನೀತರಾದರು. ಏಳುಕೊಳ್ಳಗಳ ನಾಡಿನಲ್ಲಿ ನೆಲೆ ನಿಂತ ಯಲ್ಲಮ್ಮ ದೇವಿ ದರ್ಶನಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಘಟಸ್ಥಾಪನೆಯ 5 ನೇ ದಿನ ಶುಕ್ರವಾರ ಭಕ್ತರ ಆಗಮನ ಗಣನೀಯವಾಗಿ ಏರಿಕೆ ಕಂಡಿತ್ತು. 7 ನೇ ದಿನ ರವಿವಾರ …

Read More »