Breaking News

ಬೆಳಗಾವಿ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಹೆಸರು ಘೋಷಿಸಿದರು. 52 ಹೊಸ ಮುಖಗಳಿಗೆ ಅವಕಾಶ. ಒಬಿಸಿ -32, ಎಸಿ …

Read More »

ಮನನೊಂದು ಮಹಿಳೆ ಆತ್ಮಹತ್ಯೆ

ಸಂಕೇಶ್ವರ ಸೋಲಾಪುರದ ಸುಧಾ ಸೋಮನಾಥ್ ವಾಜಂತ್ರಿ ವಯಸ್ಸು 25 ಸುಮಾರು 8 ವರ್ಷಗಳಿಂದ ಮಕ್ಕಳು ಆಗದ ಕಾರಣ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಜನರು ಮಾತನಾಡುತ್ತಿದ್ದಾರೆ. ಆದರೆ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡರೆ ಮೃತ ದೇಹವು ಮೂರು ದಿನಗಳ ನಂತರ ನೀರಿನ ಮೇಲೆ ತೇಲಾಡುತ್ತದೆ ಆದರೆ ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ತಕ್ಷಣವೇ ಮೃತ ದೇಹ ನೀರಿನ ಮೇಲೆ ತೇಲಾಡುತ್ತಿದೆ. ಈ ಮೃತ ದೇಹ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ …

Read More »

ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ:ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲವೇ ಇಲ್ಲ. ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕೆಎಂಎಫ್ ನಲ್ಲಿ 26 ಲಕ್ಷ ರೈತರು ಸದಸ್ಯರಿದ್ದಾರೆ. 10 ಲಕ್ಷ ರೈತರು ಹಾಲು ಹಾಕುತ್ತಾರೆ. 15,200 ಸಂಘಗಳಿವೆ, 28 ಸಾವಿರ …

Read More »

ದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಲಾಗಿದ್ದು, ದಿನದ 24 ಗಂಟೆಯೂ ಅಲ್ಲಿ ಪೊಲೀಸರು ಮತ್ತು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದ್ದು, ವಶಪಡಿಸಿಕೊಂಡು ತನಿಖೆ ನಡೆಸಲಾಗಿದೆ.

Read More »

ಯಳ್ಳೂರ ಗ್ರಾಮದಲ್ಲಿ ಕುಸ್ತಿಪಂದ್ಯಾವಳಿ

ಬೆಳಗಾವಿ: ಶ್ರೀ ಕಲ್ಮೇಶ್ವರ ದೇವರು, ಶ್ರೀಚಾಂಗಳೇಶ್ವರಿ ದೇವಿ ಹಾಗೂ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಕುಸ್ತಿ ಮೈದಾನದಲ್ಲಿ ಏ.13ರಂದು ಮಧ್ಯಾಹ್ನ 2 ಗಂಟೆಗೆ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಕುಸ್ತಿಪಟುಗಳಿಗೆ ‘ಲೋಕಮಾನ್ಯ ಕೇಸರಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಕುಸ್ತಿಯ ಪಂದ್ಯಾವಳಿಯ ವಿಶೇಷತೆ ಎಂದರೇ, ಅಂತಾರಾಷ್ಟ್ರೀಯ ಕುಸ್ತಿಪಟು ಪೈಲವಾನ್ ಹುಸೇನ್ ಇರಾನ್ ಜತೆ ಭಾರತ ಕೇಸರಿ ಪೈಲವಾನ ಸುಮೀತ್ ಮಲೀಕ್ …

Read More »

ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ

ಕನಿಷ್ಠ ನಾಗರಿಕ ಸೌಲಭ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿಯ ಕಣಬರ್ಗಿಯಲ್ಲಿರುವ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ನೈರ್ಮಲ್ಯ, ಬೀದಿದೀಪ, ಸಮರ್ಪಕ ನೀರು ಪೂರೈಕೆ ಹಾಗೂ ಉತ್ತಮ ರಸ್ತೆಗಾಗಿ ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಮಹಾನಗರಸಭೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಕೊನೆಯ ಅಸ್ತ್ರವಾಗಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕರಿಸುವ …

Read More »

ಅಕ್ರಮವಾಗಿ ಗಾಂಜಾ ಮಾರಾಟರೂ.35,500/- ಮೌಲ್ಯದ 474 ಗ್ರಾಂ ಗಾಂಜಾ ವಶ.

ಗಣೇಶಪುರ ಜ್ಯೋತಿ ನಗರ ಹತ್ತಿರ  ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಂತೆ . ನಚಿಕೇತ ಎಸ್ ಜನಗೌಡ, ಪಿಐ ಕ್ಯಾಂಪ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ಆರೋಪಿತರಾದ 1) ನದೀಮ್ ಅಲ್ಲಾವುದ್ದಿನ್‌ ನದಾಫ್ (23) ಸಾ: ಜಯನಗರ ಮಚ್ಚೆ ಬೆಳಗಾವಿ, 2) ಮನೀಶ ಮಾರುತಿ ಹುಂದ್ರೆ (23) ಸಾ: ಕಶ್ವರ ನಗರ ಹಿಂಡಲಗಾ ಬೆಳಗಾವಿ. ಇವರನ್ನು ವಶಕ್ಕೆ ಪಡೆದು, ವಿಚಾರಣಿ ಕೈಕೊಂಡು, …

Read More »

ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ?

ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ ಎಂದು ಜನ ಎದುರು ನೋಡುತ್ತಿದ್ದಾರೆ, ಉತ್ತರ ಕರ್ನಾಟಕದ ಬಲಿಷ್ಟ ನಾಯಕ ಉಮೇಶ್ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆ ಈ ಬಾರಿ ಕುತುಹಲ ಕೇರಳಿಸಿದೆ. ಹುಕ್ಕೇರಿ ಮತಕ್ಷೇತ್ರದಲ್ಲಿ ಯಾವದೇ ಪಕ್ಷದ ಮೇಲಿನ ಚುನಾವಣೆ ಜರುಗಿದ ಉದಾಹರಣೆಗಳಿಲ್ಲಾ, ಉಮೇಶ್ ಕತ್ತಿ ಯಾವಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಅದೆ ಗೆಲವು ಪಡೆಯುತ್ತಿತ್ತು ಆದರೆ ಉಮೇಶ್ ಕತ್ತಿ ನಿಧನದಿಂದ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚಟುವಟುಕೆಗಳು ಗದಿಗೇರಿವೆ ಈಗಾಗಲೇ …

Read More »

ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ:ಶರೀಫಾ ನದಾಫ್

ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆ ಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಜೆ ಡಿ ಎಸ್ ಮುಖಂಡೆ ಶರೀಫಾ ನದಾಫ್ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಆಡಳಿತದಿಂದ ಕ್ಷೇತ್ರದ ದಲ್ಲಿ ಯಾವದೇ ಅಭಿವೃದ್ಧಿ ಕಾರ್ಯ ಜರುಗಿಲ್ಕಾ ವಿಷೇಶವಾಗಿ ಮಹಿಳೆಯರ ಸಮಸ್ಯೆ,ಯುವಕರಿಗೆ ಉದ್ಯೋಗ ಮತ್ತು ಅಭಿವೃದ್ಧಿ ಗಳು ವಂಚಿತರಾಗಿದ್ದಾರೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು …

Read More »

ಅಂತಿಮಗೊಳ್ಳದ Congress ತೃತೀಯ ಪಟ್ಟಿ

ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್‌ ಘೋಷಿಸಲಾಗುತ್ತದೆ.   ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …

Read More »