ಬೆಳಗಾವಿ

ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್​ಕುಮಾರ್

ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ‌‌ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್​​ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು …

Read More »

ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …

Read More »

ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್​

ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …

Read More »

ಪಿಎಸ್‌ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!

ಬೆಂಗಳೂರು, ಸೆ.28. ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್‌ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …

Read More »

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ. ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ …

Read More »

ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!

ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.   ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …

Read More »

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …

Read More »

ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು

ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »