Breaking News

ಬೆಳಗಾವಿ

ಮಲ್ಲಮ್ಮನ ಪ್ರತಿಮೆ ಲೋಕಾರ್ಪಣೆ ನಿರ್ಲಕ್ಷ್ಯ, ತೀವ್ರ ಪ್ರತಿಭಟನೆ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಅಶ್ವಾರೂಢ ಕಂಚಿನ ಪ್ರತಿಮೆ ಅನಾವರಣ ಸಂಬಂಧವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ತೀವ್ರ ವಾಗ್ವಾದ ನಡೆಯಿತು. ಬೆಳವಡಿ ಮಲ್ಲಮ್ಮನ ಉತ್ಸವ ಮೆರವಣಿಗೆ ಬೆಳಿಗ್ಗೆಯೇ ನಡೆಯಿತು. ಇದಕ್ಕೂ ಮುನ್ನ ಪ್ರತಿಮೆ ಅನಾವರಣ ಕಾರ್ಯಕ್ರಮ ಇತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಯೂ ಬರಲಿಲ್ಲ. ಇದರಿಂದ ಅನಾವರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕುತ್ತ ಬರಲಾಯಿತು. ರಾತ್ರಿ 8ರ ನಂತರ ಸಂಸದೆ …

Read More »

ಬೆಳಗಾವಿ: ಮಾರ್ಚ್‌ 1ರಂದು ಸಿದ್ದರಾಮಯ್ಯ ‘ಪ್ರಜಾಧ್ವನಿ’ ಯಾತ್ರೆ

ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಯ ಅಂಗವಾಗಿ ಮಾರ್ಚ್‌ 1ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ.   ಬೆಳಿಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕುಗಳ ಸಮೇತ ಯುವಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್‌ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, …

Read More »

ಚಿಕ್ಕೋಡಿ: ಆಲಿಸಿದ ಪಾಠ ಅರಿತು ಬಾಳಿರಿ

ಚಿಕ್ಕೋಡಿ: ‘ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಕೇವಲ ಉತ್ಸವವಾಗದೇ, ಇಲ್ಲಿ ಆಲಿಸಿದ, ವೀಕ್ಷಿಸಿದ ಎಲ್ಲ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಸರ ಸಮತೋಲನ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸಬೇಕು’ ಎಂದು ಕೊಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.   ಮಠದಲ್ಲಿ ಭಾನುವಾರ ಉತ್ಸವದ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಮನುಷ್ಯನಿಗಿಂತ ಮರೆಗುಳಿತನ ಹೊಂದಿರುವ ಜೀವಿ ಇನ್ನೊಂದಿಲ್ಲ. ವಿನಾಶ ಕಾಲ ಸಮೀಪಿಸುತ್ತಿದೆ ಎಂಬುದು ಮನುಕುಲ …

Read More »

ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್‌ : ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ: ‘ಬೆಳಗಾವಿ ಜನ ತೋರಿದ ಪ್ರೀತಿ, ಮಾಡಿದ ಆಶೀರ್ವಾದ ನನಗೆ ಸ್ಫೂರ್ತಿ ನೀಡಿದೆ. ಬೆಳಗಾವಿ ಕುಂದಾ, ಬೆಳಗಾವಿ ಮಂದಿ ಎರಡೂ ಬಹಳ ಸಿಹಿ. ನಿಮ್ಮ ಈ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್‌ ಕೊಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.   ನಗರದಲ್ಲಿ ಸೋಮವಾರ ₹2,240 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ, ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ₹16 ಸಾವಿರ ಕೋಟಿಯನ್ನು …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ.

ಬೆಳಗಾವಿ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ತಮ್ಮ ರಾಜಕೀಯ ವೈರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿರುವ ಪರಿಣಾಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ರಮೇಶ್‌ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಕ್ಷೇತ್ರ ಪುನರ್‌ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ …

Read More »

ಅಸಾಧ್ಯವನ್ನು ಸಾಧ್ಯವಾಗಿಸಿದ ಮೋದಿ: ಸಿಎಂ ಬೊಮ್ಮಾಯಿ

ಬೆಳಗಾವಿ: ಪ್ರಧಾನಿ ಮೋದಿ ದೇಶವನ್ನು ಅಸಾಧ್ಯದಿಂದ ಸಾಧ್ಯದ ಕಡೆಗೆ, ಅನಿಶ್ಚಿತತೆಯಿಂದ ನಿಶ್ಚಿತತೆಯೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಸಂಶಯವನ್ನು ಸಂಕಲ್ಪ ಮಾಡಿದ್ದಾರೆ. ಸಂಕಲ್ಪವನ್ನು ಸಿದ್ಧಿ ಮಾಡಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.   ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ನಡೆದ 2,240 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಮೋದಿ ಆಸೆಯಂತೆ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಾಣಕ್ಕೆ ನಾವು ಸಿದ್ಧರಾಗಿದ್ದೇವೆ. …

Read More »

ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು.: ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ:ಗೆ ಹೊಸ ಶಕ್ತಿ ನೀಡುವ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು,. ಇದು ಈ ಭಾಗದ ಕ್ಷಿಪ್ರಗತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಬಸವೇಶ್ವರರನ್ನು ಸ್ಮರಿಸಿ ಮಾತನ್ನು ಆರಂಭಿಸಿದ ಪ್ರಧಾನಿ, ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು. ಬೆಳಗಾವಿಯ ಬಂಧುಗಳಿಗೆ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದರು. ಬೆಳಗಾವಿಯ ಜನರ ಪ್ರೀತಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಅವರು …

Read More »

ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ

ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.   ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …

Read More »

ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ

ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ. ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ …

Read More »

ಆಕಾಶಕ್ಕೆ ಲಗ್ಗೆ ಇಟ್ಟ ಚಿಣ್ಣರ ದಂಡು

ಚನ್ನಮ್ಮನ ಕಿತ್ತೂರು: ಅತ್ತ ರಾಜುವಿನ ಗಾಳಿಪಟ, ಇತ್ತ ಚಂದ್ರಿಕಾಳ ಗಾಳಿಪಟ, ರಮ್ಯ ಕೈಯಲ್ಲಿ ದಾರದ ಉಂಡೆ, ಉಸ್ತಾದನ ಕೈಯಲ್ಲಿ ಬಾಲಂಗೋಚಿ, ಸೂತ್ರ ಹರಿದು ಮಾಯವಾಯಿತು ಪರಮೇಶಿಯ ಪಟ, ಅದ ನೋಡಿ ಹೋಯ್‌… ಎಂದು ಕೂಗಿದ ಚಿಣ್ಣರ ದಂಡು. ‘ ವಿವಿಧ ಶಾಲೆಗಳಿಂದ ಬಂದಿದ್ದ ನೂರಾರು ಮಕ್ಕಳಿಗೆ ಬಣ್ಭಬಣ್ಣದ ಪಟಗಳನ್ನು ಉಚಿತವಾಗಿ ನೀಡಲಾಯಿತು. ಪಟ ಮತ್ತು ದಾರದ ಉಂಡೆಗಳು ಕೈಗೆ ಸಿಕ್ಕಿದ್ದೇ ತಡ ಚಿಣ್ಣರು ನಾ ಮುಂದು, ತಾ ಮುಂದು ಎಂದು …

Read More »