Breaking News

ಬೆಳಗಾವಿ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ಮಾಜಿ ಸಿಎಂ BSY

ಬೆಳಗಾವಿ : ಮುಖ್ಯಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

Read More »

ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಿಸಲಿ’:.ನಿರ್ಮಲಾ‌ ಬಟ್ಟಲ್‌

ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್‌ಆರ್‌ಎಸ್‌ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ‌ ಬಟ್ಟಲ್‌ ಹೇಳಿದರು.   ಇಲ್ಲಿನ ಕುಮಾರ‌ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ …

Read More »

ಬೆಳಗಾವಿ; ಸ್ತ್ರೀ ಸಂವೇದನೆಗಳಿಗೆ ಕನ್ನಡಿ ಹಿಡಿದ ಸಮ್ಮೇಳನ

ಬೆಳಗಾವಿ: ಇಲ್ಲಿ ಶನಿವಾರ ಆರಂಭವಾದ ಅಖಿಲ ಭಾರತ ಕವಯತ್ರಿಯರ ಸಮ್ಮೇಳನವು ಸ್ತ್ರೀ ಸಂವೇದನೆಗಳಿಗೆ ಕನ್ನಡಿ ಹಿಡಿಯಿತು. ಮೊದಲ ದಿನದ ಗೋಷ್ಠಿಗಳಲ್ಲಿ ಕಾವ್ಯಗಳನ್ನು ಪ್ರಸ್ತುತಪಡಿಸಿದ ವಿವಿಧ ರಾಜ್ಯಗಳ ಕವಯತ್ರಿಯರು, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಆಸಿಡ್ ದಾಳಿ, ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿದರು.   ಪುರುಷರು ಮತ್ತು ಮಹಿಳೆಯರ ಮಧ್ಯೆ ಇರುವ ಅಸಮಾನತೆ ನಿವಾರಣೆ, ಮಹಿಳಾ ಸಬಲೀಕರಣದ ಬಗ್ಗೆಯೂ ದನಿ ಎತ್ತಿದರು. ಮಹಿಳೆಯರ ಅಂತಃಶಕ್ತಿಯಾಗಿರುವ ಪ್ರೀತಿ, ಪ್ರೇಮ, ಕರುಣೆ, ಸಹನೆ ಮೇಲೂ ಹಲವರು …

Read More »

ಫೆಬ್ರವರಿ 1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆ ಬೆಳವಣಿಗೆ ಎನ್ನುತ್ತ ನಗುತ್ತಲೇ ಹೊರಟುಬಿಟ್ಟರು ಚಾಣಾಕ್ಷ ಬಾಲಚಂದ್ರ ಜಾರಕಿಹೊಳಿ.

ಬೆಳಗಾವಿ – ಅಮಿತಾ ಶಾ ಬಂದು ಸಭೆ ಮಾಡಿದ್ದು ಬಹಳ ಒಳ್ಳೆಯದಾಗಿದೆ. ಫೆಬ್ರವರಿ 1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ ಆಗಲಿದೆ. ಎಲ್ಲ ನಾಯಕರು ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಲಿದ್ದಾರೆ ಎಂದು ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಡಿಯೂರಪ್ಪ, ಪ್ರಹ್ಲಾದ ಜೋಶಿ, ನಳೀನ್ ಕುಮಾರ …

Read More »

ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು

ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಯುದ್ಧ ವಿಮಾನಗಳ ಪತನದಲ್ಲಿ ಮೃತಪಟ್ಟ ಪೈಲೆಟ್‌ ಬೆಳಗಾವಿ ಮೂಲದವರು

ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್‌ 30 ಎಂಕೆಐ ಹಾಗೂ ಮಿರಾಜ್-2000 ಯುದ್ಧ ವಿಮಾನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಬೆಳಗಾವಿ ಮೂಲದವರು.   ಇಲ್ಲಿನ ಗಣೇಶಪುರದ ಮನೆಯಲ್ಲಿ 1987ರಲ್ಲಿ ಜನಿಸಿದ ಅವರು, ಬಾಲ್ಯವನ್ನು ಇಲ್ಲಿಯೇ ಕಳೆದಿದ್ದರು. ನಗರದ ಕೇಂದ್ರೀಯ ವಿದ್ಯಾಲಯ-2ರಲ್ಲಿ ಶಿಕ್ಷಣ ಪೂರೈಸಿದ್ದರು. ಪೈಲೆಟ್‌ ಆದ ಮೇಲೆ ಪತ್ನಿ, ಮಕ್ಕಳ ಸಮೇತ ಗ್ವಾಲಿಯರ್‌ನಲ್ಲಿ ನೆಲೆಸಿದ್ದರು. 2009ರಿಂದ ಭಾರತೀಯ …

Read More »

ಐವರು ಶತಾಯುಷಿಗಳಿಗೆ ಸನ್ಮಾನ

ಅಂಕಲಗಿ: ಹಿರಿಯರು ನಮ್ಮ ಇಂದಿನ ಬಹು ದೊಡ್ಡ ಆಸ್ತಿ. ಅವರ ನಡೆ, ನುಡಿ, ಆದರ್ಶಗಳು ನಮಗೆಲ್ಲ ಸ್ಫೂರ್ತಿ ಎಂದು ಸತೀಶ ಶುಗರ್ಸ್‌ನ ಉಪಾಧ್ಯಕ್ಷ ಎಲ್.ಆರ್.ಕಾರಗಿ ಹೇಳಿದರು. ಸಮೀಪದ ಮಿಡಕನಟ್ಟಿ ಗ್ರಾಮದಲ್ಲಿ ಶುಕ್ರವಾರ ಶತಾಯುಷಿಗಳಿಗಾಗಿ ಹಮ್ಮಿಕೊಂಡ ಶತಮಾನೋತ್ಸವ ಸಮಾರಂಭದಲ್ಲಿ ಐವರು ಶತಾಯುಷಿಗಳನ್ನು ಕಾರಗಿ ಪರಿವಾರದ ಪರವಾಗಿ ಸನ್ಮಾನಿಸಿ ಮಾತನಾಡಿದರು.   ಶತಾಯುಷಿಗಳಾದ ರಾಮಸಿದ್ದಪ್ಪ ಹಾಲಪ್ಪ ಕಾರಗಿ (105), ಹಾಲಪ್ಪ ಸಿದ್ದಪ್ಪ ಸಂಸುದ್ದಿ (104), ಶಿವಲಿಂಗಪ್ಪ ಶಿದ್ಲಿಂಗಪ್ಪ ಪಾಟೀಲ (ನಬಾಪೂರ)-102), ಭೀಮಪ್ಪ ಹನುಮಂತಪ್ಪ …

Read More »

‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನ

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನರಾಗಿದ್ದಾರೆ. ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಅಶೋಕ ಚಂದರಗಿ ಪಡೆದಿದ್ದಾರೆ. ಕಳೆದ ಬಾರಿ ಇದೇ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿತ್ತು. ಎಂಇಎಸ್‌ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ

ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್​ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …

Read More »