ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ; 1) ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕರ್ನಾಟಕದ ಗಡಿಭಾಗದಲ್ಲಿ ನಡೆದ ಚಳವಳಿಯಲ್ಲಿ ಮಡಿದ ಮರಾಠಿ ಭಾಷಿಕರನ್ನು ಹುತಾತ್ಮರೆಂದು ಪರಿಗಣಿಸಿ …
Read More »ಕೆಪಿಟಿಸಿಎಲ್ ಮಾದರಿ ಪಿಎಸ್ಐಗೆ ಏಕಿಲ್ಲ? PSI ನೇಮಕಾತಿ ಪರೀಕ್ಷೆ ಪಾಸಾದವರ ಅಳಲು
ಬೆಳಗಾವಿ: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಿಗಳನ್ನು ಬಿಟ್ಟು, ಉಳಿದವರಿಗೆ ನೇಮಕಾತಿ ಆದೇಶ ನೀಡಲು ರಾಜ್ಯ ಸಾರ್ಕಾರ ನಿರ್ಧರಿಸಿದೆ. ಇದೇ ರೀತಿಯ ನಿಲುವನ್ನು 545 ಪಿಎಸ್ಐ ನೇಮಕಾತಿ ಪರೀಕ್ಷೆ ಬರೆದವರ ಬಗ್ಗೆ ಏಕೆ ತಾಳುತ್ತಿಲ್ಲ ಎಂದು ಅಭ್ಯರ್ಥಿಗಳು ಪ್ರಶ್ನೆ ಎತ್ತಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ, ಒಎಂಆರ್ ಶೀಟ್ ತಿದ್ದುವ ಮೂಲಕ ಅಕ್ರಮ ಎಸಗಲಾಗಿದೆ. ಇದೇ ಮಾದರಿಯ ಅಕ್ರಮಗಳು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲೂ ನಡೆದಿವೆ. …
Read More »ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಅನುದಾನಿತ ಶಾಲಾ ಕಾಲೇಜುಗಳಲ್ಲಿ 2006 ರ ನಂತರ ನೇಮಕ ಹೊಂದಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರಿಗೆ ನಿಶ್ಚಿತ ಪಿಂಚಣಿ ಸೌಲಭ್ಯ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ಅನುದಾನಿತ ನೌಕರರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜಿ.ಹನುಮಂತಪ್ಪ, ಮುತ್ತುರಾಜ ಎಮ್.ಎಮ್., ಎಸ್.ಎಮ್.ಮಾಮೂಲದಾರ, …
Read More »ಮೋಲಾಸಿಸ್ ಹಗರಣ ರಾಜ್ಯದಲ್ಲಿ ನಡೆದಿದೆ: ಬಿ.ಕೆ.ಹರಿಪ್ರಸಾದ್
ರಾಜ್ಯದಲ್ಲಿ ಮೊಲಾಸಿಸ್ ಹಗರಣ ನಡೆದಿದೆ ಎಂದು ಬಿ ಕೆ ಹರಿಪ್ರಸಾದ ಹೇಳಿದರು.ಅವರು ಸುವರ್ಣಸೌಧ ಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಬಿಜೆಪಿಯ ಸಿ ಟಿ ರವಿ ನನ್ನ ವಿರುದ್ದ ಇಲ್ಲ ಸಲ್ಲದ ಮಾತುಗಳಾಡುತ್ತಾರೆ ಭ್ರಷ್ಟಾಚಾರಗಳನ್ನು ಹೋರ ತಂದರೆ ಪೋಲಿಸರ ಮುಖಾಂತರ ಅರೇಷ್ಟ ಮಾಡ್ತಾರೆ. ಕೆಂದ್ರದಲ್ಲಿ ಇ ಡಿ, ಐ ಟಿ ಬಳೆಸಿದರೆ ರಾಜ್ಯದಲ್ಲಿ ಪೋಲಿಸರ ಮೂಲಕ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಭ್ರಷ್ಟಾಚಾರ ವಿರುಧ್ಧ ನಾವು ಚರ್ಚೆಗೆ ಸಿದ್ದ ದಾಖಲೆಗಳನ್ನು ನಾವು ಸಭೆ ಮುಂದೆ …
Read More »ರಾಹುಲ್ ಯಾತ್ರೆ ತಡೆಗೆ ಕೋವಿಡ್ ನೆಪ: ಸತೀಶ್ ಜಾರಕಿಹೊಳಿ
ಬೆಳಗಾವಿ: ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ “ಭಾರತ್ ಜೋಡೋ ಯಾತ್ರೆ’ ತಡೆಯಲು ಬಿಜೆಪಿ ಮತ್ತೆ ಕೊರೊನಾ ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರಲ್ಲಿ ಮುಖ್ಯವಾಗಿ “ಭಾರತ ಜೋಡೋ ಯಾತ್ರೆ’ ಅಭೂತಪೂರ್ವವಾಗಿ ಮುನ್ನುಗ್ಗುತ್ತಿದೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ಅದನ್ನು ತಡೆಯಲು ಕೊರೊನಾ ನೆಪ ಹೇಳುತ್ತಿದೆ …
Read More »ಕನ್ನಡ ಭವನ ರಂಗಮಂದಿರ ಸಿದ್ಧ
ಬೆಳಗಾವಿ: ಗಡಿ ಜಿಲ್ಲೆಯ ಕಲಾವಿದರು, ಸಾಹಿತಿಗಳು, ಪ್ರೇಕ್ಷಕರು ಎರಡು ದಶಕಗಳಿಂದ ಕಾಣುತ್ತಿದ್ದ ಕನಸು ಕೊನೆಗೂ ಕೈಗೂಡಿದೆ. ಸಾರಸ್ವತ ಲೋಕದ ಕೇಂದ್ರವಾಗಿ ಕನ್ನಡ ಭವನ ರಂಗಮಂದಿರ ತಲೆಎತ್ತಿದೆ. ಡಿ.27ರಿಂದ ಸಾಂಸ್ಕೃತಿಕ ವೇದಿಕೆಯಾಗಿ ತೆರೆದುಕೊಳ್ಳಲಿದೆ. ಕುಂದಾನಗರಿಯ ನೆಹರೂ ನಗರದಲ್ಲಿ ಈ ಭವನ ನಿರ್ಮಿಸಲಾಗಿದೆ. ಶ್ರೀಕೃಷ್ಣದೇವರಾಯ ವೃತ್ತದಿಂದ ತುಸು ಮುಂದಕ್ಕೆ ಹೋಗಿ, ಬಲಕ್ಕೆ ತಿರುಗಿದರೆ ರಾಮದೇವ ಹೋಟೆಲ್ ಹಿಂಭಾಗದಲ್ಲಿ ಭವನವಿದೆ. ಹೊರಗಡೆಯಿಂದ ಕಣ್ಹಾಯಿಸಿದರೆ ಹೈಟೆಕ್ ಕಟ್ಟಡದಂತೆ ಕಾಣುವ ಈ ಭವನ ಎಲ್ಲ ಆಧುನಿಕ ಸೌಕರ್ಯಗಳನ್ನೂ …
Read More »ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ: ಯತ್ನಾಳ
ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿ 29 ರಂದು ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ. ಮೀಸಲಾತಿ ಘೋಷಣೆ ಆಗುವ ಭರವಸೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 2ಎ ಸಮಾನವಾದ ಮೀಸಲಾತಿ ಸಿಗುತ್ತದೆ. ತಾಯಿ ಆಣೆ ಮಾಡಿ …
Read More »ಕನ್ನಡಿಗರಿಗೆ ಉದ್ಯೋಗ: ಖಾಸಗಿ ನಿರ್ಣಯ ಅಂಗೀಕಾರ
ಬೆಳಗಾವಿ: ರಾಜ್ಯದಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಖಾಸಗಿ ನಿರ್ಣಯವನ್ನು ವಿಧಾನಪರಿಷತ್ನಲ್ಲಿ ಅಂಗೀರಿಸಲಾಯಿತು.ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಮಂಡಿಸಿದ ಖಾಸಗಿ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
Read More »ಫೆಬ್ರವರಿ ತಿಂಗಳಲ್ಲಿ ಬಜೆಟ್ : ಸಿಎಂ ಬಬೊಮ್ಮಾಯಿ
ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ ಈಗಾಗಲೇ ಎರಡು ಬಾರಿ ಹಣಕಾಸಿನ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ಅಧಿವೇಶನ ಮುಗಿದ ಬಳಿಕ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.
Read More »ಜನವರಿ ಮೊದಲ ವಾರ ಸಂಪುಟ ವಿಸ್ತರಣೆ?; ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ತಪ್ಪಿಸುವ ತಂತ್ರ, ಭಿನ್ನರಾಗ ಬದಲಾಯಿಸಿದ ಅತೃಪ್ತರು
ಬೆಳಗಾವಿ: ಕಳಂಕಿತರಾಗಿಯೇ ಮುಂದಿನ ಚುನಾವಣೆ ಎದುರಿಸಲು ಸಿದ್ಧರಿಲ್ಲದವರ ಧ್ವನಿಗೆ ಬಿಜೆಪಿ ವರಿಷ್ಠರು ಓಗೊಟ್ಟಿದ್ದು, ಜನವರಿ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದಾರೆ. ಈ ಕುರಿತು ಸ್ಪಷ್ಟ ಸುಳಿವು ಲಭಿಸಿದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ದನಿಯಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಮೇಶ ಜಾರಕಿಹೊಳಿಗೂ ಭರವಸೆ ಸಿಕ್ಕಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆರೋಪಮುಕ್ತರಾಗಿರುವ ಕಾರಣ ಸಂಪುಟಕ್ಕೆ ಮತ್ತೆ ಸೇರಿಸಿಕೊಂಡು ಕಳಂಕದಿಂದ ಪಾರುಮಾಡಿ ಎನ್ನುವುದು ಈಶ್ವರಪ್ಪ ಹಾಗೂ ಜಾರಕಿಹೊಳಿ ವಾದವಾಗಿದೆ. ಎದುರಾಳಿಗಳ …
Read More »
Laxmi News 24×7