ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …
Read More »ಸೂರ್ಯಗ್ರಹಣ: ಹಲವೆಡೆ ದೇವರ ದರ್ಶನ ಬಂದ್
ಬೆಳಗಾವಿ: ಕೇತುಗ್ರಸ್ಥ ಖಂಡಗ್ರಾಸ (ಖಗ್ರಾಸ) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದ ಮೂರ್ತಿಗಳ ದರ್ಶನ ಬಂದ್ ಮಾಡಲಾಯಿತು. ದೀಪಾವಳಿ ಹಬ್ಬದ ಕಾರಣ ದೇವಸ್ಥಾನಗಳನ್ನು ಮುಚ್ಚಲಿಲ್ಲ. ಆದರೆ, ಮೂರ್ತಿಗಳ ಮೇಲೆ ಬಿಲ್ವಪತ್ರಿ, ಶಾಲುಗಳನ್ನು ಹೊದಿಸಿ ಮರೆ ಮಾಟಲಾಯಿತು. ಸಂಜೆ 4.30ಕ್ಕೆ ಸರಿಯಾಗಿ ಬೆಳಗಾವಿಯಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ ಎಂದು ಅರ್ಚಕರು ಮಾಹಿತಿ ನೀಡಿದರು. ಸೋಮವಾರವೇ ಹಲವು ದೇವಸ್ಥಾನಗಳಲ್ಲಿ ಗ್ರಹಣ ಮಾಹಿತಿ ಹಾಗೂ ದೋಷ ನಿವಾರಣಾ ವಿಧಾನಗಳ ಬಗ್ಗೆ ವಿವರ …
Read More »ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ
ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಹೌದು ಕಿತ್ತೂರು ಪಟ್ಟಣದ ಶಬ್ಬೀರ ಬೀಡಿ ಎಂಬುವವರಿಗೆ ಸೇರಿದ ಕುಶನ್ ಅಂಗಡಿಗೆ ನಿನ್ನೆ ತಡರಾತ್ರಿ ಬೆಂಕಿ ತಗುಲಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದೆ. ಅಂದಾಜು 3 ಲಕ್ಷ ಮೌಲ್ಯದ ಸಿದ್ಧಗೊಂಡಿದ್ದ ಕುಶನ್, ಪೀಠೋಪಕರಣ ಬೆಂಕಿಗಾಹುತಿಯಾಗಿವೆ. ಶಬ್ಬೀರ …
Read More »ಸ್ಥಾನ ಹೋದರೂ ಅಡ್ಡಿಯಿಲ್ಲ,ಕಿತ್ತೂರಿಗೆ ಎರಡು ಸಲ ಬಂದೆ: ಸಿಎಂ
ಬೆಳಗಾವಿ (ಚನ್ನಮ್ಮನ ಕಿತ್ತೂರು): ಮುಖ್ಯಮಂತ್ರಿ ಸ್ಥಾನ ಹೋದರೂ ಅಡ್ಡಿಯಿಲ್ಲ. ಕಿತ್ತೂರು ಚನ್ನಮ್ಮನ ಪವಿತ್ರ ಭೂಮಿಗೆ ಸತತ ಎರಡು ಸಲ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬ ಮೂಢನಂಬಿಕೆ ಇದೆ. ಸ್ಥಾನ ಕಳೆದುಕೊಳ್ಳುವ ಭಯ ದಿಂದ ಬಹಳಷ್ಟು ಮುಖ್ಯಮಂತ್ರಿಗಳು ಕಿತ್ತೂರಿಗೆ …
Read More »ಅಬಕಾರಿ ಅಧಿಕಾರಿಗಳ ಭರ್ಜರಿ ದಾಳಿ: 909 ಲೀಟರ್ ಗೋವಾ ಸಾರಾಯಿ ಜಪ್ತಿ
ಅಕ್ರಮವಾಗಿ ಗೂಡ್ಸ ಕ್ಯಾರಿಯರ್ನಲ್ಲಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಖಾನಾಪುರ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಸೋಮವಾರ ಮಧ್ಯರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಟಾಟಾ ಟರ್ಬೋ ಎಕ್ಸ-1109 ಗೂಡ್ಸ ಕ್ಯಾರಿಯರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 909 ಲೀಟರ್ ವಿವಿಧ ಕಂಪನಿಯ ಗೋವಾ ಸಾರಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ …
Read More »ಸುವರ್ಣಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ನಿಪ್ಪಾಣಿ ಹಾಗೂ ಗೋಕಾಕ್ ರೈತ ಮುಖಂಡರು ಪೊಲೀಸರ ವಶಕ್ಕೆ
ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ನಿಪ್ಪಾಣಿ ಹಾಗೂ ಗೋಕಾಕ್ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಕಬ್ಬಿನ ಬೆಲೆ ನಿಗದಿ ಪಡಿಸುವಂತೆ ಸಿಎಂ ಬೊಮ್ಮಾಯಿ ವಿರುದ್ಧ ಬೆಳಗಾವಿ ಜಿಲ್ಲೆಯ ರೈತರು ಸಮರ ಸಾರಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಅಹೋರಾತ್ರಿ ಧರಣಿ ಆರಂಭವಾಗಿದೆ. ಮತ್ತೊಂದು …
Read More »ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿ
ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿಯಾದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹೌದು,,, ಚಿನ್ನದ ಆಶೆಗಾಗಿ ತಂಗಿಯ ಮಗ ಮಾಲತೇಶ 70 ವರ್ಷದ ದೊಡ್ಡಮ್ಮ ಕಮಲಮ್ಮನ್ನ ಕೊಲೆ ಮಾಡಿ ಮಗ ಮಾಲತೇಶ್ ಎಸ್ಕೇಪ್ ಆಗಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ಕಮಲಮ್ಮನ ಮನೆಗೆ ಬಂದಿದ್ದ ಮಾಲತೇಶ, ಮಲಗಿದಲ್ಲೇ ಕಮಲಮ್ಮನ ಕಿವಿ ಕಟ್ ಮಾಡಿ ಕಿವಿಯೋಲೆ, ಕೊರಳಲ್ಲಿರೊ ಸರವನ್ನು ದೋಚಿ ಪರಾರಿಯಾಗಿದ್ದಾನೆ. ಇನ್ನುಮನೆಯಲ್ಲಿ ಒಬ್ಬಳೇ ಇರುತ್ತಿದ್ದ ಕಮಲಮ್ಮ …
Read More »ಪ್ರಭಾವಿ ನಾಯಕರ ಅಗಲಿಕೆ, ಚುನಾವಣಾ ವರ್ಷದಲ್ಲಿ ಬೆಳಗಾವಿ ಬಿಜೆಪಿಗೆ ಆಘಾತ
ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಬೆಳಗಾವಿ ಮೂಲದ ಮೂವರು ಪ್ರಭಾವಿ ಭಾಜಪ ನಾಯಕರು ವಿಧಿವಶರಾಗಿದ್ದು, (Anand Mamani) ಈ ಭಾಗದದಲ್ಲಿ ಬಿಜೆಪಿಗೆ ಆಘಾತವಾದಂತಾಗಿದೆ. ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಿದ್ದ ಮೂವರು ನಾಯಕರು ದಿಢೀರ್ ಅಗಲಿದ್ದಾರೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ, ಅರಣ್ಯ ಸಚಿವ ಉಮೇಶ್ ಕತ್ತಿ ಬಳಿಕ ಈಗ ಆನಂದ ಮಾಮನಿ ಸಾವಿಗೀಡಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಸುರೇಶ ಅಂಗಡಿ ಚಿಕಿತ್ಸೆ ಫಲಿಸದೇ ಏಮ್ಸ್ನಲ್ಲಿ ಕೊನೆಯುಸಿರೆಳೆದಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಬೆಂಗಳೂರು …
Read More »ಬೆಳಗಾವಿಯ ಶಿವಾಜಿ ನಗರದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ
ಬೆಳಗಾವಿಯ ಶಿವಾಜಿ ನಗರದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಇದೇ ಅಕ್ಟೋಬರ್ 19ರಂದು ಬೆಳಗಾವಿಯ ಶಿವಾಜಿ ನಗರದ 5ನೇ ಕ್ರಾಸ್ನ ಪ್ರಜ್ವಲ್ ಶಿವಾನಂದ ಕರಿಗಾರ ಎಂಬ 16 ವರ್ಷದ ಬಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿ ಶವವನ್ನು ಮುಚ್ಚಂಡಿ ಗ್ರಾಮದ ಬಳಿ ಹಂತಕರು ಎಸೆದು ಹೋಗಿದ್ದರು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ …
Read More »ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ
ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …
Read More »
Laxmi News 24×7