Breaking News

ಬೆಳಗಾವಿ

ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ …

Read More »

ಬೆಳಗಾವಿ: ಕೊಗನೊಳ್ಳಿ ಆರ್‌ಟಿಒ ಚೆಕ್​​ ಪೋಸ್ಟ್ ಮೇಲೆ‌ ಲೋಕಾಯುಕ್ತರ ದಾಳಿ

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೋಗನೊಳ್ಳಿ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗಿನಜಾವ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ. ಹಣ  ವಸೂಲಿ ಆರೋಪ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿಸುವ ಪ್ರಮುಖ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ರಸ್ತೆ ಪಕ್ಕದಲ್ಲಿರುವ ಆರ್​ಟಿಒ ಚೆಕ್ ಪೋಸ್ಟ್ ಮೂಲಕವೇ ಸಾವಿರಾರು …

Read More »

ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್

ಬೆಳಗಾವಿ: ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್; ಹೆಂಡತಿ, ಮಗಳೇ ಹಂತಕರು  ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಸುಧೀರ ಕಾಂಬಳೆ ಎಂಬುವವರನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಮೃತ ಸುಧೀರ್ ಪತ್ನಿ ರೋಹಿಣಿ ಸುಧೀರ ಕಾಂಬಳೆ, ಪುತ್ರಿ ಸ್ನೇಹಾ ಹಾಗೂ ರೋಹಿಣಿಯ ಸ್ನೇಹಿತ ಅಕ್ಷಯ ಮಹಾದೇವ ವಿಠಕರ ಬಂಧಿತರು.  ಸೆಪ್ಟಂಬರ್ 16 ಹಾಗೂ 17ರ ನಡುವಿನ ಅವಧಿಯಲ್ಲಿ ಕ್ಯಾಂಪ್ ನ ಮದ್ರಾಸ್ …

Read More »

ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್​ಕುಮಾರ್

ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ‌‌ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್​​ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು …

Read More »

ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …

Read More »

ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್​

ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …

Read More »

ಪಿಎಸ್‌ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!

ಬೆಂಗಳೂರು, ಸೆ.28. ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್‌ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …

Read More »

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ. ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ …

Read More »

ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!

ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.   ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …

Read More »