Breaking News

ಬೆಳಗಾವಿ

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.   ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು. ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು. ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ. ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ …

Read More »

ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ

ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋ‍ಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಾವಾನಸೌದತ್ತಿ ನಿವಾಸಿ ಖಾಜಾಸಾಬ್‌ ಬಾಬಾಸಾಬ್‌ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ. ಕಬ್ಬಿಣದ ರಾಡ್‌ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆ ಕೈಗೊಂಡ ರಾಯಬಾಗ …

Read More »

ಯಲ್ಲಮ್ಮನ ‌ಗುಡ್ಡದ ಶ್ರೀ ರೇಣುಕಾದೇವಿ ದೇಗುಲಕ್ಕೆ ಸಿಎಂ ಪತ್ನಿ ಚನ್ನಮ್ಮ ಬೊಮ್ಮಾಯಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ನವರಾತ್ರಿ ನಿಮಿತ್ತ ಮನೆ ದೇವತೆ ಸವದತ್ತಿ ಶ್ರೀ ರೇಣುಕಾ ದೇವಿಯ ದರ್ಶನ ಪಡೆದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಘಟ್ಟಕ್ಕೆ ಎಣ್ಣೆ ಸಮರ್ಪಿಸಿದರು. ಬಳಿಕ ಭಕ್ತಿ ಭಾವದಿಂದ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರೇಣುಕಾದೇವಿ ಯಲ್ಲಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ದೇವತೆ. ಹಾಗಾಗಿ ಹುಬ್ಬಳ್ಳಿಯಿಂದ ಖಾಸಗಿ ವಾಹನದಲ್ಲಿ ಬಂದು ಚನ್ನಮ್ಮ ಬೊಮ್ಮಾಯಿ ದೇವಿ ದರ್ಶನ ಪಡೆದರು. ಈ …

Read More »

ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ …

Read More »

ಬೆಳಗಾವಿ: ಕೊಗನೊಳ್ಳಿ ಆರ್‌ಟಿಒ ಚೆಕ್​​ ಪೋಸ್ಟ್ ಮೇಲೆ‌ ಲೋಕಾಯುಕ್ತರ ದಾಳಿ

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೋಗನೊಳ್ಳಿ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗಿನಜಾವ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ. ಹಣ  ವಸೂಲಿ ಆರೋಪ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿಸುವ ಪ್ರಮುಖ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ರಸ್ತೆ ಪಕ್ಕದಲ್ಲಿರುವ ಆರ್​ಟಿಒ ಚೆಕ್ ಪೋಸ್ಟ್ ಮೂಲಕವೇ ಸಾವಿರಾರು …

Read More »

ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್

ಬೆಳಗಾವಿ: ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್; ಹೆಂಡತಿ, ಮಗಳೇ ಹಂತಕರು  ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಸುಧೀರ ಕಾಂಬಳೆ ಎಂಬುವವರನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಮೃತ ಸುಧೀರ್ ಪತ್ನಿ ರೋಹಿಣಿ ಸುಧೀರ ಕಾಂಬಳೆ, ಪುತ್ರಿ ಸ್ನೇಹಾ ಹಾಗೂ ರೋಹಿಣಿಯ ಸ್ನೇಹಿತ ಅಕ್ಷಯ ಮಹಾದೇವ ವಿಠಕರ ಬಂಧಿತರು.  ಸೆಪ್ಟಂಬರ್ 16 ಹಾಗೂ 17ರ ನಡುವಿನ ಅವಧಿಯಲ್ಲಿ ಕ್ಯಾಂಪ್ ನ ಮದ್ರಾಸ್ …

Read More »

ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್​ಕುಮಾರ್

ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ‌‌ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್​​ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು …

Read More »

ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …

Read More »