ಸವದತ್ತಿ: ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಿದೆ. ಮೊದಲ ದಿನವಾದ ಸೋಮವಾರದಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಹರಿದುಬಂದರು. ಘಟಸ್ಥಾಪನೆಯ ಮೂಲಕ ನವವೈಭವಕ್ಕೆ ವಿಧ್ಯುಕ್ತ ಚಾಲನೆಯೂ ದೊರೆಯಿತು. ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಅವಮಾಸ್ಯೆ ನಂತರದ ಮೊದಲ ದಿನ ಸೋಮವಾರ ಸಂಜೆ 4.30 ರಿಂದ 6.30 ಒಳಗಾಗಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮೂಲಕ ಘಟಸ್ಥಾಪನೆ ಜರುಗಿತು. …
Read More »ನಾಡಹಬ್ಬ ಉತ್ಸವಕ್ಕೆ ಬೆಳಗಾವಿಯಲ್ಲಿ ಅದ್ಧೂರಿ ಚಾಲನೆ
ಬೆಳಗಾವಿಯಲ್ಲಿ 95ನೇ ನಾಡಹಬ್ಬ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು. ಇಂದಿನಿಂದ ಐದು ದಿನಗಳ ಕಾಲ ವಿವಿಧ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಎಂ.ಎಸ್.ಮುಗಳಿ ವೇದಿಕೆಯಲ್ಲಿ ಹಮ್ಮಿಕೊಂಡಿರುವ 95ನೇ ನಾಡಹಬ್ಬ ಉತ್ಸವ ಕಾರ್ಯಕ್ರಮದ ಮೊದಲ ದಿನದ ಕಾರ್ಯಕ್ರಮಕ್ಕೆ ನಾಗನೂರು ರುದ್ರಾಕ್ಷಿ ಮಠದ ಪರಮಪೂಜ್ಯ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ನಂತರ ಧಾರವಾಡದ ಖ್ಯಾತ ಸಾಹಿತಿ ಡಾ.ಬಾಳಣ್ಣ ಶೀಗಿಹಳ್ಳಿ ಅವರು …
Read More »ಟಿಕ್ಟಾಕ್, ಯೂಟೂಬ್ ಸ್ಟಾರ್ ರುಕ್ಮವ್ವ ಅಜ್ಜಿ ಇನ್ನಿಲ್ಲ
ತಮ್ಮ ಅಮೋಘ ಅಭಿನಯದ ಮೂಲಕ ಟಿಕ್ಟಾಕ್ ಮತ್ತು ಯೂಟೂಬ್ ಸ್ಟಾರ್ ಆಗಿ ಮನೆ ಮಾತಾಗಿದ್ದ ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಅಜ್ಜಿ ರುಕ್ಮವ್ವ ಗೋವಿಂದಪ್ಪ ಲೋಕರಿ ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಹೌದು ಟಿಕ್ಟಾಕ್ನಲ್ಲಿ ತಮ್ಮ ವಿಭಿನ್ನ ಕಾಮಿಡಿ ವಿಡಿಯೋ ಮೂಲಕ ಈ ರುಕ್ಮವ್ವ ಅಜ್ಜಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಅಲ್ಲದೇ ಹಲವು ವಾಹಿನಿಗಳ ಕಾಮಿಡಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಇಳಿ ವಯಸ್ಸಿಲ್ಲಿಯೂ ತಮ್ಮಲ್ಲಿನ ಕಲೆಯನ್ನು …
Read More »ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಣೆ
ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಪೌರಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಿಳೆಯರ ಆಯೋಜಿಸಲಾಗಿತ್ತು. ವಾರ್ಡ್ ನಂ.25ರ ಸಫಾಯಿ ಕರ್ಮಚಾರಿ ಲಕ್ಷ್ಮೀ ಭಾಗಣ್ಣ ತಳವಾರ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಜೇತರಾದರು. ವಿಜೇತ ಲಕ್ಷ್ಮೀ ಅವರಿಗೆ ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಬಹುಮಾನ ವಿತರಿಸಿದರು. ಇದೇ ವೇಳೆ ಸಿಹಿತಿಂಡಿಗಳನ್ನು ಸಹ ವಿತರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಶ್ರವಣ್ ಕಾಂಬ್ಳೆ, ಸೂಪರ್ವೈಸರ್ ಸಂಜಯ್ ಮೋರೆ, ಸೂಪರ್ವೈಸರ್ ಲಕ್ಷ್ಮಣ ರಾಥೋಡ್, …
Read More »ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟ
ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲಿಂಡರ್ ಸ್ಫೋಟವಾಗಿ ಬಿಸಿಯೂಟದ ಆಹಾರ ಧಾನ್ಯ ಮುಂತಾದ ಪರಿಕರಗಳು ಸುಟ್ಟು ಕರಕಲಾಗಿರುವ ಘಟನೆ ಗೋಕಾಕ್ನ ವಿವೇಕಾನಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದದಿಂದ ಗೋಕಾಕ್ನ ವಿವೇಕಾನಂದ ನಗರದಲ್ಲಿ ಸ್ಥಳಾಂತರಗೊಂಡಿರುವ ಡಾ..ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೌದು ಅಡುಗೆ ಮಾಡುತ್ತಿರುವಾಗ ಸಿಲಿಂಡರ್ನಿಂದ ಭಾರಿ ಶಬ್ದ ಕೇಳಿ ಬಂದಿದೆ. ತಕ್ಷಣವೇ ಅಡುಗೆ ಮಾಡುವವರು ಹೆದರಿ ಹೊರಗೆ ಓಡಿ …
Read More »ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ
ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »9 ದಿನ ಚಪ್ಪಲಿಗೆ ಗೂಡ್ ಬೈ ಹೇಳಿದ ಅಂಜಲಿ ನಿಂಬಾಳ್ಕರ್..!
ಖಾನಾಪೂರ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ನವರಾತ್ರಿ ನಿಮಿತ್ಯ ಆದಿಶಕ್ತಿಯನ್ನು ಜಪಿಸಲು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಂದಿನಿಂದ 9 ಉಪವಾಸ ವೃತ ಕೈಗೊಂಡು, ಕಾಲಿನಲ್ಲಿ ಚಪ್ಪಲಿ ಧರಿಸದೇ ತಮ್ಮ ವೃತವನ್ನು ಆರಂಭಿಸಿದ್ದಾರೆ. ನವರಾತ್ರಿಯ 9 ದಿನ ಆದಿಶಕ್ತಿ, ಜಗನ್ಮಾತೆಯನ್ನು ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದ್ರೆ ದೇವಿ ಬೇಡಿದ್ದನ್ನು ಕೊಡುತ್ತಾಳೆ ಎಂಬ ನಂಬಿಕೆಯಿದೆ. ಹೀಗಾಗಿ ಖಾನಾಪೂರ ತಾಲೂಕಿನ ಜನತೆಯ ಶಾಂತಿ ನೆಮ್ಮದಿ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು …
Read More »ಮಾರ್ಕಂಡೇಯ ಡ್ಯಾಮ್ಗೆ ಹೋಯ್ತು ಭೂಮಿ: ಈಗ ಊರು ಇಲ್ಲದೇ ಅತಂತ್ರ ಸ್ಥಿತಿಯಲ್ಲಿ ಪಣಗುತ್ತಿ ಸಂತ್ರಸ್ತರು..!
ಇವರೆಲ್ಲಾ ಮಾರ್ಕಂಡೇಯ ಡ್ಯಾಮ್ ಕಟ್ಟಲು ತಮ್ಮ ಇದ್ದ ಭೂಮಿಯನ್ನೇ ಬಿಟ್ಟು ಕೊಟ್ಟವರು. ಆದರೆ ಇಂದು ಸರಿಯಾದ ಸೂರು ಇಲ್ಲದೇ, ಊರು ಇಲ್ಲದೇ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಸಂತ್ರಸ್ತರು ಪುನರ್ವಸತಿ ಕಲ್ಪಿಸಿ ತಮ್ಮ ಗ್ರಾಮವನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಹೋರಾಟದ ಹಾದಿ ಹಿಡಿದಿದ್ದಾರೆ. ಮಾರ್ಕಂಡೇಯ ನದಿಯ ಹಿನ್ನಿರಿನಲ್ಲಿ 2002ರಲ್ಲಿ ಮುಳುಗಡೆ ಆಗಿರುವ ಬೆಳಗಾವಿ ತಾಲೂಕಿನ ಪಣಗುತ್ತಿ ಗ್ರಾಮದ ಜನರು ಅಂದು ಭೂಮಿ ಕಳೆದುಕೊಂಡಿದ್ದರು. ಇದೀಗ ಇಲ್ಲಿನ ಸಂತ್ರಸ್ತರು ಹೆಚ್ಚಿನ ಪ್ರಮಾಣದಲ್ಲಿ …
Read More »ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಗೆ “ಉಪಾಂತ್ಯ’ ಎಂದೇ ಪರಿಗಣಿಸಲಾಗಿದ್ದ ತಾ.ಪಂ.- ಜಿ.ಪಂ. ಚುನಾ ವಣೆ ಗಳು 2023ರ ಮೇ ಒಳಗೆ ನಡೆಯವುದಕ್ಕೆ ಸಾಧ್ಯವೇ ಇಲ್ಲ. ರಾಜ್ಯ ಸರಕಾರದಲ್ಲಿನ ಈಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಿಧಾನಸಭೆ ಚುನಾವಣೆ ಬಳಿಕವಷ್ಟೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿವೆ. ಒಂದು ಕಡೆ ಕ್ಷೇತ್ರಗಳ ಗಡಿ ನಿಗದಿಗೆ ಸೀಮಾ ನಿರ್ಣಯ ಆಯೋಗ ಇನ್ನೂ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಇನ್ನೊಂದಡೆ ಕ್ಷೇತ್ರಗಳು ನಿಗದಿಯಾದ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ …
Read More »ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ
ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …
Read More »
Laxmi News 24×7