ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …
Read More »ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್!
ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು. 280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …
Read More »ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.
ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …
Read More »ಬೆಳಗಾವಿ| ವರ್ಷ ಮುಗಿದರೂ ಪಾಲಿಕೆಗೆ ಬಿಡದ ಗ್ರಹಣ: ಅಧಿಕಾರ ಸ್ವೀಕರಿಸದ ಚುನಾಯಿತರು
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಮುಗಿದು ವರ್ಷ ಕಳೆದರೂ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಕೂಡಿಬಂದಿಲ್ಲ. ಇದೇ ಮೊದಲಬಾರಿಗೆ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆದಿದ್ದರಿಂದ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ವರ್ಷದ ಬಳಿಕವೂ ಅಧಿಕಾರ ಕೈಗೆ ಸಿಗದ ಕಾರಣ ಹೊಸ ಸದಸ್ಯರು ಇದ್ದೂ ಇಲ್ಲದಂತಾಗಿದೆ. ತಾವು ಪ್ರತಿನಿಧಿಸುವ ವಾರ್ಡ್ನ ಜನರು ಒಂದಿಲ್ಲೊಂದು ಸಮಸ್ಯೆ ಹೊತ್ತು ಮನೆಬಾಗಿಲಿಗೆ ಬರುತ್ತಲೇ ಇದ್ದಾರೆ. ಆದರೆ, ಅವುಗಳನ್ನು ಬಗೆಹರಿಸಲು …
Read More »ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಆರೋಗ್ಯ ವಿಚಾರಿಸಿದ್ದಾರೆ.
ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ(Anand Mamani) ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ(Manipal Hospital) ಆನಂದ ಮಾಮನಿ ಅವರನ್ನು ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ …
Read More »ಬೆಳಗಾವಿಯಲ್ಲಿ ಮಹಿಳೆಯರಿಂದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆ
ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಮಾಡದ ಹಿನ್ನೆಲೆ ರಾಮದುರ್ಗ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯರ ತರಾಟೆ ತೆಗೆದುಕೊಂಡ ಹಿನ್ನೆಲೆ ಶಾಸಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ನಾಲ್ಕು ದಶಕ ಕಳೆದರೂ ರಸ್ತೆ ಅಭಿವೃದ್ಧಿಗೊಂಡಿಲ್ಲ. ಇದರಿಂದ ಕೊಚ್ಚಿಗೆದ್ದ ಮಹಿಳೆಯರು ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆಗೆ ತೆಗೆದುಕೊಂಡರು. ಈ ಘಟನೆ ರಾಮದುರ್ಗ ತಾಲೂಕಿನ ಚಿಕೊಪ್ಪ ಕೆಎಸ್ ಗ್ರಾಮದಲ್ಲಿ ನಡೆದಿದೆ. …
Read More »ಡಾ.ಪ್ರಭಾಕರ ಕೋರೆಯವರಿಗೆ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ
ಬೆಳಗಾವಿ: 75ನೇ ಜನ್ಮದಿನದ ಅಂಗವಾಗಿ ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಮಹಾರಾಷ್ಟ್ರದ ಬಾರ್ಸಿಯಲ್ಲಿರುವ ಕೆಎಲ್ಇ ಸಿಲ್ವರ್ ಜ್ಯೂಬ್ಲಿ ಹೈಸ್ಕೂಲಿನಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ ನೆರವೇರಿಸಲಾಯಿತು. ಸಮಾರಂಭದಲ್ಲಿ ತುಲಾಭಾರ ಸ್ವೀಕರಿಸಿ ಮಾತನಾಡಿದ ಡಾ.ಪ್ರಭಾಕರ ಕೋರೆ, ಹಿತೈಷಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು. ಹಿರಿಯರ ಪುಣ್ಯದ ಫಲವಾಗಿ ನಾನು ಜೀವನದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಯಿತು. ಕೆಎಲ್ಇ ಸಪ್ತರ್ಷಿಗಳ ಕನಸುಗಳಿಗೆ ಪಥವಾಗಿ ಮುನ್ನಡೆಯಲು ನನಗೆ ಎಲ್ಲರೂ ಜೊತೆಯಾಗಿದ್ದಾರೆ. ಒಬ್ಬ ವ್ಯಕ್ತಿ ಸಾಧನೆಯನ್ನು …
Read More »ಭಜನೆ , ಪೂಜೆ, ಮಾಡೋದು ಬಿಟ್ಟು ಬೇರೆ ಏನೂ ಗೊತ್ತಿಲ್ಲ ಬಿಜೆಪಿ ಅವರಿಗೆ: ಸತೀಶ ಜಾರಕಿಹೊಳಿ ಲೇವಡಿ
ಪೂಜೆ, ಭಜನೆ ಮಾಡುವುದು ಬಿಟ್ಟು ಬೇರೆ ಹೆಚ್ಚಿಗೆ ಏನೂ ಬಿಜೆಪಿ ಅವರಿಗೆ ಗೊತ್ತಿಲ್ಲ. ದೇಶದ ಇತಿಹಾಸವನ್ನು ಮೊದಲು ಇವರು ತಿಳಿದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಇಂಡಿಯಾ ಪಾಕಿಸ್ತಾನ ಇಬ್ಬಾಗ ಮಾಡಿದ್ದ ಕಾಂಗ್ರೆಸ್ನವರು ಇದೀಗ ಭಾರತ್ ಜೋಡೋ ಮಾಡ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ಅದು ಕಾಂಗ್ರೆಸ್ ಮಾಡಿದ್ದಲ್ಲ, ಬ್ರಿಟಿಷರೇ ಮಾಡಿದ್ದು. ಈ ಇತಿಹಾಸ ಅವರಿಗೆ ಗೊತ್ತಿಲ್ಲ. …
Read More »ಪತಿ ಜತೆ ಆಟೋದಲ್ಲಿ ಬಂದವಳು, ಗಂಡ ಬಾಡಿಗೆ ಕೊಡಲು ಚಿಲ್ಲರೆ ತರುವಷ್ಟರಲ್ಲಿ ಮಗನೊಂದಿಗೆ ನಾಪತ್ತೆ!; ಆಗಿದ್ದೇನು?
ಬೆಳಗಾವಿ: ಆಟೋದಲ್ಲಿ ಪತಿ ಜತೆಗೇ ಬಂದಿದ್ದ ಪತ್ನಿ, ಬಳಿಕ ಬಾಡಿಗೆ ಹಣ ಕೊಡಲು ಗಂಡ ಚಿಲ್ಲರೆ ತರಲು ಹೋಗಿ ಬರುವಷ್ಟರಲ್ಲಿ ಆಕೆ ಮಗನೊಂದಿಗೆ ಕಣ್ಮರೆಯಾಗಿದ್ದಾಳೆ. ಇಂಥದ್ದೊಂದು ಪ್ರಕರಣ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಈ ಪ್ರಕರಣ ನಡೆದಿದ್ದು, ರುದ್ರವ್ವ ಬಸವರಾಜ್ ಬನ್ನೂರು (30) ಮತ್ತು ಆಕೆಯ ಪುತ್ರ ಶಿವಲಿಂಗಪ್ಪ ಬನ್ನೂರ (2) ನಾಪತ್ತೆಯಾದವರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರುದ್ರವ್ವ ತನ್ನ ಎರಡು ವರ್ಷದ ಪುತ್ರನ ಜೊತೆಗೆ ಇಡಗುಂಡಿಯಲ್ಲಿನ …
Read More »ಸ್ಪಂದನ ಸೂಪರ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ
ಇಂದು ದಿನಾಂಕ 17/09/2022 ರಂದು ಜ್ಯೋತಿ ನಗರ, ಗಣೇಶಪೂರ ಬೆಳಗಾವಿ, ಇಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಹಾಗೂ ಸ್ಪಂದನ ಸುಪರ ಸ್ಪೆಶಾಲಿಸ್ಟ ಹಾಸ್ಪಿಟಲ್ ವತಿಯಿಂದ್ ಉಚಿತ್ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ. ಗೋವಿಂದ ಕಾರ್ಜೋಳ ಇವರ ಅಮೃತ ಹಸ್ತದಿಂದ ನೆರೆವೆರಿತು. ಕಾರ್ಯಕ್ರಮದಲ್ಲಿ ಬೆಳಗಾವಿಯ ಸಂಸದರಾದ ಶ್ರೀಮತಿ. …
Read More »
Laxmi News 24×7