Breaking News

ಬೆಳಗಾವಿ

ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆ ಬಗ್ಗೆ ಹೀಗಿದೆ ಪತ್ನಿ ವೀಣಾ ಕಾಶಪ್ಪನವರ್ ಪ್ರತಿಕ್ರಿಯೆ

ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿ ವೀಣಾ ಕಾಶಪ್ಪನವರ್ ಪ್ರತಿಕ್ರಿಯೆ ನೀಡಿದ್ದಾರೆ. ಹುನಗುಂದ ಕ್ಷೇತ್ರದಲ್ಲಿ ವೈಯಕ್ತಿಕ ವಿಚಾರ ಹರಿದಾಡುತ್ತಿದೆ. ನಾನು ಆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ. ಸಂಪೂರ್ಣ ಮಾಹಿತಿ ಕಲೆ ಹಾಕಿದ ಮೇಲೆ ಸುದ್ದಿಗೋಷ್ಠಿ ನಡೆಸುತ್ತೇನೆ. ಇದರ ಬಗ್ಗೆ ಸಂಬಂಧಿಸಿದವರನ್ನೇ ಕೇಳಬೇಕು ಎಂದು ಹೇಳಿದ್ದಾರೆ. ವಿಜಯಾನಂದ ಕಾಶಪ್ಪನವರ್ ಹೆಸರು ಪ್ರಸ್ತಾಪಿಸದೆ ಪ್ರತಿಕ್ರಿಯೆ ನೀಡಿ, ಮಾಧ್ಯಮದಲ್ಲಿ ಮಗುವಿನ ಬರ್ತ್ ಸರ್ಟಿಫಿಕೇಟ್ ತೋರಿಸಲಾಗಿದೆ. ಮಾಧ್ಯಮದಲ್ಲಿ …

Read More »

ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ. ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ …

Read More »

ಗಣೇಶ್ ವಿಸರ್ಜನೆ ವೇಳೆ ಡಾಲ್ಬಿ ಗೆ ಪರ್ಮಿಷನ್ ಈ ಸಲಾ ಗಣೇಶ್ ಹಬ್ಬ ಫುಲ್ ಜೋರು

ಬೆಳಗಾವಿಯಲ್ಲಿ ಪರಂಪರಾಗತ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿಯಮಗಳನ್ನು ಪಾಲಿಸಿ ಡಾಲ್ಬಿ ಬಳಕೆಗೆ ಅಧಿಕಾರಿಗಳು ಹಾಗೂ ಮಂತ್ರಿಗಳೊಂದಿಗೆ ಚರ್ಚಿಸಿ ಅನುಮತಿಯನ್ನು ನೀಡಲಾಗಿದೆ. ಹಾಗಾಗಿ ಎಲ್ಲಾ ಗಣೇಶ ಮಂಡಳದವರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ ಡಾಲ್ಬಿ ಬಳಕೆ ಮಾಡಬೇಕೆಂದು ಶಾಸಕ ಅಭಯ್ ಪಾಟೀಲ್ ಮನವಿ ಮಾಡಿದ್ದಾರೆ. ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ ೯ ರಂದು ಅಂತಿಮವಾಗಿ ಗಣೇಶೋತ್ಸವ ವಿಸರ್ಜನೆ ಮಾಡುವ ಹಿನ್ನೆಲೆಯಲ್ಲಿ ಅಲ್ಲಿ ಮಾಡಿಕೊಳ್ಳಬೇಕಾದ ಅಗತ್ಯ ಸಿದ್ದತೆಗಳನ್ನು ಕುರಿತಂತೆ ಲೋಕಮಾನ್ಯ ಗಣೇಶ …

Read More »

ಬೆಳಗಾವಿಯ 22 ಶಾಲೆಗಳು ಆರಂಭ: ಡಿಡಿಪಿಐ ಬಸವರಾಜ ನಾಲತವಾಡ

ಚಿರತೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ನಾಲತವಾಡ ಅವರು ತಿಳಿಸಿದ್ದಾರೆ. ನಗರದಲ್ಲಿ ಚಿರತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಶಾಲೆಗಳನ್ನು ಪುನರ್ ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಸೋಮವಾರದಿಂದ ಕಾರ್ಯನಿರ್ವಹಿಸಲಿವೆ. ಪಾಲಕರು ಹಾಗೂ ಶಾಲೆಗಳು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಎಚ್ಚರಿಕೆ …

Read More »

ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ.  ಶಾಲಾ ವಾಹನಗಳ ಚಾಲಕರು …

Read More »

ಗಣೇಶನ ಜೊತೆಗೆ ಗಾಲ್ಫ್ ಮೈದಾನದ ಚಿರತೆಗೂ ನಿತ್ಯ ಪೂಜೆ

ಬೆಳಗಾವಿ: ಕಳೆದ 1 ತಿಂಗಳಿನಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿ ಕುಳಿತುಕೊಂಡಿರುವ ಚಾಣಾಕ್ಷ ಚಿರತೆ ಇನ್ನೂ ಸೆರೆಯಾಗಿಲ್ಲ. ಆದರೆ ಕುಂದಾ ನಗರಿ ಜನರು ಮಾತ್ರ ಗಣೇಶನ ಜೊತೆಗೆ ಚಿರತೆಗೂ ದಿನನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು, ಇಲ್ಲಿನ ವಿಶ್ವೇಶ್ವರಯ್ಯ ನಗರದ ಮನೆಯೊಂದರಲ್ಲಿ ಗಣೇಶನ ಮೂರ್ತಿ ಜೊತೆಗೆ ಚಿರತೆಯ ಗೊಂಬೆಯನ್ನು ಇಟ್ಟು ಪೂಜೆ ಸಲ್ಲಿಸಲಾಗುತ್ತಿದೆ. ಕಳೆದೊಂದು ತಿಂಗಳ ಹಿಂದೆ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನ ಸೇರಿದ ಚಿರತೆ …

Read More »

ಆಪರೇಶನ್ ಚೀತಾಗೆ ಬರೋಬ್ಬರಿ 50 ಲಕ್ಷಕ್ಕೂ ಅಧಿಕ ಹಣ ಖರ್ಚಾಗಿದ್ದು ಕಾರ್ಯಾಚರಣೆ ಮಾತ್ರ ವಿಫಲ ,ಸಾರ್ವಜನಿಕರ ಆಕ್ರೋಶ

ಕಳೆದ 1 ತಿಂಗಳಿನಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಆಪರೇಷನ್ ಚೀತಾ ಕೊನೆಗೂ ಫೇಲ್ ಆಗಿದೆ. ಇಂದು 30ನೇ ದಿನದ ಕಾರ್ಯಾಚರಣೆ ನಡೆದಿದ್ದು. ಕೊನೆಯ ದಿನ ಕಾರ್ಯಾಚರಣೆ ಎಂಬ ನಿಟ್ಟಿನಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಭರ್ಜರಿ ಕೋಂಬಿಂಗ್ ನಡೆದರೂ ಚಿರತೆ ಮಾತ್ರ ಪತ್ತೆಯಾಗಿಲ್ಲ. ಹೌದು ಕುಂದಾನಗರಿ ಬೆಳಗಾವಿಯಲ್ಲಿ ಚಾಲಾಕಿ ಚಿರತೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಕಳೆದ ಅಗಷ್ಟ 5ರಂದು ಪ್ರತ್ಯಕ್ಷವಾಗಿದ್ದ ಚಿರತೆ ಇಡೀ ಬೆಳಗಾವಿ ಜನತೆಯ ನಿದ್ದೆಗೆಡಿಸಿದೆ.   30 ದಿನಗಳಿಂದ …

Read More »

ರಾಯಬಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ಹದಿನೈದು ಕುರಿಗಳು ಸ್ಥಳದಲ್ಲೇ ಸಾವು…!

ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ …

Read More »

ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು

  ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ   ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …

Read More »

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ …

Read More »