ಬೆಂಗಳೂರು : ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಬುಧವಾರ ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ. ಪತ್ರಕರರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡುವ ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು. ಅದಕ್ಕಿರುವ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. …
Read More »ಗಣೇಶೋತ್ಸವ ಆಚರಣೆ ವೇಳೆ ಯಾವುದೇ ಅಡೆತಡೆಗಳಾಗದಂತೆ ಕ್ರಮ ವಹಿಸುತ್ತೇವೆ-ಡಾ. ಎಂಬಿ ಬೊರಲಿಂಗಯ್ಯ
ಬೆಳಗಾವಿ ನಗರದಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಯಾವುದೇ ತೊಂದರೆಗಳಾಗದ ನಿಟ್ಟಿನಲ್ಲಿ ಆಚರಣೆ ಮಾಡುವ ಹಿನ್ನೆಲೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿ ಗಣೇಶೋತ್ಸವ ಯಶಸ್ವಿಗಾಗಿ ಕಾರ್ಯ ನಿರ್ವಹಿಸಬೇಕೆಂದು ನಗರಪೊಲೀಸ್ ಆಯುಕ್ತರಾದ ಡಾ. ಎಂಬಿ ಬೊರಲಿಂಗಯ್ಯ ಹೇಳಿದರು. ಬೆಳಗಾವಿನಗರದ ಸಮಾದೇವಿ ಮಂದಿರದ ಹಾಲ್ನಲ್ಲಿ ನಡೆದ ಗಣೇಶೋತ್ಸವ ಹಿನ್ನೆಲೆ ಕರೆನೀಡಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಯಾವುದೇ ರೀತಿಯ ಅಡೆತಡೆಗಳಾಗದಂತೆ, ಅಹಿತಕರ …
Read More »ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ
ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್ನ್ನು …
Read More »ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ
ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ. ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.
Read More »ಬೆಳಿಗ್ಗೆ ಯಿಂದ ಹುಡುಕಿದರೂ ಸಿಗದ ಚಿರತೆ..
ಬೆಳಗಾವಿ: ಇಲ್ಲಿನ ಗಾಲ್ಫ್ ಮೈದಾನಕ್ಕೆ ನುಗ್ಗಿದ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಕ್ರೇಬೈಲ್ ಶಿಬಿರದಿಂದ ನಗರ ತಲುಪಿರುವ ಅರ್ಜುನ(20) ಮತ್ತು ಆಲೆ(14) ಬೆಳಗ್ಗೆ ವಿಶ್ರಾಂತಿ ಪಡೆದವು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರ್ಯಾಚರಣೆ ಆರಂಭವಾಯಿತು. ಮೈದಾನದ ಸುತ್ತಲೂ ಬಲೆ ಅಳವಡಿಸಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಕ್ರಮ ವಹಿಸಲಾಗಿದೆ. ಆ.5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಚಿರತೆ …
Read More »ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು
ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ …
Read More »ರಾಜ್ಯದ ವಿವಿಧೆಡೆ ಎರಡು ದಿನ ಮಳೆ
ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …
Read More »10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, 2016 ರಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟಪಡಿಸಿದ್ದು, ಈ ಕುರಿತು …
Read More »ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ.
ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ. ಇನ್ನೊಂದೆಡೆ ಈ ವಿಭಜನೆ ವಿರೋಧಿಸಿ ನಡೆದ ಪ್ರತಿಭಟನೆಗೆ ಆ.22ಕ್ಕೆ ಬರೋಬ್ಬರಿ 25 ವರ್ಷ. ಇದು ಗಡಿ ಜಿಲ್ಲೆ ಬೆಳಗಾವಿ ವಿಭಜನೆ ಹಾಗೂ ಅದಕ್ಕಾಗಿ ನಡೆದಿರುವ ಪರ ಮತ್ತು ವಿರೋಧದ ಹೋರಾಟಗಳ ಕಥೆ. ಎರಡೂವರೆ ದಶಕಗಳ ಈ ಅವಧಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಸರ್ಕಾರಗಳು ಬದಲಾಗಿವೆ. ಹೋರಾಟಗಾರರು ಬದಲಾಗಿದ್ದಾರೆ. ಇದಕ್ಕಾಗಿ ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಹಲವಾರು ಸಚಿವರು ಮತ್ತು ಶಾಸಕರು ಬಂದು …
Read More »ಚಿರತೆ ಸೆರೆಗೆ ಬೆಳಗಾವಿಯತ್ತ ಜೋಡಿ ಆನೆ
ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆ ಹಾಗೂ ಎಂಟು ಪರಿಣತ ಸಿಬ್ಬಂದಿಯ ತಂಡ ಬೆಳಗಾವಿಯತ್ತ ಹೊರಟಿದೆ. ಸಕ್ರೆಬೈಲ್ ಆನೆ ತರಬೇತಿ ಕ್ಯಾಂಪಿನಲ್ಲಿದ್ದ 20 ವರ್ಷ ವಯಸ್ಸಿನ ಅರ್ಜುನ ಹಾಗೂ 14 ವರ್ಷ ಪ್ರಾಯದ ಆಲೆ ಎಂಬ ಆನೆಗಳನ್ನು ಕರೆಸಲಾಗುತ್ತಿದೆ. ಈ ಎರಡೂ ಆನೆಗಳು ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿವೆ. …
Read More »
Laxmi News 24×7