Breaking News
Home / ಜಿಲ್ಲೆ / ಬೆಳಗಾವಿ (page 231)

ಬೆಳಗಾವಿ

ಮಿನಿ ರಣ ರಂಗ ವಾಗಲಿದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ

ಬೆಳಗಾವಿ-ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು ಹಿಂದೇಟು ಹಾಕುವ ಲಕ್ಷಣಗಳು ಕಾಣಿಸುತ್ತಿದ್ದು ಜಾತ್ಯಾತೀತ ಸಿದ್ಧಾಂತ ಎಂದು ಹೇಳಿಕೊಳ್ಳುವ ಆಮ್ ಆದ್ಮೀ‌..ದೆಹಲಿ ಬದಲಾ ಹೈ ಬೆಲಗಾಮ್ ಬದಲೇಗಾ ಎನ್ನುವ ಘೋಷಣೆಯೊಂದಿಗೆ ಪಾಲಿಕೆ ಚುನಾವಣೆಯಲ್ಲಿ ಎಂಟ್ರಿ ಹೊಡೆದಿದೆ. ಜೊತೆಗೆ ಅಕ್ಬರ್ ಓವೈಸಿಯ ಎಂಐಎಂ ಪಾರ್ಟಿಯೂ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ಸ್ಪರ್ದಿಸುವ ನಿರ್ಧಾರ ಕೈಗೊಂಡಿದೆ. ಎಂಐಎಂ,ಆಮ್ ಆದ್ಮಿ ಪಾರ್ಟಿಯ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವೂ ಬೆಳಗಾವಿ ಪಾಲಿಕೆ …

Read More »

ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇವಸ್ಥಾನಗಳ ಕಮೀಟಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಧನಸಹಾಯದ ಚೆಕ್ ಗಳನ್ನು ವಿತರಿಸಿದರು. ಗ್ರಾಮೀಣ ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ಲಕ್ಷ್ಮಿ ಹೆಬ್ಬಾಳಕರ್ ನೆರವು ನೀಡುತ್ತಿದ್ದಾರೆ. ಶ್ರೀ ಬೀರದೇವರ ದೇವಸ್ಥಾನಕ್ಕೆ 6.50 ಲಕ್ಷ ರೂ,ಗಳ ಪೈಕಿ ಮೊದಲ ಕಂತಾಗಿ 3.50 …

Read More »

ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ :

ಬೆಳಗಾವಿ –  ಬೆಳಗಾವಿ ನಗರದಲ್ಲಿ ನಾಲ್ಕು ದಿನಕ್ಕೊಮ್ಮೆ, ಕೆಲವು ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಬರುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಅಭಯ ಪಾಟೀಲ ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ  ಚಾಲನೆ ನೀಡಿದ್ದಾರೆ‌. ಮೂರು ವರ್ಷದ ಹಿಂದೆ ಈ ಯೋಜನೆ ರದ್ದಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾಗಿದ್ದು ಅಭಯ ಪಾಟೀಲ ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್ ಅವರ ನೆರವಿನಿಂದ, ಆಗಿನ …

Read More »

ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …

Read More »

ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

    ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಗಿಯದೇ ಬಿಜೆಪಿ ಶಾಸಕರು ಬೆಂಗಳೂರಿಗೆ ಬರುವಂತಿಲ್ಲ: ನಳಿನ್ ಕುಮಾರ್

ನಿಮ್ಮೆಲ್ಲರ ಮಾತಿನಂತೆ ಈಬಾರಿ ಪಕ್ಷದ ಚಿಹ್ನೆಯಡಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡುವ ನಿರ್ಧಾರ ನಾಯಕರದ್ದಲ್ಲ, ಕಾರ್ಯಕರ್ತರದ್ದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು ಬೆಳಗಾವಿ: ಮಂಗಳೂರಿನಲ್ಲಿ ಬಿಜೆಪಿ ಅಧಿಕಾರ ಹಿಡಿದಂತೆ ಬೆಳಗಾವಿಯಲ್ಲೂ ಬಿಜೆಪಿ ಅಧಿಕಾರ ಹಿಡಿದೇ ಹಿಡಿಯಲಿದೆ. ಚುನಾವಣೆಯಲ್ಲಿ ಒಂದೊಂದು ವಾರ್ಡ್ ಗೆ ಒಬ್ಬೊಬ್ಬ ಶಾಸಕರನ್ನು ನೇಮಿಸುತ್ತೇವೆ. ಹಾಕುತ್ತೇವೆ. ಸಭೆ ಸಮಾರಂಭಗಳನ್ನ ಮಾಡುವಂತಿಲ್ಲ. ಮಹಾನಗರ ಪಾಲಿಕೆ ಚುನಾವಣೆ ( Belagavi municipal corporation Election …

Read More »

ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಿಂದಾಗಿ ಬಿದ್ದಿರುವ ಮನೆಗಳ ಸರ್ವೆಕಾರ್ಯವನ್ನ ಕ್ಷೀಪ್ರಗತಿಯಲ್ಲಿ ಮುಗಿಸಬೇಕು. ಬಿದ್ದಿರುವ ಯಾವುದೇ ಮನೆಗಳು …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ

ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ  ಅಧಿಸೂಚನೆ ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.   ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ. ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Read More »

ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ

    ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ

ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ. ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು …

Read More »