ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …
Read More »ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ
ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …
Read More »ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಇಬ್ಬರಿಗೆ ಚಾಕು ಇರಿತ
ಬೆಳಗಾವಿ: ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ನಗರದ ಕಾಲೇಜು ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ನಗರದ ಸರ್ದಾರ್ ಮೈದಾನ ಪಕ್ಕದ ಕಾಲೇಜು ರಸ್ತೆಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದೆ. ನೋಡನೋಡುತ್ತಿದ್ದಂತೆ ಒಂದು ಗುಂಪಿನ ಯುವಕರು ಮತ್ತೊಂದು ಗುಂಪಿನ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಶ್ರೀಹರಿ ಮತ್ತು ಪರಶುರಾಮ್ ಎಂಬುವವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ರವಾನಿಸಿ …
Read More »ಖಾಸಗಿಕರಣದತ್ತ ಹೆಜ್ಜೆ ಇಟ್ಟಿದೆಯಾ KSRTC ? ಅನುಮಾನಕ್ಕೆ ಕಾರಣವಾಗಿದೆ ನಿಗಮದ ಈ ನಡೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ನಷ್ಟವನ್ನು ಒಂದಷ್ಟು ಕಡಿಮೆ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಬಸ್ ಗಳಿಗೆ ಟೋಲ್ ಗಳಲ್ಲಿ ಶುಲ್ಕ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗಿತ್ತು. ಇದರ ಮಧ್ಯೆ ನಿಗಮದ ನಡೆಯೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಖಾಸಗೀಕರಣದತ್ತ ಹೆಜ್ಜೆ ಇಟ್ಟಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. 350 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
*ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …
Read More »ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡ ನಿತೇಶ್ ಪಾಟೀಲ
ಪುಣ್ಯಕೋಟಿ ದತ್ತು ಯೋಜನೆಯಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಉಪ ನಿರ್ದೆಶಕ ಡಾ.ರಾಜೀವ್ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿಗಳು ಹಸು ದತ್ತು ಪಡೆಯುವ ಮೂಲಕ ಇತರರಿಗೂ ಸ್ಫೂರ್ತಿಯಾಗಿದ್ದಾರೆ. ಇದೇ ರೀತಿ ಸಾರ್ವಜನಿಕರು ಕೂಡ ಜಾನುವಾರುಗಳನ್ನು ದತ್ತು ಸ್ವೀಕರಿಸುವ ಮೂಲಕ ಪುಣ್ಯಕೋಟಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. ದೇಣಿಗೆ ನೀಡಲು ಅಥವಾ ದತ್ತು ಪಡೆಯಲು ಬಯಸುವವರು …
Read More »ಲಕ್ಷ್ಮೀ ಹೆಬ್ಬಾಳ್ಕರ್ ಬೋಗಸ್ಗಿರಿ ಮಾಡಿ, ಕುಕ್ಕರ್ ಕೊಟ್ಟು ಕಳೆದ ಬಾರಿ ಆರಿಸಿ ಬಂದಿದ್ದಾರೆ.: ಶಿವಾಜಿ ಸುಂಠಕರ್
ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಳು ಮಜುಕರ್ ಕಾಂಗ್ರೆಸ್ ಪಕ್ಷ ಸೇರಿದ್ದ ವಿಚಾರ ಸಧ್ಯ ಟ್ವಿಸ್ಟ್ ಪಡೆದುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಂಇಎಸ್ ಮುಖಂಡ ಶಿವಾಜಿ ಸುಂಠಕರ್ ಏಕಾಏಕಿ ಕರೆದುಕೊಂಡು ಹೋಗಿ ಕಾಂಗ್ರೆಸ್ ಶಾಲು, ಮಾಲೆ ಹಾಕಿದ್ದಾರೆ. ಇದೆಲ್ಲಾ ಸುಳ್ಳು ಬಾಳು ಮಜುಕರ್ ಕಾಂಗ್ರೆಸ್ ಸೇರಿಲ್ಲ, ಮುಂದೆಯೂ ಕಾಂಗ್ರೆಸ್ ಸೇರುವುದಿಲ್ಲ ಎಂದಿದ್ದಾರೆ. ಹೌದು ಇತ್ತಿಚಿಗೆ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂಇಎಸ್ ಮುಖಂಡ ಬಾಳು ಮಜುಕರ್ …
Read More »ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್
ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ …
Read More »ನಿಯೋಜನೆಯಲ್ಲಿ ಬಿಮ್ಸ್ ವಿವಾದಕ್ಕೆ ಗುರಿ
ಬೆಳಗಾವಿ: ಸುಧಾರಣೆಯ ವಿಷಯದಲ್ಲಿ ದೇಶದಲ್ಲಿ 12ನೇ ಸ್ಥಾನಗಳಿಸಿ ಹೆಮ್ಮೆಯ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಈಗ ವೈದ್ಯರ ನಿಯೋಜನೆ ವಿಷಯದಲ್ಲಿ ವಿವಾದಕ್ಕೆ ಗುರಿಯಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿರುವ ತಜ್ಞ ವೈದ್ಯರನ್ನು ಜಿಲ್ಲಾಸ್ಪತ್ರೆಗೆ ನಿಯೋಜನೆ ಮಾಡುತ್ತಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದರೆ, ಆರೋಗ್ಯ ಇಲಾಖೆಯ ಈ ಕ್ರಮ ಸ್ಥಳೀಯ ಶಾಸಕರ ಕಂಗೆಣ್ಣಿಗೆ ಗುರಿಯಾಗಿದೆ. ಇದಕ್ಕೆ ಈಗ ಖಾನಾಪುರ ತಾಲೂಕು ಆಸ್ಪತ್ರೆ ಹೊಸ ಸೇರ್ಪಡೆಯಾಗಿದೆ. …
Read More »ಬೆಳಗಾವಿ ಜಿಲ್ಲೆ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ
ಚಿಕ್ಕೋಡಿ: ಕರ್ನಾಟಕ, ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ಪರಿಶೀಲನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಮಕ್ಕಳು ಬಾಂಬ್ ಎಂದು ತಿಳಿಯದೇ ಗ್ರೆನೇಡ್ನೊಂದಿಗೆ …
Read More »
Laxmi News 24×7