ಬೆಳಗಾವಿ: ತಾಲೂಕಿನ ಹಿಂಡಲಗಾ-ಸುಳಗಾ ರೋಡ್ನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಹಿಂಡಲಗಾ – ಸುಳಗಾ ರೋಡನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಹಿಳಾ ಪೊಲೀಸ್ …
Read More »ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ
ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …
Read More »ಬಿಜೆಪಿಯವರಿಗೆ ತಿರಂಗಾ ಝಂಡಾ ಹಾರಿಸೋ ಅಧಿಕಾರ ಇಲ್ಲ: ಸತೀಶ ಜಾರಕಿಹೊಳಿ
ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾಧ್ಯಂತ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಪರಿವರ್ತನೆ ಮಾಡಿ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಗೋಕಾಕ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಮೌಢ್ಯತೆ ಆಚರಿಸುವುದು ಸರಿಯಲ್ಲ ಎಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಆದರೆ ಇನ್ನು ಕೂಡ ಜನರು ಮೂಢನಂಬಿಕೆ, ಮೌಢ್ಯತೆಯಲ್ಲಿಯೇ ಮುಳುಗಿದ್ದಾರೆ. ಇದನ್ನು ಬದಲಾವಣೆ …
Read More »ತವರಿನ ದೇವತೆಗೆ ಕುರಿಮರಿ, ಕೋಳಿಪಿಳ್ಳಿ ಅರ್ಪಿಸಿ ಹರಕೆ ತೀರಿಸಿದ ಮಹಿಳೆಯರು
ಬೆಳಗಾವಿ: ಇಲ್ಲಿನ ವಡಗಾವಿಯ ಪಾಟೀಲ ಗಲ್ಲಿಯಲ್ಲಿರುವ ಮಂಗಾಯಿ ದೇವಿ ಜಾತ್ರೆಗೆ ಮಂಗಳವಾರ ಅಪಾರ ಸಂಖ್ಯೆಯ ಭಕ್ತರ ನಡುವೆ ಚಾಲನೆ ದೊರೆಯಿತು. ‘ತವರು ಮನೆಯ ದೇವತೆ’ ಎಂದೇ ಪರಿಗಣಿಸಲಾಗುವ ಈ ದೇವಿಯ ಜಾತ್ರೆಗೆ ಹೆಣ್ಣು ಮಕ್ಕಳೇ ಹೆಚ್ಚಾಗಿ ಸೇರುತ್ತಾರೆ. ಬೆಳಗಾವಿ ಜಿಲ್ಲೆಯಿಂದ ಬೇರೆ ಬೇರೆ ಊರುಗಳಿಗೆ ಮದುವೆಯಾಗಿ ಹೋದ ಬಹುಪಾಲು ಹೆಣ್ಣುಮಕ್ಕಳು ಈ ಜಾತ್ರೆಗೆ ಬರುವುದು ಸಂಪ್ರದಾಯ. ಐದು ದಿನ ನಡೆಯುವ ಉತ್ಸವದಲ್ಲಿ ಜಿಲ್ಲೆ, ನೆರೆಯ ಜಿಲ್ಲೆ, ಗೋವಾ, ಮಹಾರಾಷ್ಟ್ರದಿಂದ …
Read More »ಸುತಗಟ್ಟಿ ಕ್ರಾಸ್: ರಸ್ತೆ ತಡೆದು ಪ್ರತಿಭಟನೆ
ಸವದತ್ತಿ: ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಹಿಟ್ಟಣಗಿ, ಸುತಗಟ್ಟಿ, ಗೋವನಕೊಪ್ಪ ಕೆ.ವೈ, ಭಮಗುಂಡಿಕೊಪ್ಪ ಮತ್ತು ಏಣಗಿ ಗ್ರಾಮಸ್ಥರು ಹಿಟ್ಟಣಗಿ ಗ್ರಾಮದಿಂದ ಪಾದಯಾತ್ರೆ ನಡೆಸಿ ಸುತಗಟ್ಟಿ ಕ್ರಾಸ್ನಲ್ಲಿ ಸುಮಾರು 5 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಜಿಲ್ಲಾ ಪಂಚಾಯಿತಿಯಿಂದ ನಡೆದಿರುವ ₹ 60 ಲಕ್ಷ ವೆಚ್ಚದ ರಸ್ತೆ ಕಾಮಗಾರಿ …
Read More »ಸಾರ್ವಜನಿಕರ ಟೀಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಆರ್ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.
ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು ಆರ್ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಹೌದು ಕಳೆದ 15 ದಿನಗಳ ಹಿಂದೆ ಆರ್ಪಿಡಿ ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು. …
Read More »ಯಾವಾಗ್ಯಾವಾಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗಲ್ವೋ ಆವಾಗ ಈ ಕೂಗು ಬರುತ್ತೆ, ನಾನು ಕೂಗು ಎತ್ತೋದು ನಿಜ.
ಸಿಎಂ ಸ್ಥಾನಕ್ಕೆ ಟವೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಉಮೇಶ ಕತ್ತಿ ಸಿಎಂ ಸ್ಥಾನದ ಕನಸಲ್ಲೆ ತೇಲಾಡುತ್ತಿದ್ದಾರೆ. ನಸೀಬ್ನಲ್ಲಿದ್ದರೆ ಸಿಎಂ ಸ್ಥಾನ ಒಂದಿನ ಬರಬಹುದು ಎಂದು ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟರು. ವಿಜಯಪುರ ಜಿಲ್ಲೆಯ ಆಲಮಟ್ಟಿ ಯಲ್ಲಿ ಮಾದ್ಯಮಗಳ ಜೊತೆಯಲ್ಲಿ ಮಾತನಾಡಿ ನನಗಿನ್ನು 60 ವಯಸ್ಸು, 15 ವರ್ಷ ಇದೆ ಬಿಜೆಪಿ ರೂಲ್ ನಂತೆ, ಇನ್ನು 15 ವರ್ಷ ಶಾಸಕನಾಗಿ ಇರ್ತಿನಿ, ಟೈಂ ಬರಬಹುದು. ನಾವು ದಿನ ಬೇಡಿದರೇ …
Read More »ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ
ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್ನಲ್ಲಿ ಸ್ವಾಗತ ಮಾಡಿದರು. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು …
Read More »ಜನನ, ಮರಣ ನೋಂದಣಿ ಕಾಯ್ದೆತಿದ್ದುಪಡಿ ರದ್ದುಗೊಳಿಸಲು ಆಗ್ರಹ
ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು …
Read More »ಮೂರು ತಲೆಮಾರಿನಿಂದ ಈ ಕುಟುಂಬ ದೇಶ ಸೇವೆಗೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ.
ಕಾರ್ಗಿಲ್ ಯುದ್ಧ ಎನ್ನುತ್ತಲೇ ಎಂಥವರ ಮನದಲ್ಲೂ ರೋಮಾಂಚನ ಮೂಡುತ್ತದೆ. ಎದುರಾಳಿಗಳೊಂದಿಗೆ ನಮ್ಮ ಸೈನಿಕರು ಧೈರ್ಯದಿಂದ ಸೆಣಸುವ, ಎದುರಾಳಿಗಳನ್ನು ಸದೆಬಡಿಯುವ ದೃಶ್ಯಗಳು ಕಣ್ಣೆದುರು ಬಂದುನಿಲ್ಲುತ್ತದೆ. ತಮ್ಮ ಕುಟುಂಬದ ಹಿತ ಬದಿಗೊತ್ತಿ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡು ದೇಶಕ್ಕಾಗಿ ಪ್ರಾಣವನ್ನೇ ತೆತ್ತ ಸೈನಿಕರು ನಮ್ಮ ನಾಡಿನಲ್ಲಿದ್ದಾರೆ. ಅಂತಹವರಲ್ಲಿ ಬೆಳಗಾವಿಯ ಕುಟುಂಬವೂ ಒಂದಿದೆ.ಸುಮಾರು ಮೂರು ತಲೆಮಾರಿನವರೆಗೆ ದೇಶ ಸೇವೆ ಮಾಡುತ್ತಿದೆ. ಇತ್ತ ಕಾಗ್ರಿಲ್ ಯುದ್ಧದಲ್ಲಿ ಮಗನನ್ನು ಕಳೆದುಕೊಂಡ ತಾಯಿ ಹೇಳೊದಾದರೂ ಏನು ಭಾರತೀಯ ಸೇನೆಯಲ್ಲಿ ಸುಧೀರ್ಘವಾಗಿ …
Read More »