Breaking News

ಬೆಳಗಾವಿ

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ನಿಪ್ಪಾಣಿ (ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಮಾಂದೂರು ಗ್ರಾಮದ ಬಳಿ ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಶನಿವಾರ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಂದೂರಿನ ನಿವಾಸಿ ಶಿವಾಜಿ ಕೊರವಿ (54) ಮೃತಪಟ್ಟವರು. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಗ್ರಾಮದ ಹೊರವಲಯದಲ್ಲಿ ದೂಧಗಂಗಾ ನದಿ ಧುಮ್ಮಿಕ್ಕುತ್ತಿದೆ. ಶನಿವಾರ ಬೆಳಿಗ್ಗೆ ಮೀನು ಹಿಡಿಯಲು ನದಿಗೆ ಇಳಿದಿದ್ದ ಶಿವಾಜಿ ನೋಡನೋಡುತ್ತಿದ್ದಂತೆ ನೀರಿನ ಸೆಳವಿಗೆ ಸಿಕ್ಕು ತೇಲಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಹಾಗೂ …

Read More »

ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಭರ್ತಿಗೆ ನಾಲ್ಕೇ ಅಡಿ ಬಾಕಿ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ.   2,475 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಶುಕ್ರವಾರದ ಬೆಳಿಗ್ಗೆವರೆಗೆ 2,471 ಅಡಿ ನೀರು ಸಂಗ್ರಹವಾಗಿದೆ. ‘ಪ್ರತಿವರ್ಷ ಜುಲೈ ಅಂತ್ಯಕ್ಕೆ ಭರ್ತಿಯಾಗುತ್ತಿತ್ತು. ಆದರೆ, ಖಾನಾಪುರ, ಬೆಳಗಾವಿ ತಾಲ್ಲೂಕು ಹಾಗೂ ಮಹಾರಾಷ್ಟ್ರದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿರುವುದರಿಂದ …

Read More »

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಜಿಲ್ಲೆಗೆ ಬರದೇ, ಎಲ್ಲೋ ಕುಳಿತ ಉಸ್ತುವಾರಿ ಸಚಿವ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಬರದೇ, ಎಲ್ಲೋ ಕುಳಿತು ಮಾತನಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿ ಕಾರಿದರು.   ‘ಗಡಿ ಜಿಲ್ಲೆಯಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದೆ. ಈಗಾಗಲೇ ಶಾಲೆ, ಮನೆಗಳ ಕಟ್ಟಡಗಳೂ ಕುಸಿದಿವೆ. ಜೀವ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಗೋವಿಂದ ಕಾರಜೋಳ …

Read More »

ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ

ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ. ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ. ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, …

Read More »

ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಮನೆಗೆ ನೀರು ನುಗ್ಗಿ ತೊಂದರೆ, ಶಾಸಕರ ವಿರುದ್ಧ ಆಕ್ರೋಶ

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಉಜ್ವಲ್ ನಗರದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಹೈವೆ ಸೇರಿದಂತೆ ಸರ್ವೀಸ್ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಅಕ್ಕ ಪಕ್ಕದ ನಿವಾಸಿಗಳ ಮನೆಗೆ ನೀರು ನುಗ್ಗಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದು ವಾಹನ ಸವಾರರ ಕಷ್ಟ ಹೇಳತೀರದ್ದಾಗಿದೆ. ಇನ್ನು …

Read More »

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಫಲನುಭವಿಗಳಿಗೆ ಭಾಗ್ಯಲಕ್ಷಿ ಬಾಂಡಗಳನ್ನು ವಿತರಣೆ ಮಾಡಿದ ಶಾಸಕ ಅನಿಲ ಬೆನಕೆ :

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಶನಿವಾರದಂದು ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃಧ್ದಿ ಯೋಜನೆಯಡಿ ಬೆಳಗಾವಿ ನಗರದ ಬಡಕಲ ಗಲ್ಲಿಯ ಬನಶಂಕರಿ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪಾ ರವರ ಮಹತ್ವದ ಯೋಜನೆಯಾದ ಭಾಗ್ಯಲಕ್ಷಿö್ಮÃ ಬಾಂಡಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.   ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು, ಹೆಣ್ಣು ಮಕ್ಕಳ ಭದ್ರತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ …

Read More »

ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …

Read More »

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ಖಾನಾಪುರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದ ಮರ: ತೆರವುಗೊಳಿಸದ ಅಧಿಕಾರಿಗಳ ನಿರ್ಲಕ್ಷ

ಖಾನಾಪುರ ತಾಲೂಕಿನ ಕಡತನ ಬಾಗೇವಾಡಿಯಿಂದ ಬೇಕವಾqಗೆÀ ಹೋಗುವ ರಸ್ತೆ ಮೇಲೆ ಪಕ್ಕದ ಗಿಡ ಮರಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯ ಧೋರಣೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಹೌದು ಜೂನ್ ತಿಂಗಳಿನಿಂದ ಅಗಸ್ಟ್ ತಿಂಗಳವರೆಗೆ ಅತಿ ಹೆಚ್ಚು ಮಳೆಗಾಲದ ದಿನಗಳು, ಈ ದಿನಗಳಲ್ಲಿ ರಸ್ತೆ ಪಕ್ಕದಲ್ಲಿರುವ ಮರಗಳು ರಸ್ತೆಯ ಮೇಲೆ ಬಿದ್ದು ಸಾರ್ವಜನಿಕರಿಗೆ ತೊಂದರೆಗಳಾಗುವುದು ಜಾಸ್ತಿ. ಆದರೆ ಈ ರೀತಿ ಆಗಬಹುದಾದ …

Read More »