Breaking News

ಬೆಳಗಾವಿ

ಸ್ಮಾರ್ಟ್‌ ಸಿಟಿ ಕೆಲಸ ನಿಗದಿತ ವೇಳೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್‌ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಸೂಚನೆ ನೀಡಿದರು. ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ಬೆಳಗಾವಿಯಲ್ಲಿ ಅರ್ಧಂಬರ್ಧ ಸ್ಮಾರ್ಟ್‌ ಎಂಬ ಶೀರ್ಷಿಕೆಯಡಿ ಉದಯವಾಣಿಯಲ್ಲಿ ವಿಶೇಷ ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಕಾಮಗಾರಿ ಪರಿಶೀಲಿಸಿದ್ದು ವಿಶೇಷವಾಗಿತ್ತು. ಸಿಬಿಟಿ ಪಕ್ಕದ ಜಾಗಕ್ಕೆ ಸಂಬಂಧಿಸಿದ …

Read More »

ಹಿಡಕಲ್‌ ಡ್ಯಾಂಗೆ ಒಂದೇ ದಿನ 8 ಅಡಿ ನೀರು

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಅದರೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಆತಂಕ ಪಡುವಷ್ಟು ಪ್ರವಾಹದ ಸ್ಥಿತಿ ಎದುರಾಗಿಲ್ಲ.   ಮಹಾರಾಷ್ಟ್ರದ ಅಂಬೋಲಿ ಮತ್ತು ಚಂದಗಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಹಿಡಕಲ್‌ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಎಂಟು ಅಡಿಗಳಷ್ಟು ಏರಿಕೆಯಾಗಿದೆ. ಘಟಪ್ರಭಾ ನದಿಗೆ ಈಗ …

Read More »

ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೈನಿಕನಿಗೆ ಬೆಳಗಾವಿ ಎಂಎಲ್‌ಐಆರ್‌ಸಿ ಯೋಧರಿಂದ ಅಂತಿಮ ನಮನ

ಬೆಳಗಾವಿ ತಾಲೂಕಿನ ಬೋಕನೂರ್ ಕ್ರಾಸ್ ಹತ್ತಿರ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯೋಧನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.   ಹೌದು ರಸ್ತೆ ಅಪಘಾತದಲ್ಲಿ ಸೈನಿಕನೋರ್ವ ದುರ್ಮರಣ ಹೊಂದಿದ್ದಾನೆ. ಮೃತಬ ವ್ಯಕ್ತಿಯನ್ನು ಓಂಕಾರ ಮಹಾದೇವ ಹಿಂಡಲಗೇಕರ (೨೨) ಎಂದು ಗುರುತಿಸಲಾಗಿದೆ. ಓಂಕಾರ ಹಿಂಡಲಗೇಕರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗುಂದಿ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಬೋಕನೂರ ಕ್ರಾಸ್ ಹತ್ತಿರ ನಿಯಂತ್ರಣ ಕಳೆದುಕೊಂಡು ಕಾರ ಮರಕ್ಕೆ …

Read More »

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …

Read More »

ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ 280 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ ವಿತರಣೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. …

Read More »

ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಪ್ರಾಣವನ್ನೂ ಲೆಕ್ಕಿಸದೇ ವಾಹನ ಸವಾರರ ಸಂಚಾರ

ಭಾರೀ ಮಳೆಯ ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಮೇಲೆ ಬೈಕ್ ಸವಾರರು ಯಾವುದೇ ಭಯವಿಲ್ಲದೇ ಸಂಚಾರ ಮಾಡುತ್ತಿದ್ದು, ಜೀವವನ್ನು ಲೆಕ್ಕಿಸದೇ ಮುಳುಗಡೆಯಾಗಿರುವ ಸೇತುವೆಯ ಮೇಲೆ ಎಗ್ಗಿಲ್ಲದೇ ಸಂಚಾರ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಮುಳುಗಡೆಯಾದ ಗೋಕಾಕ- ಶಂಗಳಾಪೂರ್ ಸೇತುವೆ ಮೇಲೆ ಭಯವಿಲ್ಲದೇ ವಾಹನ,ಹಾಗೂ ಬೈಕ್‌ಗಳ ಸವಾರರು ಸಂಚಾರ ಮಾಡುತ್ತಿದ್ದಾರೆ. ಗೋಕಾಕ ಪಟ್ಟಣದ ಹೊರವಲಯದಲ್ಲಿರುವ ಈ ಸೇತುವೆ ಮಳೆ ಹೆಚ್ಚಾಗಿ ಸುರಿದಿದ್ದರಿಂದ ಗರಿಯುವ ನೀರಿನ ಪ್ರಮಾಣ ಹೆಚ್ಚಾಗಿ ಸೇತುವೆ ಜಲಾವೃತಗೊಂಡಿದೆ. …

Read More »

B.I.M.S ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ : ರೆಡ್ ಹ್ಯಾಂಡ್‍ಆಗಿ ಹಿಡಿದು ಪೊಲೀಸರಿಗೆ ಒಪ್ಪಸಿದ ಸಿಬ್ಬಂದಿ,

ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರೋಗಿಗಳ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ರೋಗಿಗಳ ಸಂಬಂಧಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಹಣ, ಮೊಬೈಲ್ ಕದಿಯುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆರೋಪಿ ಮಾರುತಿ ಮಂಗಸೂಳಿ ಎಂಬಾತನನ್ನು ಹಿಡಿದು ಎಪಿಎಂಸಿ  ಪೊಲೀಸರ  …

Read More »

ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ

ಬೆಳಗಾವಿ: ಕಳೆದೊಂದು ವಾರದಿಂದ ಕುಂದಾನಗರಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಖಾನಾಪುರ ತಾಲೂಕಿನ ಗುರ್ಲಗಂಜಿ ಗ್ರಾಮದ ಶಾಲಾ ಕೊಠಡಿಯೊಂದು ಕುಸಿದು ಬಿದ್ದಿದೆ. ಇನ್ನೊಂದೆಡೆ, ಮುಡೇವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತವಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಖಾನಾಪೂರ ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಶಾಲಾ ಗೋಡೆಗಳು ಮಳೆ ಅಬ್ಬರಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ …

Read More »

ಕುಸಿಯುತ್ತಿದೆ ದೊಡ್ಡ ಕೆರೆ ತಡೆಗೋಡೆ

ಎಂ.ಕೆ.ಹುಬ್ಬಳ್ಳಿ: ಬೆಳೆದ ಗಿಡಕಂಟಿಗಳು, ತಿಪ್ಪೆ ಗುಂಡಿಗಳು, ಬೀಳುತ್ತಿರುವ ತಡೆಗೋಡೆಗಳು, ತ್ಯಾಜ್ಯಗಳನ್ನು ಎಸೆಯುವ ಜಾಗೆಯಾಗಿದೆ ಇಟಗಿ ಗ್ರಾಮದ ದೊಡ್ಡ ಕೆರೆ. ಒಂದು ಕಾಲಕ್ಕೆ ಈ ಕೆರೆ ನೀರನ್ನು ದೇವರ ಪೂಜೆಗೂ, ದಿನಬಳಕೆಗೂ ಉಪಯೋಗಿಸುತ್ತಿದ್ದರು ಎಂದರೆ ಈಗ ಯಾರೂ ನಂಬಲು ಸಾಧ್ಯವಿಲ್ಲ.   ಸಣ್ಣ ನೀರಾವರಿ ಇಲಾಖೆ ಉಸ್ತುವಾರಿಯಲ್ಲಿರುವ ಸುಮಾರು 53 ಎಕರೆ 15 ಗುಂಟೆ ಈ ಕೆರೆಯತ್ತ ಯಾವೋಬ್ಬ ಅಧಿ ಕಾರಿಗಳು ಗಮನ ಹರಿಸುತ್ತಿಲ್ಲ. ಮಳೆಗಾಲ ಮುಗಿದು ಮತ್ತೆ ಮತ್ತೆ ಬಂದರೂ, ಕೆರೆ …

Read More »

ಅಮರನಾಥದಲ್ಲಿ ಹವಾಮಾನ ವೈಪರೀತ್ಯಕ್ಕೆ ಹೈರಾಣಾದ ಬೆಳಗಾವಿಯ ಪ್ರವಾಸಿಗರು

ಬೆಳಗಾವಿ: ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಬೆಳಗಾವಿಯ 32 ಜನರ ತಂಡ ಹವಾಮಾನ ವೈಪರೀತ್ಯದಿಂದಾಗಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶೇಷನಾಗದಿಂದ ಮರಳಿ ಪೆಹಲಗಾಮ್‌ ಎಂಬ ಪ್ರದೇಶಕ್ಕೆ ವಾಪಸ್ಸಾಗಿದ್ದು, ಮೇಘ ಸ್ಪೋಟ ಆಗಿ ಗುಡ್ಡ ಕುಸಿತಗೊಂಡಿರುವ ಮಾರ್ಗ ಬಂದ್‌ ಮಾಡಿದ್ದರಿಂದ ದರ್ಶನಕ್ಕಾಗಿ ಇನ್ನೂ 2-3 ದಿನ ಕಾಯಬೇಕಾಗಿದೆ.   ಶೇಷನಾಗ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈ ಪ್ರದೇಶದಲ್ಲಿ ಆಮ್ಲಜನಕ ಕೊರತೆ ಉಂಟಾಗುತ್ತಿದ್ದು, ಹೀಗಾಗಿ ಆರೋಗ್ಯದಲ್ಲಿ ಏರುಪೇರು …

Read More »